ಭದ್ರಾವತಿ, ಎ. 4: ಲೋಕಾಯುಕ್ತ ಪೊಲೀಸ್ ಅಧಿಕಾರಿ ಎಂದು ಅಧಿಕಾರಿಯೋರ್ವರ ಮೊಬೈಲ್ ಫೋನ್ ಗೆ ಕರೆ ಮಾಡಿ ಲಕ್ಷಾಂತರ ರೂ. ನೀಡುವಂತೆ ಬ್ಲ್ಯಾಕ್’ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ.

ಲೋಕಾಯುಕ್ತ ಪೊಲೀಸ್ ಅಧಿಕಾರಿ ಎಂದು ಲಕ್ಷಾಂತರ ರೂ. ಬ್ಲ್ಯಾಕ್’ಮೇಲ್! : ಕೇಸ್ ದಾಖಲು

ಭದ್ರಾವತಿ, ಎ. 4: ಲೋಕಾಯುಕ್ತ ಪೊಲೀಸ್ ಅಧಿಕಾರಿ ಎಂದು ಅಧಿಕಾರಿಯೋರ್ವರ ಮೊಬೈಲ್ ಫೋನ್ ಗೆ ಕರೆ ಮಾಡಿ, ಲಕ್ಷಾಂತರ ರೂ. ನೀಡುವಂತೆ ಬ್ಲ್ಯಾಕ್’ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ.

ಪ್ರಕರಣದ ಹಿನ್ನೆಲೆ: ಸಮಾಜ ಕಲ್ಯಾಣ ಇಲಾಖೆಯ ಭದ್ರಾವತಿ ಶಿಶು ಯೋಜನಾಭಿವೃದ್ದಿ ಅಧಿಕಾರಿ (ಸಿಡಿಪಿಓ) ಸುರೇಶ್ ರವರ ಮೊಬೈಲ್ ಗೆ ಕರೆ ಮಾಡಿದ ವ್ಯಕ್ತಿಯೋರ್ವ, ತನ್ನನ್ನು ಶಿವಮೊಗ್ಗ ಲೋಕಾಯುಕ್ತ ಉಪಾಧೀಕ್ಷಕರೆಂದು ಪರಿಚಯಿಸಿಕೊಂಡಿದ್ದ.

‘ಅಂಗನವಾಡಿಗಳಿಗೆ ಆಹಾರ ವಿತರಣೆ ವಿಚಾರದಲ್ಲಿ ನಿಮ್ಮ ಮೇಲೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನಿಂದ ವಿಚಾರಣಾಧಿಕಾರಿಗಳು ಆಗಮಿಸಿದ್ದಾರೆ.ಈ ಸಾರಿ ನಿಮಗೆ ಜೀವದಾನ ನೀಡುತ್ತೆವೆ. 1.20 ಲಕ್ಷ ರೂ.ಗಳನ್ನು ಗೂಗಲ್ ಪೇ ಮಾಡುವಂತೆ’ ಬ್ಲ್ಯಾಕ್’ಮೇಲ್ ಮಾಡಿದ್ದ.

‘ಹಣಕ್ಕೆ ಬೆದರಿಕೆ ಹಾಕಿ ಮಾನಸಿಕ ಕಿರುಕುಳ ನೀಡಿದವನ ವಿರುದ್ದ ಕ್ರಮಕೈಗೊಳ್ಳುವಂತೆ, ಅಧಿಕಾರಿ ಸುರೇಶ್ ಅವರು ದೂರು ನೀಡಿದ್ದಾರೆ. ಸದರಿ ದೂರಿನ ಆಧಾರದ ಮೇಲೆ ಹಳೇನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 384, 511 ರ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಪ್ರಸ್ತುತ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಕೆಲ ಅಧಿಕಾರಿ, ಸಿಬ್ಬಂದಿಗಳು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಚುನಾವಣೆ ಜೊತೆಜೊತೆಗೆ ಕುಡಿಯುವ ನೀರು ಸೇರಿದಂತೆ ಮತ್ತೀತರ ನಾಗರೀಕ ಸಮಸ್ಯೆಗಳ ಪರಿಹಾರದತ್ತಲೂ ಗಮನಹರಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಂತರ್ಜಲ ಮಟ್ಟ ಕುಸಿದು, ಕುಡಿಯುವ ನೀರು ಸಮಸ್ಯೆ ಉಲ್ಬಣಿಸಬಹುದಾದ ಗ್ರಾಮಗಳ ಸಂಭಾವ್ಯ ಪಟ್ಟಿ ಸಿದ್ದಪಡಿಸಲಾಗಿದೆ. ಇಂತಹ ಗ್ರಾಮಗಳಲ್ಲಿ ಸಮಸ್ಯೆ ಪರಿಹಾರಕ್ಕೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗುತ್ತಿದೆ. ಸಮಸ್ಯೆ ಕಂಡುಬರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುವುದು. Previous post ಮಲೆನಾಡಲ್ಲಿ ರಣ ಬಿಸಿಲು : ಕುಸಿಯುತ್ತಿರುವ ಅಂತರ್ಜಲ – ಕುಡಿಯುವ ನೀರಿಗೆ ಎದುರಾಗಲಾರಂಭಿಸಿದೆ ಹಾಹಾಕಾರ!
ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡಲಾಗುತ್ತಿದ್ದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೆಯೇ ಅನುಮತಿಯಿಲ್ಲದೆ ಚುನಾವಣೆ ಪ್ರಚಾರ ನಡೆಸುತ್ತಿದ್ದ ವಾಹನ ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ ವಿವರ ಈ ಮುಂದಿನಂತಿದೆ. Next post ಗ್ಯಾಸ್ ಸ್ಟವ್, ಅಕ್ಕಿ, ನಗದು, ಬಟ್ಟೆ, ಕಾಫಿ – ಟೀ ಪುಡಿ ಮತ್ತೀತರ ವಸ್ತುಗಳು ವಶ!