
ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!
ಭದ್ರಾವತಿ (bhadravati), ಜೂ. 15: ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ, ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.
ಭದ್ರಾವತಿಯ ಭಂಡಾರಹಳ್ಳಿ ಎದುರಿನ ನಾಗಮ್ಮ ಲೇಔಟ್ ನಿವಾಸಿ, ರಿಯಲ್ ಎಸ್ಟೇಟ್ ಕೆಲಸ ಮಾಡುವ ರಂಗೇಗೌಡ (57) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 500 ರೂ. ಮುಖಬೆಲೆಯ 13 ನೋಟುಗಳು ಹಾಗೂ 200 ರೂ., 100 ರೂ., 50 ರೂ. ಮುಖಬೆಲೆಯ ತಲಾ 1 ನಕಲಿ ನೋಟು ಹಾಗೂ ಕೃತ್ಯಕ್ಕೆ ಬಳಸಿದ್ದ ಡಿಸ್ಕವರ್ ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಯು ಬೇರೆಡೆಯೂ ನಕಲಿ ನೋಟುಗಳ ಚಲಾವಣೆ ಮಾಡಿರುವ ಕುರಿತಂತೆ ಪೊಲೀಸರ ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ OFP 790829 ಹಾಗೂ 9TV 978202 ಕ್ರಮ ಸಂಖ್ಯೆಯ 500 ಮುಖಬೆಲೆಯ ನೋಟುಗಳು ಕಂಡುಬಂದಲ್ಲಿ, ಪೊಲೀಸರಿಗೆ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಜೂನ್ 14 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.
ಸಿಕ್ಕಿದ್ದು ಹೇಗೆ? : ಭದ್ರಾವತಿ ನಗರದ ಕೂಲಿ ಬ್ಲಾಕ್ ಶೆಡ್ ನಿವಾಸಿ ಅಜಯ್ ಎಂಬುವರಿಗೆ 12-6-2025 ರ ಸಂಜೆ ಡಿಸ್ಕವರ್ ಬೈಕ್ ನಲ್ಲಿ ಆಗಮಿಸಿದ ಆರೋಪಿಯು, 500 ರೂ. ನಕಲಿ ನೋಟು ನೀಡಿ ವ್ಯಾಪಾರ ಮಾಡಿ ತೆರಳಿದ್ದ. ಈ ಕುರಿತಂತೆ ಅಜಯ್ ಅವರು ಪೊಲೀಸರಿಗೆ ದೂರು ನೀಡಿದ್ದರು.
ಭದ್ರಾವತಿ ಡಿವೈಎಸ್ಪಿ ನಾಗರಾಜ್, ಇನ್ಸ್ಪೆಕ್ಟರ್ ಮಂಜುನಾಥ್, ಪಿಎಸ್ಐ ರಮೇಶ್, ಎಎಸ್ಐ ಮಂಜಪ್ಪ, ಸಿಬ್ಬಂದಿಗಳಾದ ನವೀನ್, ವಿಜಯ್, ಶ್ರೀಧರ್, ಮಾರುತಿ ಪಾಟೀಲ್, ಪ್ರಸನ್ನ, ರಘು, ನಾಗರಾಜಪ್ಪರವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Bhadravati, June 15: Bhadravati New Town police have arrested an accused on charges of circulating fake currency. #bhadravati, #bhadravathi, #bhadravatinews, #ಭದ್ರಾವತಿ,
More Stories
Holehonnuru | ಹೊಳೆಹೊನ್ನೂರು : ಯಡೇಹಳ್ಳಿ ಗ್ರಾಪಂ ಅಧ್ಯಕ್ಷೆ, ಉಪಾಧ್ಯಕ್ಷರ ಅವಿರೋಧ ಆಯ್ಕೆ
Holehonnur : Yadehalli Grama Panchayat President and Vice President elected unopposed
ಹೊಳೆಹೊನ್ನೂರು : ಯಡೇಹಳ್ಳಿ ಗ್ರಾಪಂ ಅಧ್ಯಕ್ಷೆ – ಉಪಾಧ್ಯಕ್ಷರ ಅವಿರೋಧ ಆಯ್ಕೆ
shimoga | bhadravati | ಶಿವಮೊಗ್ಗ – ಭದ್ರಾವತಿಯಲ್ಲಿ ಮೂವರು ಕಣ್ಮರೆ : ಪತ್ತೆಗೆ ಸಹಕರಿಸಲು ಪೊಲೀಸ್ ಇಲಾಖೆ ಮನವಿ
Three missing in Shivamogga-Bhadravati: Police appeal for help in finding them
shimoga | bhadravati | ಶಿವಮೊಗ್ಗ – ಭದ್ರಾವತಿಯಲ್ಲಿ ಮೂವರು ಕಣ್ಮರೆ : ಪತ್ತೆಗೆ ಸಹಕರಿಸಲು ಪೊಲೀಸ್ ಇಲಾಖೆ ಮನವಿ
bhadravati crime news | ಭದ್ರಾವತಿ | ವಿವಿಧೆಡೆ ಬೈಕ್ ಕಳವು ಮಾಡಿದ್ದ ಯುವಕ ಸೆರೆ!
Bhadravati | A young man who had stolen bikes from various places was arrested!
ಭದ್ರಾವತಿ | ವಿವಿಧೆಡೆ ಬೈಕ್ ಕಳವು ಮಾಡಿದ್ದ ಯುವಕ ಸೆರೆ!
ಹಲವು ವರ್ಷಗಳ ನಂತರ ಭದ್ರಾವತಿಯ ಕಾರೇಹಳ್ಳಿಯಲ್ಲಿ KHB ಯಿಂದ ಹೊಸ ಬಡಾವಣೆ : ನಿವೇಶನಗಳಿಗೆ ಅರ್ಜಿ ಆಹ್ವಾನ!
khb site | After many years a new layout from KHB in Karehalli Bhadravati: Applications invited for sites!
khb site | ಹಲವು ವರ್ಷಗಳ ನಂತರ ಭದ್ರಾವತಿಯ ಕಾರೇಹಳ್ಳಿಯಲ್ಲಿ KHB ಯಿಂದ ಹೊಸ ಬಡಾವಣೆ : ನಿವೇಶನಗಳಿಗೆ ಅರ್ಜಿ ಆಹ್ವಾನ!
bhadravati | ಭದ್ರಾವತಿ : ಹೊಳೆಹೊನ್ನೂರು ಭದ್ರಾಪುರದಲ್ಲಿ ಕೊಲೆ ಪ್ರಕರಣ – 7 ಜನರಿಗೆ ಜೀವಾವಧಿ ಶಿಕ್ಷೆ!
Bhadravati: Murder case – 7 people sentenced to life imprisonment!
bhadravati | ಭದ್ರಾವತಿ : ಕೊಲೆ ಪ್ರಕರಣ – 7 ಜನರಿಗೆ ಜೀವಾವಧಿ ಶಿಕ್ಷೆ!
bhadravati | ಭದ್ರಾವತಿ : ವ್ಯಕ್ತಿಯ ಜೀವ ಉಳಿಸಿದ ಪೊಲೀಸ್ ಸಿಬ್ಬಂದಿಗಳು!
Bhadravati: Police personnel who saved a person’s life!
bhadravati | ಭದ್ರಾವತಿ : ವ್ಯಕ್ತಿಯ ಜೀವ ಉಳಿಸಿದ ಪೊಲೀಸ್ ಸಿಬ್ಬಂದಿಗಳು!