ಶಿವಮೊಗ್ಗ, ಎ. 6: ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡದಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಶಾಂತಿನಗರ ಭಾಗದ ಗುಡ್ಡದ ಭಾಗದಲ್ಲಿ ಸಂಜೆ ದಿಢೀರ್ ಆಗಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು.ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು ಗುಡ್ಡಕ್ಕೆ ತುಗಲಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಗುಡ್ಡದ ಇತರೆಡೆ ಅಗ್ನಿಯ ಕೆನ್ನಾಲಿಗೆ ವ್ಯಾಪಿಸುವುದನ್ನು ನಿಯಂತ್ರಿಸಿದೆ. ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಹೇಗೆಂಬುವುದು ಸ್ಪಷ್ಟವಾಗಿಲ್ಲ. ತೀವ್ರ ಸ್ವರೂಪದ ಬಿಸಿಲಿನಿಂದ ಗುಡ್ಡದಲ್ಲಿ ಕುರುಚಲು ಗಿಡಗಂಟೆಗಳು, ಹಸಿರು ಹುಲ್ಲು ಒಣಗಿದೆ. ಪ್ರಸ್ತುತ ಬೇಸಿಗೆ ವೇಳೆ ಕಾಡ್ಗಿಚ್ಚಿನಿಂದ ರಾಗಿಗುಡ್ಡ ಉಳಿಸುವ ನಿಟ್ಟಿನಲ್ಲಿ, ಆಡಳಿತ ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಶಿವಮೊಗ್ಗ ನಗರಕ್ಕೆ ಹೊಂದಿಕೊಂಡಂತಿರುವ ಏಕೈಕ ಗುಡ್ಡ ರಾಗಿಗುಡ್ಡವಾಗಿದೆ. ಪ್ರಾಣಿ-ಪಕ್ಷಿಗಳ ಆವಾಸ ಸ್ಥಾನವಾಗಿದೆ. ಆದರೆ ವಿವಿಧ ಅಭಿವೃದ್ದಿ ಕಾಮಗಾರಿ, ಕಟ್ಟಡಗಳ ನಿರ್ಮಾಣದಿಂದ ಗುಡ್ಡ ಕಣ್ಮರೆಯಾಗುತ್ತಿದೆ. ಇದೀಗ ಕಾಳ್ಗಿಚ್ಚಿನಿಂದ ಅಳಿದುಳಿದ ಪ್ರಕೃತಿ ಸಂಪತ್ತು ವಿನಾಶವಾಗಲಾರಂಭಿಸಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಶಿವಮೊಗ್ಗ ಹೊರವಲಯ ರಾಗಿಗುಡ್ಡದಲ್ಲಿ ಬೆಂಕಿ!

ಶಿವಮೊಗ್ಗ, ಎ. 6: ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡದಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಶಾಂತಿನಗರ ಭಾಗದ ಗುಡ್ಡದ ಭಾಗದಲ್ಲಿ ಸಂಜೆ ದಿಢೀರ್ ಆಗಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದರು.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು ಗುಡ್ಡಕ್ಕೆ ತುಗಲಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಗುಡ್ಡದ ಇತರೆಡೆ ಅಗ್ನಿಯ ಕೆನ್ನಾಲಿಗೆ ವ್ಯಾಪಿಸುವುದನ್ನು ನಿಯಂತ್ರಿಸಿದೆ.

ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಹೇಗೆಂಬುವುದು ಸ್ಪಷ್ಟವಾಗಿಲ್ಲ. ತೀವ್ರ ಸ್ವರೂಪದ ಬಿಸಿಲಿನಿಂದ ಗುಡ್ಡದಲ್ಲಿ ಕುರುಚಲು ಗಿಡಗಂಟೆಗಳು, ಹಸಿರು ಹುಲ್ಲು ಒಣಗಿದೆ. ಪ್ರಸ್ತುತ ಬೇಸಿಗೆ ವೇಳೆ ಕಾಳ್ಗಿಚ್ಚಿನಿಂದ ರಾಗಿಗುಡ್ಡ ಉಳಿಸುವ ನಿಟ್ಟಿನಲ್ಲಿ, ಆಡಳಿತ ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಶಿವಮೊಗ್ಗ ನಗರಕ್ಕೆ ಹೊಂದಿಕೊಂಡಂತಿರುವ ಏಕೈಕ ಗುಡ್ಡ ರಾಗಿಗುಡ್ಡವಾಗಿದೆ. ಪ್ರಾಣಿ-ಪಕ್ಷಿಗಳ ಆವಾಸ ಸ್ಥಾನವಾಗಿದೆ. ಆದರೆ ವಿವಿಧ ಅಭಿವೃದ್ದಿ ಕಾಮಗಾರಿ, ಕಟ್ಟಡಗಳ ನಿರ್ಮಾಣದಿಂದ ಗುಡ್ಡ ಕಣ್ಮರೆಯಾಗುತ್ತಿದೆ. ಇದೀಗ ಕಾಳ್ಗಿಚ್ಚಿನಿಂದ ಅಳಿದುಳಿದ ಪ್ರಕೃತಿ ಸಂಪತ್ತು ವಿನಾಶವಾಗಲಾರಂಭಿಸಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಾರೆ.

ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಎರಡನೇ ಹಂತದ ಹುರಿಯಾಳುಗಳ ಪಟ್ಟಿ ಬಿಡುಗಡೆಗೊಳಿಸಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ. Previous post ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕಿಮ್ಮನೆ ‘ಕೈ’ ಹಿಡಿದ ಕಾಂಗ್ರೆಸ್ ವರಿಷ್ಠರು!
ಇಬ್ಬರು ಯುವಕರಿಗೆ ಚೂರಿಯಿಂದ ಇರಿದು, ನಾಲ್ವರ ಮೇಲೆ ಹಲ್ಲೆ ಮಾಡಿದ್ದ ಐವರು ಯುವಕರಿಗೆ, 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಶಿವಮೊಗ್ಗದ ಕೊರಮಕೇರಿ ನಿವಾಸಿಗಳಾದ ವಿಜಯಕುಮಾರ್ (26), ಪ್ರವೀಣ್ (20), ನವೀನ್ (24), ಚೇತನ (24) ಹಾಗೂ ಸಂತೋಷ್ (33) ಶಿಕ್ಷೆಗೊಳಗಾದ ಯುವಕೆಂದು ಗುರುತಿಸಲಾಗಿದೆ. Next post ಚೂರಿಯಿಂದ ಇರಿದು ಹಲ್ಲೆ ಮಾಡಿದ್ದ ಐವರು ಯುವಕರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ!