ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ ಮಾಡಿದ್ದ ಆರೋಪದ ಮೇರೆಗೆ, ಪಕ್ಷದ ಮುಖಂಡರೋರ್ವರ ವಿರುದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ, ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಉಪ ವಿಭಾಗಾಧಿಕಾರಿಗಳಿಂದ ಷರತ್ತುಬದ್ಧ ಅನುಮತಿ ಪಡೆದುಕೊಂಡು, ಕಳೆದ 30-3-2023 ರಂದು ಸಾಗರ ಪಟ್ಟಣದ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್ ಪಕ್ಷವು ಕಾರ್ಯಕರ್ತರ ಸಭೆ ಆಯೋಜಿಸಿತ್ತು.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ : ಎಫ್.ಐ.ಆರ್. ದಾಖಲು!

ಸಾಗರ, ಎ. 7: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ ಮಾಡಿದ್ದ ಆರೋಪದ ಮೇರೆಗೆ, ಪಕ್ಷದ ಮುಖಂಡರೋರ್ವರ ವಿರುದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ, ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

ಉಪ ವಿಭಾಗಾಧಿಕಾರಿಗಳಿಂದ ಷರತ್ತುಬದ್ಧ ಅನುಮತಿ ಪಡೆದುಕೊಂಡು, ಕಳೆದ 30-3-2023 ರಂದು ಸಾಗರ ಪಟ್ಟಣದ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್ ಪಕ್ಷವು ಕಾರ್ಯಕರ್ತರ ಸಭೆ ಆಯೋಜಿಸಿತ್ತು.

ಚುನಾವಣಾ ಎ.ಎಸ್.ಟಿ. ತಂಡದ ಅಧಿಕಾರಿಗಳು ಕಾಂಗ್ರೆಸ್ ಸಭೆಗೆ ಭೇಟಿ ನೀಡಿ ಪರಿಶೀಲಿಸಿದಾಗ, ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಿದ್ದು ಕಂಡುಬಂದಿತ್ತು. ಕಾಂಗ್ರೆಸ್ ಸಭೆಯಲ್ಲಿ ಚುನಾವಣಾ ಮಾದರಿ ನೀತಿ-ಸಂಹಿತೆ ಉಲ್ಲಂಘನೆಯಾಗಿದೆ ಎಂದು ಎಂಸಿಸಿ ನೋಡಲ್ ಅಧಿಕಾರಿಯು, ಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದರ ಆಧಾರದ ಮೇಲೆ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಸ್ಥಳೀಯ ಕಾಂಗ್ರೆಸ್ ಮುಖಂಡರೋರ್ವರ ವಿರುದ್ಧ ಪೊಲೀಸರು ಎಫ್.ಐ.ಆರ್ ದಾಖಲಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆಯು ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತಂತೆ ಮಾಹಿತಿ ನೀಡಿದೆ.

ಗಾಂಜಾ ಮಾರಾಟ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮೂವರು ಯುವಕರನ್ನು ಬಂಧಿಸಿದ ಘಟನೆ, ಭದ್ರಾವತಿ ಪಟ್ಟಣದ ಹೊಳೆಹೊನ್ನೂರು ರಸ್ತೆಯ ಲಕ್ಷ್ಮೀ ಸಾಮಿಲ್ ಸಮೀಪ ನಡೆದಿದೆ. Previous post ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರು ಪೊಲೀಸ್ ಬಲೆಗೆ!
‘ಜಂಗೀ ಕುಸ್ತಿಗೆ ಅಖಾಡ ರೆಡಿಯಾಗಿದೆ… ಆದರೆ ಪೈಲ್ವಾನರುಗಳೇ ಸಿದ್ಧವಾಗಿಲ್ಲ...’ ಇದು, ಶಿವವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸದ್ಯದ ಚುನಾವಣಾ ರಾಜಕಾರಣದ ಚಿತ್ರಣ…! ಹೌದು. ವಿಧಾನಸಭೆ ಚುನಾವಣೆ ಘೋಷಣೆಯಾಗಿ ಹಲವೇ ದಿನಗಳೇ ಕಳೆದಿದೆ. ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಆದರೆ ಇಲ್ಲಿಯವರೆಗೂ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಯಾರೆಂಬುವುದು ಖಚಿತವಾಗಿಲ್ಲ. ಯಾವ ಪಕ್ಷದಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬುವುದು ಸಂಪೂರ್ಣ ನಿಗೂಢವಾಗಿ ಪರಿಣಮಿಸಿದೆ. ಇದರಿಂದ ಅಭ್ಯರ್ಥಿಗಳ ಆಯ್ಕೆ ಚರ್ಚೆಗಳಿಗೆ ತೆರೆ ಬಿದ್ದಿಲ್ಲ. Next post ಶಿವಮೊಗ ನಗರ ಕ್ಷೇತ್ರ : ಮೂರು ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ!