
shimoga | ಶಿವಮೊಗ್ಗ : ಅಂತಿಮ ಯಾತ್ರೆಗೆ ಜನಸಾಗರ.. ಮುಗಿಲು ಮುಟ್ಟಿದ ಆಕ್ರಂದನ..!
ಶಿವಮೊಗ್ಗ (shivamogga), ಏ. 24: ಜಮ್ಮುಕಾಶ್ಮೀರದ ಪ್ರವಾಸಕ್ಕೆ ತೆರಳಿದ್ದ ವೇಳೆ ಪಹಲ್ಗಾಮ್ ಸಮೀಪ ಭಯೋತ್ಪಾದಕರ ಗುಂಡೇಟಿಗೆ ಬಲಿಯಾದ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರವು ಏ. 24 ರಂದ ಮಧ್ಯಾಹ್ನ ಶಿವಮೊಗ್ಗ ನಗರದ ರೋಟರಿ ಚಿತಾಗಾರದಲ್ಲಿ ನೆರವೇರಿತು.
ಬೆಳಿಗ್ಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪಾರ್ಥಿವ ಶರೀರವನ್ನು, ಆಂಬುಲೆನ್ಸ್ ಮೂಲಕ ನಗರಕ್ಕೆ ತರಲಾಯಿತು. ನಗರದ ಹೊಳೆ ಬಸ್ ನಿಲ್ದಾಣ ಸಮೀಪದಿಂದ ಬೈಕ್ ರ್ಯಾಲಿ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ವಿಜಯನಗರ ಬಡಾವಣೆಯಲ್ಲಿರುವ ನಿವಾಸಕ್ಕೆ ಕೊಂಡೊಯ್ಯಲಾಯಿತು.
ಶೋಕ : ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಕುಟುಂಬ ವರ್ಗದವರ, ಬಂಧುಬಳಗದವರ ಆಕ್ರಂದನ ಮುಗಿಲು ಮುಟ್ಟಿತ್ತು. ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದುಬಂದಿತ್ತು. ಯಾವುದೇ ಗೊಂದಲ ಗಡಿಬಿಡಿಗೆ ಆಸ್ಪದವಾಗದಂತೆ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು.
ನಂತರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಅಂತ್ಯ ಸಂಸ್ಕಾರಕ್ಕೆ ಕೊಂಡೊಯ್ಯಲಾಯಿತು. ಐಬಿ ಸರ್ಕಲ್, ಬಿ ಹೆಚ್ ರಸ್ತೆ, ಅಮೀರ್ ಅಹಮದ್ ಸರ್ಕಲ್, ಶಿವಪ್ಪನಾಯಕ ಸರ್ಕಲ್, ಹೊಳೆ ಬಸ್ ನಿಲ್ದಾಣ ಮೂಲಕ ರೋಟರಿ ಚಿತಾಗಾರಕ್ಕೆ ಮೆರವಣಿಗೆ ಆಗಮಿಸಿತು. ಪೊಲೀಸ್ ಗೌರವದೊಂದಿಗೆ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪಾರ್ಥಿವ ಶರೀದ ಅಂತ್ಯ ಸಂಸ್ಕಾರ ನೆರವೇರಿತು.
ಮೆರವಣಿಗೆ : ವಿಜಯನಗರ ನಿವಾಸದ ಬಳಿ ಪಾರ್ಥಿವ ಶರೀರದ ಅಂತಿಮ ದರ್ಶನದ ವೇಳೆ ಹಾಗೂ ಮೆರವಣಿಗೆಯ ವೇಳೆ ಜನಸಾಗರವೇ ಕಂಡುಬಂದಿತು. ಸಾವಿರಾರು ಜನರು ಭಾಗಿಯಾಗಿದ್ದರು.
ಗಣ್ಯರ ಭೇಟಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಶಾಸಕ ಚನ್ನಬಸಪ್ಪ, ಡಿ ಎಸ್ ಅರುಣ್, ಬಲ್ಕೀಷ್ ಭಾನು ಸೇರಿದಂತೆ ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
Shivamogga, Apr. 24: The last rites of Manjunath Rao, who was shot dead by terrorists near Pahalgam while on a trip to Jammu and Kashmir, were performed at the Rotary Crematorium in Shivamogga city on the afternoon of Apr. 24.
The body, which arrived at the Bangalore airport in the morning, was brought to the city by ambulance. The body was taken to the residence in Vijayanagara Layout through a bike rally procession from near the city’s Hole bus stand.