ಡಿಸಿ – ಎಸ್ಪಿ ಖಡಕ್ ಸೂಚನೆ : ಮರಳು, ಜಲ್ಲಿ ಕಲ್ಲು ಸಾಗಾಣೆ ಲಾರಿಗಳು ವಶ!

ತೀರ್ಥಹಳ್ಳಿ, ಎ. 15: ಕಾನೂನುಬಾಹಿರವಾಗಿ ನಡೆಯುತ್ತಿರುವ ಮರಳು ಹಾಗೂ ಜಲ್ಲಿ ಕಲ್ಲು ಸಾಗಣೆಗೆ ಕಡಿವಾಣ ಹಾಕುವಂತೆ ಡಿಸಿ ಡಾ.ಆರ್.ಸೆಲ್ವಮಣಿ ಹಾಗೂ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅವರು ಖಡಕ್ ಸೂಚನೆ ರವಾನಿಸಿದ ಬೆನ್ನಲ್ಲೇ, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಕಾನೂನುಬಾಹಿರ ಮರಳು – ಜಲ್ಲಿಕಲ್ಲು ಸಾಗಾಣೆ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

ತೀರ್ಥಹಳ್ಳಿ ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ, ಒಟ್ಟಾರೆ 11 ಮರಳು ಲಾರಿ ಹಾಗೂ 2 ಜಲ್ಲಿಕಲ್ಲು ಸಾಗಣೆ ಮಾಡುತ್ತಿದ್ದ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತರ, ತಹಶೀಲ್ದಾರ್ ಅಮೃತ್ ಅತ್ರೇಶ್ ಮಾರ್ಗದರ್ಶನದಲ್ಲಿ ಅಧಿಕಾರಿ ಸಿಬ್ಬಂದಿಗಳ ಮೂರು ಪ್ರತ್ಯೇಕ ತಂಡಗಳು ತೀರ್ಥಹಳ್ಳಿ ತಾಲೂಕಿನ ವಿವಿಧಡೆ ಕಾರ್ಯಾಚರಣೆ ನಡೆಸಿವೆ. 

ಅರೇಹಳ್ಳಿ, ಮಳಲೂರು, ಬಗ್ಗೋಡಿಗೆ, ಆಗುಂಬೆ, ಮುಡುಬಾ, ಬುಕ್ಲಾಪುರಗಳಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ವಶಕ್ಕೆ ಪಡೆದ ಲಾರಿಗಳನ್ನು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂರನೇ ಹಂತದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಕಣಕ್ಕಿಳಿಸಿದಂತಾಗಿದೆ. ಪ್ರತಿಷ್ಠಿತ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹಾಲಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಹಾಗು ಮಾಜಿ ಸಚಿವ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್.ಸಿ.ಯೋಗೇಶ್ ಅವರನ್ನು ಕಣಕ್ಕಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ, ಮಾಜಿ ಶಾಸಕ ಕರಿಯಣ್ಣ ಅವರ ಪುತ್ರ ಡಾ.ಶ್ರೀನಿವಾಸ್ ಕರಿಯಣ್ಣ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. Previous post ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಪ್ರಕಟ!
ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಕ್ಷೇತ್ರಗಳ ಕಾಂಗ್ರೆಸ್ ಪಾಳೇಯದಲ್ಲಿ ಭಿನ್ನಮತ ಭುಗಿಲೆದ್ದಿದೆ! ಮೂರು ಕ್ಷೇತ್ರಗಳಲ್ಲಿ ಭಾನುವಾರ ಕೆಲ ಟಿಕೆಟ್ ಆಕಾಂಕ್ಷಿಗಳು ಮತ್ತವರ ಬೆಂಬಲಿಗರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಲಾರಂಭಿಸಿದ್ದಾರೆ. ಪ್ರತ್ಯೇಕ ಸಭೆ ನಡೆಸಿದ್ದಾರೆ. ಜೊತೆಗೆ ಕೆಲ ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರದಲ್ಲಿ ಟಿಕೆಟ್ ವಂಚಿತ ಕೆಲ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಯ ಎದುರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ. Next post ಟಿಕೆಟ್ ಘೋಷಣೆ ಬೆನ್ನಲ್ಲೇ ‘ಕೈ’ ಪಾಳೇಯದಲ್ಲಿ ಭುಗಿಲೆದ್ದ ಭಿನ್ನಮತ!