ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ವೊಂದು, ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಪರಿಣಾಮ, ಬಸ್ ನಲ್ಲಿದ್ದ 13 ಜನ ಮೃತಪಟ್ಟು 27 ಮಂದಿ ಗಾಯಗೊಂಡ ದಾರುಣ ಘಟನೆ ಮಹಾರಾಷ್ಟ್ರ ರಾಜ್ಯದ ರಾಯಗಡ ಬಳಿ ಶನಿವಾರ ಮುಂಜಾನೆ ನಡೆದಿದೆ.

ಮಹಾರಾಷ್ಟ್ರದ ರಾಯಗಡ ಬಳಿ ಕಂದಕಕ್ಕೆ ಉರುಳಿದ ಖಾಸಗಿ ಬಸ್ : 13 ಮಂದಿ ಸಾವು – 29 ಜನರಿಗೆ ಗಾಯ!

ರಾಯಗಡ (ಮಹಾರಾಷ್ಟ್ರ), ಎ. 15: ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ವೊಂದು, ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಪರಿಣಾಮ, ಬಸ್ ನಲ್ಲಿದ್ದ 13 ಜನ ಮೃತಪಟ್ಟು 29 ಮಂದಿ ಗಾಯಗೊಂಡ ದಾರುಣ ಘಟನೆ ಮಹಾರಾಷ್ಟ್ರ ರಾಜ್ಯದ ರಾಯಗಡ ಬಳಿ ಶನಿವಾರ ಮುಂಜಾನೆ ನಡೆದಿದೆ.

ಮುಂಬಯಿ – ಪುಣೆ ಹಳೇ ಹೆದ್ಧಾರಿಯ, ಖೋಪೊಲಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿಂಗ್ರೋಬಾ ದೇವಾಲಯ ಸಮೀಪ ಅವಘಡ ಸಂಭವಿಸಿದೆ. ಸದರಿ ಸ್ಥಳವು ಮುಂಬೈಯಿಂದ 70 ಕಿ.ಮೀ. ದೂರದಲ್ಲಿದೆ. ಪುಣೆಯ ಪಿಂಪ್ರಿ ಚಿಂಚವಾಡದಿಂದ ಮುಂಬೈಗೆ ಬಸ್ ಆಗಮಿಸುತ್ತಿದ್ದ ವೇಳೆ ಈ ಭೀಕರ ಅವಘಡ ಸಂಭವಿಸಿದೆ.

ಮೃತರೆಲ್ಲರೂ ಮುಂಬಯಿಯ ಗೋರೆಗಾಂವ್ ನ ಸಾಂಪ್ರದಾಯಿಕ ಸಂಗೀತ ತಂಡವಾದ ಬಜಿ ಪ್ರಭು ವಾದಕ್ ಗ್ರೂಪ್ ಎಂಬ ಸಂಗೀತ ತಂಡದ ಸದ್ಯರಾಗಿದ್ದಾರೆ. 18 ರಿಂದ 25 ವಯೋಮಾನದೊಳಗಿನವರಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಪುಣೆ ಜಿಲ್ಲೆಯ ಪಿಂಪ್ರಿ ಚಿಂಚವಾಡದ ಕಾರ್ಯಕ್ರಮವೊಂದರಲ್ಲಿ ಸಂಗೀತ ತಂಡ ಭಾಗವಹಿಸಿತ್ತು. ಕಾರ್ಯಕ್ರಮ ಪೂರ್ಣಗೊಂಡ ನಂತರ, ಶನಿವಾರ ಮುಂಜಾನೆ 1 ಗಂಟೆಗೆ ಸ್ಥಳದಿಂದ ಖಾಸಗಿ ಬಸ್ ನಲ್ಲಿ ಸಂಗೀತ ತಂಡದ ಸದಸ್ಯರು ಪ್ರಯಾಣಿಸಿದ್ದರು. ಮುಂಜಾನೆ 4.50 ರ ಸುಮಾರಿಗೆ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಜಾತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ರವರು ಜಾತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಮಹಾದೇವಸ್ವಾಮಿ ತಿಳಿಸಿದರು. ಶಿವಮೊಗ್ಗ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ರವರ 132 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. Previous post ‘ಜಾತಿ-ಮತ ಬಿಡಿ, ಮಾನವತೆಗೆ ಜೀವ ಕೊಡಿ ಎಂದಿದ್ದರು ಡಾ.ಬಿ.ಆರ್.ಅಂಬೇಡ್ಕರ್’ : ಪ್ರೊ.ಮಹಾದೇವಸ್ವಾಮಿ
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂರನೇ ಹಂತದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಕಣಕ್ಕಿಳಿಸಿದಂತಾಗಿದೆ. ಪ್ರತಿಷ್ಠಿತ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹಾಲಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಹಾಗು ಮಾಜಿ ಸಚಿವ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್.ಸಿ.ಯೋಗೇಶ್ ಅವರನ್ನು ಕಣಕ್ಕಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ, ಮಾಜಿ ಶಾಸಕ ಕರಿಯಣ್ಣ ಅವರ ಪುತ್ರ ಡಾ.ಶ್ರೀನಿವಾಸ್ ಕರಿಯಣ್ಣ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. Next post ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಪ್ರಕಟ!