
shimoga | BREAKING NEWS | ಶಿವಮೊಗ್ಗ : ಕೆರೆ ಏರಿ ಮೇಲೆ ರೌಡಿ ಶೀಟರ್ ಭೀಕರ ಕೊ*ಲೆ!
ಶಿವಮೊಗ್ಗ (shivamogga), ಜೂ. 22: ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಬಡಾವಣೆಯ ಕೆರೆ ಏರಿಯ ಮೇಲೆ, ಯುವಕನೋರ್ವನನ್ನು ಬರ್ಬರವಾಗಿ ಕೊ*ಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದ್ದು, ಜೂ. 22 ರ ಭಾನುವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದೆ.
ಹಳೇ ಬೊಮ್ಮನಕಟ್ಟೆ ಬಡಾವಣೆ 1 ನೇ ಕ್ರಾಸ್ ನಿವಾಸಿ ಅವಿನಾಶ್ (32) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಈತ ಏಳನೀರು ವ್ಯಾಪಾರ, ಟೈಲ್ಸ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ.
ಮನೆಯಲ್ಲಿದ್ದ ಅವಿನಾಶ್ ರಾತ್ರಿ ಹೊರ ತೆರಳಿದ್ದು, ನಂತರ ಮನೆಗೆ ಹಿಂದಿರುಗಿರಲಿಲ್ಲ ಎನ್ನಲಾಗಿದೆ. ಮುಂಜಾನೆ ಕೆರೆ ಏರಿ ಮೇಲೆ ಕೊಲೆಗೀಡಾದ ಮೃತದೇಹ ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ವಿನೋಬನಗರ ಠಾಣೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
ಕಾರಣವೇನು? : ಕೊಲೆಗೀಡಾದ ಅವಿನಾಶ್ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹಳೇಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರ ತನಿಖೆಯ ನಂತರವಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.
#shimoga, #shivamogga, #crimenews, #bommanakatte, #shimogapolice, #shimogacrimenewsupdate, #vinobanagarapolicestation, #policestation, #vinobanagarapolicestation,
More Stories
shimoga | ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿದ ಆಯುಕ್ತ ಕೆ ಎ ದಯಾನಂದ್
Shivamogga: KHB Commissioner K A Dayanand listened to the public’s grievance
ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿದ ಕೆ ಹೆಚ್ ಬಿ ಆಯುಕ್ತ ಕೆ ಎ ದಯಾನಂದ್
shimoga crime news | ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು!
Allowing alcohol consumption in front of the hotel and shop: File a case!
ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು!
shimoga | ಶಿವಮೊಗ್ಗ : ವಿವಿಧೆಡೆ ದಿಡೀರ್ ಭೇಟಿಯಿತ್ತು ಪರಿಶೀಲಿಸಿದ ಕೆಹೆಚ್’ಬಿ ಆಯುಕ್ತ ಕೆ ಎ ದಯಾನಂದ್!
Shivamogga : KHB Commissioner K A Dayanand made a surprise visit to various places and inspected!
ಶಿವಮೊಗ್ಗ : ವಿವಿಧೆಡೆ ದಿಡೀರ್ ಭೇಟಿಯಿತ್ತು ಪರಿಶೀಲಿಸಿದ ಕೆಹೆಚ್’ಬಿ ಆಯುಕ್ತ ಕೆ ಎ ದಯಾನಂದ್!
shimoga | ಶಿವಮೊಗ್ಗ : ಗಾಂಜಾ ಅಮಲು – ಮೂವರ ವಿರುದ್ದ ಕೇಸ್!
Shivamogga : Cannabis consumption – Case against three!
ಶಿವಮೊಗ್ಗ : ಗಾಂಜಾ ಅಮಲು – ಮೂವರ ವಿರುದ್ದ ಕೇಸ್!
shimoga | power cut | ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shivamogga: Power outage in various places on July 20 th!
ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shimoga Tahsildar | ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?
What is the free e-Pauti movement? What did Shivamogga Tahsildar Rajiv say?
ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?