ಸಡಗರ-ಸಂಭ್ರಮದ ಯುಗಾದಿ ಹಬ್ಬ ಆಚರಣೆ

ಶಿವಮೊಗ್ಗ, ಮಾ. 22: ಶಿವಮೊಗ್ಗ ನಗರದಲ್ಲಿ ಬುಧವಾರ ಜೆಸಿಐ ಶಿವಮೊಗ್ಗ ಶಾಶ್ವತಿ ಘಟಕದಿಂದ ಯುಗಾದಿ ಹಬ್ಬವನ್ನು ಅತ್ಯಂತ ಸಡಗರ – ಸಂಭ್ರಮದಿಂದ ಆಚರಿಸಲಾಯಿತು.

ಶಿವಮೊಗ್ಗದ ಅಮೃತ್ ಲೇಔಟ್ ನಲ್ಲಿರುವ ಸಂಘದ ಅಧ್ಯಕ್ಷೆ ಡಾ. ಶಾಂತಾ ಸುರೇಂದ್ರ ಅವರ ನಿವಾಸದಲ್ಲಿ ಹಬ್ಬ ಆಚರಣೆ ಮಾಡಲಾಯಿತು. ಈ ವೇಳೆ ಸಂಘದ ಸದಸ್ಯರು ಪರಸ್ಪರ ಬೇವು-ಬೆಲ್ಲ ವಿತರಣೆ ಮಾಡಿದರು.

ನಂತರ ಯುಗಾದಿ ಹಬ್ಬಕ್ಕೆ ಸಂಬಂಧಿಸಿದ ಗೀತೆಗಳ ಗಾಯನ ನಡೆಯಿತು. ಈ ವೇಳೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.

ಈ ವೇಳೆ ಸಂಘದ ಅಧ್ಯಕ್ಷೆ ಶಾಂತಾ ಸುರೇಂದ್ರ ಸೇರಿದಂತೆ ಪ್ರಮುಖರು ಹಬ್ಬದ ಮಹತ್ವದ ಕುರಿತಂತೆ ಮಾತನಾಡಿದರು.

Previous post ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದತ್ತ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಚಿತ್ತ..?!
Next post <strong>ಪುತ್ರಿಯ ಪರ ಕಾಗೋಡು ತಿಮ್ಮಪ್ಪ ತಂತ್ರ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರತಿತಂತ್ರ?!</strong>