
shimoga | ಶಿವಮೊಗ್ಗ : ಸ್ನೇಹಿತರ ನಡುವೆ ಕಲಹ – ಓರ್ವನ ಕೊಲೆಯಲ್ಲಿ ಅಂತ್ಯ!
ಶಿವಮೊಗ್ಗ (shivamogga), ಏ. 2: ಸ್ನೇಹಿತರ ನಡುವೆ ಏರ್ಪಟ್ಟ ಕಲಹ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರಕೊಪ್ಪದಲ್ಲಿ ಏ. 2 ರಂದು ನಡೆದಿದೆ.
ದೇವರಾಜ್ (31) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ವೆಂಕಟೇಶ್ (36) ಆರೋಪಿಯಾಗಿದ್ದು, ಈತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ವೆಂಕಟೇಶ್ ಹಾಗೂ ಕೊಲೆಗೀಡಾದ ದೇವರಾಜ್ ಸ್ನೇಹಿತರಾಗಿದ್ದಾರೆ. ಇಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿದೆ. ಇದು ವಿಕೋಪಕ್ಕೆ ತಿರುಗಿ ಇಬ್ಬರ ನಡುವೆ ಕೈ ಕೈ ಮಿಲಾವಣೆಯಾಗಿದೆ.
ಈ ವೇಳೆ ವೆಂಕಟೇಶ್ ಗುದ್ದಲಿಯಿಂದ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡ ದೇವರಾಜ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.j
Shivamogga, Apr. 2: An incident that ended in the murder of a person following a dispute between friends took place on Apr. 2 in Tyavarakoppa, on the outskirts of Shivamogga city.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 25 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 25: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 25-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...
shimoga | ಶಿವಮೊಗ್ಗ : ಅಂತಿಮ ಯಾತ್ರೆಗೆ ಜನಸಾಗರ.. ಮುಗಿಲು ಮುಟ್ಟಿದ ಆಕ್ರಂದನ..!
shimoga | Manjunath Rao who was killed in a terrorist attack: Arrangements made for the last rites at Vijayanagara residence in Shivamogga
shimoga | ಭಯೋತ್ಪಾದಕ ಗುಂಡೇಟಿಗೆ ಬಲಿಯಾದ ಮಂಜುನಾಥ್ ರಾವ್ : ಶಿವಮೊಗ್ಗದ ವಿಜಯನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
shimoga|ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 24 ರ ತರಕಾರಿ ಬೆಲೆಗಳವಿವರ
ಶಿವಮೊಗ್ಗ (shivamogga), ಏ. 24: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 24-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 23 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 23: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 23-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...