ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರ್ಯಾಂಡ್‌ ಅನ್ನು ಮುಗಿಸಲೆಂದೇ ಅಮುಲ್‌ ಹಾಲು, ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಕಿಡಿಕಾರಿದ್ದಾರೆ.

‘ನಂದಿನಿ’ ಕನ್ನಡಿಗರ ಅಸ್ಮಿತೆ : ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ

ಶಿವಮೊಗ್ಗ, ಎ. 10: ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರ್ಯಾಂಡ್‌ ಅನ್ನು ಮುಗಿಸಲೆಂದೇ
ಅಮುಲ್‌ ಹಾಲು, ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್
ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಆರೋಪಿಸಿದ್ದಾರೆ.

ಈ ಕುರಿತಂತೆ ಅವರು ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ನಂದಿನಿ ಹಾಲು ಮತ್ತು ಉತ್ಪನ್ನಗಳು ಕನ್ನಡಿಗರ ಅಸ್ಮಿತೆ ಹಾಗೂ ಸ್ವಾಭಿಮಾನದ ಸಂಕೇತವಾಗಿದೆ. ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಆಸರೆಯಾಗಿದೆ. ಆದರೆ ನಂದಿನಿ ಉತ್ಪನ್ನವನ್ನು ಮುಗಿಸುವ ಮೂಲಕ ರಾಜ್ಯದ ಹಾಲು ಉತ್ಪಾದಕರಿಗೆ ತೊಂದರೆ ಉಂಟು ಮಾಡುವ ಸಂಚು ನಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

ಕೆಎಂಎಫ್‌ಗೆ ಅಮುಲ್‌ ಯಾವ ರೀತಿಯಲ್ಲೂ ಸಾಟಿಯಲ್ಲ. ನಂದಿನಿ ಉತ್ಪನ್ನಗಳು ಬೆಲೆ ಹಾಗೂ
ಗುಣಮಟ್ಟದಲ್ಲಿ ಇಡೀ ದೇಶದಲ್ಲಿಯೇ ನಂಬರ್‌ ಒನ್‌ ಸ್ಥಾನದಲ್ಲಿದೆ. ಹಾಗಾಗಿಯೇ ಹೇಗಾದರೂ
ಮಾಡಿ ಮಾರುಕಟ್ಟೆ ತಂತ್ರ ಬಳಸಿ ತನ್ನ ಉತ್ಪನ್ನಗಳ ಬೇಡಿಕೆ ಹೆಚ್ಚಿಸಿಕೊಳ್ಳಲು ಅಮೂಲ್‌ ಇಂತಹ ಕುತಂತ್ರ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಸದ್ಯ ಕೆಎಂಎಫ್‌ನ ಹಾಲು, ಮೊಸರಿಗೆ ಮುಂಬೈ, ಗೋವಾ, ಹೈದರಾಬಾದ್‌, ಪೂನಾ, ಸೊಲ್ಲಾಪುರ, ಇತರೆ ಪ್ರಾಂತ್ಯದಲ್ಲಿ ಹೆಚ್ಚಿನ ಬೇಡಿಕೆ ಇದ್ದು, ಚೆನ್ನಾಗಿ ಮಾರಾಟವಾಗುತ್ತಿದೆ. ಅದನ್ನು ಅಮುಲ್‌ಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಹಾಗಾಗಿಯೇ, ಮುಂದೆ ಕೆಎಂಎಫ್‌ ಎಲ್ಲಿ ತನ್ನ ಬುಡಕ್ಕೆ ಅಪತ್ತು ತರುತ್ತದೋ ಎಂದು ಹೆದರಿ ಅಮುಲ್‌ ಇಂತಹ ಷಡ್ಯಂತ್ರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ಇನ್ನೂ ಉತ್ಪನ್ನಗಳ ದರ ಮತ್ತು ಗುಣಮಟ್ಟ ಸೇರಿದಂತೆ ಯಾವ ರೀತಿಯಲ್ಲೂ ಅಮುಲ್‌, ಕೆಎಂಎಫ್‌ ವಿರುದ್ಧ ಸ್ಪರ್ಧೆ ನಡೆಸಲಾಗದು. ಉದಾಹರಣೆಗೆ ಕೆಎಂಎಫ್‌ ಹಾಲಿನ ದರ ಲೀಟರ್‌ಗೆ 39ರೂ. ಇದ್ದರೆ, ಅಮುಲ್‌ ಹಾಲಿನ ದರ 54. ರೂ. ಇದೆ. ಅಂತೆಯೇ ಗುಣಮಟ್ಟವೂ ನಂದಿನಿಗಿಂತ ಚೆನ್ನಾಗಿಲ್ಲ. ಹಾಗಾಗಿ ಜನರೇ ಅಮುಲ್‌ ಉತ್ಪನ್ನಗಳನ್ನು ತಿರಸ್ಕರಿಸುತ್ತಾರೆ. ಕೆಎಂಎಫ್‌ ದೇಶದ ಅತಿದೊಡ್ಡ ಬ್ರ್ಯಾಂಡ್‌ ಆಗಿದ್ದು, ವಿದೇಶದಲ್ಲೂ ಹೆಸರು ಮಾಡಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಗುಜರಾತ್ ಮೂಲದ ಸಹಕಾರ ಸಂಸ್ಥೆ ಅಮುಲ್ ಮೂಲಕ ರಾಜ್ಯದ ನಂದಿನಿಯನ್ನು ಮುಗಿಸುವ ಕುತಂತ್ರ ನಡೆಸಿದೆ. ನಂದಿನಿಯನ್ನು ಅಮುಲ್‍ನಲ್ಲಿ ವಿಲೀನಗೊಳಿಸುವ ಬಗ್ಗೆ ಕೇಂದ್ರ ಸಹಕಾರ ಸಚಿವರು ಕೊಟ್ಟಿರುವ ಹೇಳಿಕೆ ಕನ್ನಡಿಗರಿಗೆ ಆಘಾತ ಉಂಟು ಮಾಡಿದೆ. ಕರ್ನಾಟಕದ ಅಸ್ಮಿತೆಯಾದ ನಂದಿನಿಯನ್ನುಉಳಿಸಿಕೊಳ್ಳಬೇಕಾದ ಹೊಣೆ ಸರ್ಕಾರದ್ದಾಗಿದೆ ವಿನಯ್ ತಾಂದ್ಲೆ ತಿಳಿಸಿದ್ದಾರೆ.

ರಣ ಬಿಸಿಲಿಗೆ ಮಲೆನಾಡು ಅಕ್ಷರಶಃ ಬಿಸಿಯಾಗಲಾರಂಭಿಸಿದೆ..! ಹೌದು. ಪ್ರಸ್ತುತ ಬೇಸಿಗೆ ತಾಪಕ್ಕೆ, ಶಿವಮೊಗ್ಗ ಜಿಲ್ಲೆಯ ನಾಗರೀಕರು ತತ್ತರಿಸಿದ್ದಾರೆ. ಹೈರಾಣಾಗುವಂತೆ ಮಾಡಿದೆ!! ಜಿಲ್ಲೆಯ ಇತರೆಡೆಯಂತೆ, ಶಿವಮೊಗ್ಗ ನಗರದಲ್ಲಿಯೂ ತಾಪಮಾನದ ಪ್ರಮಾಣ ತೀವ್ರ ಸ್ವರೂಪದಲ್ಲಿದೆ. ಹಗಲು ವೇಳೆ ಇಡೀ ನಗರ ಕಾದ ಕಾವಲಿಯಂತಾಗಿ ಪರಿವರ್ತಿತವಾಗುತ್ತಿದೆ. ಮನೆಯಿಂದ ಹೊರಬರಲಾಗದ ಮಟ್ಟಕ್ಕೆ ಬಿಸಿಲು ಬೀಳುತ್ತಿದೆ. ದಿನದಿಂದ ದಿನಕ್ಕೆ ತಾಪಮಾನ ಏರುಗತಿಯಲ್ಲಿ ಸಾಗುತ್ತಿರುವುದು, ನಾಗರೀಕರನ್ನು ಕಂಗಲಾಗಿಸಿದೆ. ಎದುಸಿರು ಹೆಚ್ಚಾಗುವಂತೆ ಮಾಡಿದೆ. Previous post ಮಲೆನಾಡಲ್ಲಿ ರಣ ಬಿಸಿಲು : ನಾಗರೀಕರು ತತ್ತರ!
Next post ಉದ್ಯೋಗಾವಕಾಶ : ಎ.12 ರಂದು ವಿವಿಧ ಕಂಪನಿಗಳಿಂದ ನೇರ ಸಂದರ್ಶನ