ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ, ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ. ಗಾಂಧಿ ಬಜಾರ್ ನ ಎಲೆ ರೇವಣ್ಣನಕೇರಿ ರಸ್ತೆಯಲ್ಲಿ ಘಟನೆ ನಡೆದಿದೆ. 5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಪೊಲೀಸರು!

5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನದ ಆಭರಣ ಪತ್ತೆ…!!

ಶಿವಮೊಗ್ಗ, ಎ. 11: ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ, ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ.

ಗಾಂಧಿ ಬಜಾರ್ ನ ಎಲೆ ರೇವಣ್ಣನಕೇರಿ ರಸ್ತೆಯಲ್ಲಿ ಘಟನೆ ನಡೆದಿದೆ. 5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಬಂಗಾರದ ಆಭರಣ ಕೊಂಡೊಯ್ಯುತ್ತಿರುವ ಕುರಿತಂತೆ ಪೊಲೀಸರಿಗೆ ಖಚಿತ ವರ್ತಮಾನ ಲಭ್ಯವಾಗಿತ್ತು. ಇದರ ಆಧಾರದ ಮೇಲೆ ಇನ್ಸ್’ಪೆಕ್ಟರ್ ಶಿವಪ್ರಸಾದ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ, ಸದರಿ ವ್ಯಕ್ತಿಯನ್ನು ಹಿಂಬಾಲಿಸಿ ವಶಕ್ಕೆ ಪಡೆದುಕೊಂಡಿತ್ತು.

ಈ ವೇಳೆ ಚಿನ್ನಾಭರಣಗಳಿರುವುದು ಪತ್ತೆಯಾಗಿತ್ತು. ಜೊತೆಗೆ ಸದರಿ ವ್ಯಕ್ತಿ ಚಿನ್ನಾಭರಣ ಕೊಂಡೊಯ್ಯುತ್ತಿದ್ದ ಅಂಗಡಿಯಲ್ಲಿಯೂ ಪರಿಶೀಲನೆ ನಡೆಸಿದ್ದರು. ಸೂಕ್ತ ದಾಖಲೆಯಿಲ್ಲದ ಚಿನ್ನಾಭರಣ ವಶಕ್ಕೆ ಪಡೆದುಕೊಂಡು, ತನಿಖೆ ಮುಂದುವರಿಸಿದ್ದಾರೆ.

ಇಷ್ಟೊಂದು ದೊಡ್ಡ ಪ್ರಮಾಣದ ಚಿನ್ನಾಭರಣ ಯಾರಿಗೆ ಸೇರಿದ್ದು? ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು? ಚುನಾವಣೆಗೇನಾದರೂ ಸಂಬಂಧವಿದೆಯಾ? ಎಂಬಿತ್ಯಾದಿ ವಿವರಗಳು ಇನ್ನಷ್ಟೆ ಬೆಳಕಿಗೆ ಬರಬೇಕಾಗಿದೆ.

ಆದರೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ರಾಜ್ಯ ನಾಯಕರ ನಡುವೆ ಒಮ್ಮತದ ಅಭಿಪ್ರಾಯ ಏರ್ಪಡದ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ ಎಂಬ ಮಾತುಗಳು ಕೇಳಿಬರಲಾರಂಭಿಸಿದೆ. ಯಾವಾಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂಬುವುದು ಪಕ್ಷದ ಮುಖಂಡರಿಗೂ ಸ್ಪಷ್ಟತೆಯಿಲ್ಲದಂತಾಗಿದೆ! ಪಕ್ಷದ ಉನ್ನತ ಮೂಲಗಳ ಮಾಹಿತಿ ಅನುಸಾರ ಮಂಗಳವಾರ ರಾತ್ರಿ ಅಥವಾ ಬುಧವಾರ ಬೆಳಿಗ್ಗೆ ಬಿಜೆಪಿ ಪ್ರಥಮ ಹಂತದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಸುಮಾರು 150 ಕ್ಕೂ ಹೆಚ್ಚು ಕ್ಷೇತ್ರಗಳ ಹುರಿಯಾಳುಗಳ ಹೆಸರು ಅಂತ್ಯಗೊಂಡಿದೆ ಎಂದು ಹೇಳಲಾಗುತ್ತಿದೆ. Previous post ಮೋದಿ – ಅಮಿತ್ ಶಾ ಬಿಗಿ ನಿಲುವು : ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆಯೇ ಅಚ್ಚರಿಯ ಅಭ್ಯರ್ಥಿಗಳು?
ಪ್ರಸ್ತುತ ವಿಧಾನಸಭೆ ಚುನಾವಣೆ ವೇಳೆ, ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ ಹೈಕಮಾಂಡ್ ತಳೆದಿರುವ ಬಿಗಿ ನಿಲುವಿನ ಎಫೆಕ್ಟ್ ನಿಂದ, ಬಿಜೆಪಿ ಹಿರಿಯ ನಾಯಕರು ಚುನಾವಣಾ ‘ತ್ಯಾಗ’ಕ್ಕೆ ವೇದಿಕೆ ಸಿದ್ಧವಾಗಲಾರಂಭಿಸಿದೆ! ಹೌದು. ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ದಿಢೀರ್ ಆಗಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವುದು, ಬಿಜೆಪಿ ಹೈಕಮಾಂಡ್ ಖಡಕ್ ನಿಲುವಿನ ಸ್ಪಷ್ಟ ಮುನ್ನುಡಿ ಎಂದೇ ಹೇಳಲಾಗುತ್ತಿದೆ! Next post ಬಿಜೆಪಿ ಹೈಕಮಾಂಡ್ ಖಡಕ್ ನಿಲುವು ಸಮ್ಮತಿಸಿ, ‘ಚುನಾವಣಾ ನಿವೃತ್ತಿ’ ಘೋಷಿಸಿದರೇ ಕೆ.ಎಸ್.ಈಶ್ವರಪ್ಪ?