
shimoga | ಬೆಂಗಳೂರಿಗೆ ಆಗಮಿಸಿದ ಪಾರ್ಥಿವ ಶರೀರ : ಕೆಲ ಗಂಟೆಗಳಲ್ಲಿಯೇ ಶಿವಮೊಗ್ಗಕ್ಕೆ
ಶಿವಮೊಗ್ಗ (shivamogga), ಏ. 24: ಕುಟುಂಬ ಸದಸ್ಯರೊಂದಿಗೆ ಪ್ರವಾಸಕ್ಕೆ ತೆರಳಿದ್ದ ವೇಳೆ, ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ತುತ್ತಾದ, ಶಿವಮೊಗ್ಗದ ವಿಜಯನಗರ ಬಡಾವಣೆಯ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರವು ಏ. 24 ರ ಮುಂಜಾನೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತರಲಾಗಿದೆ.
ದೆಹಲಿಯಿಂದ ಇಂಡಿಗೋ ವಿಮಾನದಲ್ಲಿ ಮುಂಜಾನೆ 3:30 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶಿವಮೊಗ್ಗದ ಮಂಜುನಾಥ್ ರಾವ್, ಬೆಂಗಳೂರಿನ ಭರತ್ ಭೂಷಣ್ ಪಾರ್ಥಿವ ಶರೀರ ತರಲಾಗಿದೆ.
ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರವನ್ನು ರಸ್ತೆ ಮಾರ್ಗದ ಮೂಲಕ ಶಿವಮೊಗ್ಗಕ್ಕೆ ತರಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಈಗಾಗಲೇ ವಿಜಯ ನಗರ ಬಡಾವಣೆಯಲ್ಲಿರುವ ಮಂಜುನಾಥ್ ರಾವ್ ಅವರ ನಿವಾಸ ಆವರಣದಲ್ಲಿ, ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
ಪರಿಹಾರ ಘೋಷಣೆ : ಮೃತ ಮಂಜುನಾಥ್ ರಾವ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
ಸ್ವಯಂಪ್ರೇರಿತ ಬಂದ್ : ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರ ಮೆರವಣಿಗೆ ಹಿನ್ನೆಲೆಯಲ್ಲಿ, ಏ. 24 ರಂದು ಅರ್ಧ ದಿನ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ.
ವ್ಯಾಪಕ ಆಕ್ರೋಶ : ಮಂಜುನಾಥ್ ರಾವ್ ಅವರನ್ನು ಗುಂಡಿಕ್ಕಿ ಕೊಂದ ಉಗ್ರರ ಪೈಶಾಚಿಕ ಕೃತ್ಯಕ್ಕೆ, ಶಿವಮೊಗ್ಗದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿವಿಧ ಸಂಘಸಂಸ್ಥೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.
Shivamogga, Apr. 24: The mortal remains of Manjunath Rao of Vijayanagara block, Shivamogga, who was shot dead by terrorists in Pahalgam, Jammu and Kashmir, while on a trip with his family members, were brought to Bengaluru in a special flight on the morning of Apr. 24.
Widespread outrage: There has been widespread outrage in Shivamogga over the heinous act of terrorists who shot dead Manjunath Rao. Various organizations are taking to the streets to protest.