: ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಹುಂಚ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸೈಬರ್ ಅಪರಾಧ ಕುರಿತಂತೆ ಜನಜಾಗೃತಿ ಮೂಡಿಸಿದರು. ಸಾರ್ವಜನಿಕರಿಗೆ ಕರಪತ್ರ ವಿತರಣೆ ಮಾಡಿದರು.

ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಿಂದ ಜನಜಾಗೃತಿ ಕಾರ್ಯಕ್ರಮ

ಶಿವಮೊಗ್ಗ, ಎ. 5:   ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಹುಂಚ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸೈಬರ್ ಅಪರಾಧ ಕುರಿತಂತೆ ಜನಜಾಗೃತಿ ಮೂಡಿಸಿದರು. ಸಾರ್ವಜನಿಕರಿಗೆ ಕರಪತ್ರ ವಿತರಣೆ ಮಾಡಿದರು.

ಮೊಬೈಲ್ ಕಳೆದುಹೋದ ಸಂದರ್ಭದಲ್ಲಿ, ಸಿಇಐಆರ್ ಸಾಫ್ಟ್’ವೇರ್ ತಂತ್ರಜ್ಞಾನದ ಮೂಲಕ ಹೇಗೆ ಪತ್ತೆ ಹಚ್ಚಿಕೊಡಲಾಗುತ್ತದೆ ಎಂಬುವುದರ ಬಗ್ಗೆ ಸಾರ್ವಜನಿಕರಿಗೆ ಸೈಬರ್ ಠಾಣೆ ಪೊಲೀಸರು ತಿಳಿ ಹೇಳಿದರು.

ಆನ್’ಲೈನ್ ಆಧಾರಿತ ವ್ಯವಹಾರದ ವೇಳೆ, ಒಟಿಪಿ ನಂಬರ್ ಹೇಳುವಂತೆ ಮೊಬೈಲ್ ಫೋನ್ ಗಳಿಗೆ ಅನಾಮಧೇಯ ಕರೆ-ಸಂದೇಶಗಳು ಆಗಮಿಸಿದ ವೇಳೆ ಅನುಸರಿಸಬೇಕಾದ ಎಚ್ಚರಿಕೆ ಕ್ರಮಗಳ ಕುರಿತಂತೆ ಸಲಹೆ-ಸೂಚನೆಗಳನ್ನು ಸಿಬ್ಬಂದಿಗಳು ನೀಡಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವಿಜಯ್, ಜಗದೀಶ್, ಹುಂಚ ಪೊಲೀಸ್ ಔಟ್ ಪೋಸ್ಟ್ ಸಿಬ್ಬಂದಿ ಮಂಜುನಾಥ್ ಮೊದಲಾದವರಿದ್ದರು.

ಶಿವಮೊಗ್ಗ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯು ಸದ್ಯ ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೇ ಕುತೂಹಲ ಕೆರಳಿಸಿದೆ. ಯಾವ ಪಕ್ಷಗಳಿಂದ ಯಾರು ಕಣಕ್ಕಿಳಿಯುತ್ತಾರೆಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯಲಾರಂಭಿಸಿದೆ. Previous post ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ..!
‘ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲಿಸುತ್ತಿದ್ದೆನೆ. ಅವರು ನನಗೆ ಕಷ್ಟ ಕಾಲದಲ್ಲಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಅವರ ಪರವಾಗಿ ನಿಲ್ಲುತ್ತಿದ್ದೆನೆ. ತಮಗೆ ಯಾವುದೇ ಒತ್ತಡವಿಲ್ಲ. ಒತ್ತಡಕ್ಕಾಗಿ ಬರುವ ವ್ಯಕ್ತಿಯಲ್ಲ’ ಎಂದು ಚಿತ್ರನಟ ಸುದೀಪ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಕಿಕ್ಕಿರಿದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ‘ರಾಜಕೀಯಕ್ಕೆ ಬರುವುದಿಲ್ಲ. ಬಿಜೆಪಿಗೆ ಸೇರ್ಪಡೆಯಾಗಿಲ್ಲ. ತಮ್ಮದೇನಿದ್ದರೂ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ’ ಎಂದು ಸುದೀಪ್ ಗೊಂದಲದ ಹೇಳಿಕೆ ನೀಡಿದರು. Next post ‘ಬಸವರಾಜ ಬೊಮ್ಮಾಯಿಗೆ ಬೆಂಬಲ : ರಾಜಕೀಯಕ್ಕೆ ಬರಲ್ಲ!’ – ನಟ ಸುದೀಪ್ ಹೇಳಿಕೆ