
bhadravati | ಭದ್ರಾವತಿಯಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು : ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು!
ಭದ್ರಾವತಿ (bhadravathi), ಮೇ 6: ಕೊಲೆ ಪ್ರಕರಣದ ಆರೋಪಿ ಓರ್ವನ ಕಾಲಿಗೆ ಪೊಲೀಸರು ಗುಂಡಿಕ್ಕಿ ಬಂಧಿಸಿದ ಘಟನೆ ಮೇ 6 ರಂದು ಭದ್ರಾವತಿ ನಗರದಲ್ಲಿ ನಡೆದಿದೆ.
ಅರುಣ್ ಕುಮಾರ್ (19) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಆರೋಪಿಯನ್ನು ಹಾಗೂ ಈತನ ದಾಳಿಯಿಂದ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿಯನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ರಿಕೆಟ್ ವಿಚಾರದಲ್ಲಿ ಏರ್ಪಟ್ಟ ಕಲಹಕ್ಕೆ ಸಂಬಂಧಿಸಿದಂತೆ, ಭದ್ರಾವತಿ ನಗರದ ಅಶ್ವಥ್ ನಗರದಲ್ಲಿ ಮೇ 5 ರ ರಾತ್ರಿ ಅರುಣ್ (23) ಎಂಬ ಯುವಕನ ಕೊಲೆ ನಡೆದಿತ್ತು. ಸದರಿ ಪ್ರಕರಣದಲ್ಲಿ ಅರುಣ್ ಕುಮಾರ್ ಸೇರಿದಂತೆ ಇತರರು ಆರೋಪಿಯಾಗಿದ್ದರು. ಘಟನೆಯ ನಂತರ ಆರೋಪಿ ತಲೆಮರೆಸಿಕೊಂಡಿದ್ದ.
ಈತನಿದ್ದ ಸ್ಥಳದ ಮಾಹಿತಿ ಅರಿತ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಕೃಷ್ಣಕುಮಾರ್ ಮತ್ತವರ ಸಿಬ್ಬಂದಿಗಳು ತೆರಳಿದ್ದರು. ಈ ವೇಳೆ ಆರೋಪಿಯು ಪೊಲೀಸರ ಮೇಲೆಯೇ ದಾಳಿ ನಡೆಸಿ ಪರಾರಿಯಾಗಲೆತ್ನಿಸಿದ್ದ. ತಕ್ಷಣವೇ ಸಬ್ ಇನ್ಸ್’ಪೆಕ್ಟರ್ ಆರೋಪಿ ಕಾಲಿಗೆ ಗುಂಡಿಕ್ಕಿ ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿರುದ್ದ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ 5 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಮಾಧ್ಯಮ ಸಂದೇಶದಲ್ಲಿ ತಿಳಿಸಿದ್ದಾರೆ.
Bhadravati, May 6: An incident occurred in Bhadravati city on May 6 when the police shot and arrested an accused in a murder case. Arun Kumar (19) has been identified as the arrested accused. The injured accused and the police personnel injured in his attack have been admitted to Bhadravati Government Hospital.
More Stories
Holehonnuru | ಹೊಳೆಹೊನ್ನೂರು : ಯಡೇಹಳ್ಳಿ ಗ್ರಾಪಂ ಅಧ್ಯಕ್ಷೆ, ಉಪಾಧ್ಯಕ್ಷರ ಅವಿರೋಧ ಆಯ್ಕೆ
Holehonnur : Yadehalli Grama Panchayat President and Vice President elected unopposed
ಹೊಳೆಹೊನ್ನೂರು : ಯಡೇಹಳ್ಳಿ ಗ್ರಾಪಂ ಅಧ್ಯಕ್ಷೆ – ಉಪಾಧ್ಯಕ್ಷರ ಅವಿರೋಧ ಆಯ್ಕೆ
shimoga | bhadravati | ಶಿವಮೊಗ್ಗ – ಭದ್ರಾವತಿಯಲ್ಲಿ ಮೂವರು ಕಣ್ಮರೆ : ಪತ್ತೆಗೆ ಸಹಕರಿಸಲು ಪೊಲೀಸ್ ಇಲಾಖೆ ಮನವಿ
Three missing in Shivamogga-Bhadravati: Police appeal for help in finding them
shimoga | bhadravati | ಶಿವಮೊಗ್ಗ – ಭದ್ರಾವತಿಯಲ್ಲಿ ಮೂವರು ಕಣ್ಮರೆ : ಪತ್ತೆಗೆ ಸಹಕರಿಸಲು ಪೊಲೀಸ್ ಇಲಾಖೆ ಮನವಿ
bhadravati crime news | ಭದ್ರಾವತಿ | ವಿವಿಧೆಡೆ ಬೈಕ್ ಕಳವು ಮಾಡಿದ್ದ ಯುವಕ ಸೆರೆ!
Bhadravati | A young man who had stolen bikes from various places was arrested!
ಭದ್ರಾವತಿ | ವಿವಿಧೆಡೆ ಬೈಕ್ ಕಳವು ಮಾಡಿದ್ದ ಯುವಕ ಸೆರೆ!
ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!
Bhadravati: Fake currency circulation – Real estate worker arrested!
ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!
ಹಲವು ವರ್ಷಗಳ ನಂತರ ಭದ್ರಾವತಿಯ ಕಾರೇಹಳ್ಳಿಯಲ್ಲಿ KHB ಯಿಂದ ಹೊಸ ಬಡಾವಣೆ : ನಿವೇಶನಗಳಿಗೆ ಅರ್ಜಿ ಆಹ್ವಾನ!
khb site | After many years a new layout from KHB in Karehalli Bhadravati: Applications invited for sites!
khb site | ಹಲವು ವರ್ಷಗಳ ನಂತರ ಭದ್ರಾವತಿಯ ಕಾರೇಹಳ್ಳಿಯಲ್ಲಿ KHB ಯಿಂದ ಹೊಸ ಬಡಾವಣೆ : ನಿವೇಶನಗಳಿಗೆ ಅರ್ಜಿ ಆಹ್ವಾನ!
bhadravati | ಭದ್ರಾವತಿ : ಹೊಳೆಹೊನ್ನೂರು ಭದ್ರಾಪುರದಲ್ಲಿ ಕೊಲೆ ಪ್ರಕರಣ – 7 ಜನರಿಗೆ ಜೀವಾವಧಿ ಶಿಕ್ಷೆ!
Bhadravati: Murder case – 7 people sentenced to life imprisonment!
bhadravati | ಭದ್ರಾವತಿ : ಕೊಲೆ ಪ್ರಕರಣ – 7 ಜನರಿಗೆ ಜೀವಾವಧಿ ಶಿಕ್ಷೆ!