ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯ ಜಾನುವಾರು ಪಾಲಕರು ಅಳಲು ತೋಡಿಕೊಂಡಿದ್ದಾರೆ.

ಶಿಕಾರಿಪುರ ಅಸೆಂಬ್ಲಿ : ಬಿಜೆಪಿಯಿಂದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ನಾಮಪತ್ರ ಸಲ್ಲಿಕೆ

ಬೃಹತ್ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ಮಾಡಿದ ನಾಗರಾಜಗೌಡ – ಜೆಡಿಎಸ್ ಬೆಂಬಲ ಪ್ರಕಟಿಸಿದ ಹೆಚ್.ಡಿ.ಕುಮಾರಸ್ವಾಮಿ!

ಶಿಕಾರಿಪುರ, ಎ. 17: ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ, ಚುನಾವಣಾ ಕಣ ಕಾವೇರಿದೆ. ಸೋಮವಾರ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಹಾಗೂ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ಅವರು ಶಿಕಾರಿಪುರ ಪಟ್ಟಣದಲ್ಲಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಅವರು ಸಾಂಕೇತಿಕವಾಗಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ. ಎ. 19 ರಂದು ಮೆರವಣಿಗೆಯ ಮೂಲಕ ಮತ್ತೊಮ್ಮೆ ಉಮೇದುವಾರಿಕೆ ಅರ್ಜಿ ಸಲ್ಲಿಸಲಿದ್ದಾರೆ. ಈ ವಿಷಯವನ್ನು ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

‘ಮೆರವಣಿಗೆ ಮೂಲಕ ಆಗಮಿಸಿ ಎ. 19 ರಂದು ಉಮೇದುವಾರಿಕೆ ಅರ್ಜಿ ಸಲ್ಲಿಸುತ್ತಿದ್ದೆನೆ. ಬಿ.ಎಸ್.ಯಡಿಯೂರಪ್ಪ ಮೊದಲಾದ ನಾಯಕರು ಉಪಸ್ಥಿತರಿರಲಿದ್ದಾರೆ’ ಎಂದರು.

ಬೃಹತ್ ಮೆರವಣಿಗೆ: ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ನಾಗರಾಜ ಗೌಡ ಅವರು ಉಮೇದುವಾರಿಕೆ ಅರ್ಜಿ ಸಲ್ಲಿಕೆಗೂ ಮುನ್ನ, ಬೆಂಬಲಿಗರೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ಸಾವಿರಾರು ಜನ ಭಾಗವಹಿಸಿದ್ದು ಗಮನ ಸೆಳೆಯಿತು.

ಜೆಡಿಎಸ್ ಬೆಂಬಲ: ಈ ನಡುವೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಶಿಕಾರಿಪುರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕಣಕ್ಕಿಳಿಸದಿರುವ ನಿರ್ಧಾರ ಪ್ರಕಟಿಸಿದ್ದಾರೆ. ಜೊತೆಗೆ ನಾಗರಾಜಗೌಡ ಅವರಿಗೆ ಜೆಡಿಎಸ್ ಪಕ್ಷದ ಬಾಹ್ಯ ಬೆಂಬಲ ಘೋಷಿಸಿದ್ದಾರೆ.ಈ ವಿಷಯವನ್ನು ನಾಗರಾಜ ಗೌಡ ಅವರು ಖಚಿತಪಡಿಸಿದ್ದಾರೆ.

ಶಿಕಾರಿಪುರದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರೊಂದಿಗೆ ದೂರವಾಣಿಯಲ್ಲಿ ಸಮಾಲೋಚಿಸಿದ್ದೆನೆ.

ತಮಗೆ ಬೆಂಬಲ ವ್ಯಕ್ತಪಡಿಸುವಂತೆ ಮನವಿ ಮಾಡಿದ್ದು, ಅವರು ಕೂಡ ಶಿಕಾರಿಪುರದಲ್ಲಿ ಪಕ್ಷದ ಅಭ್ಯರ್ಥಿ ಕಣಕ್ಕಿಳಿಸದೆ ಬೆಂಬಲ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಕ್ಷೇತ್ರಗಳ ಕಾಂಗ್ರೆಸ್ ಪಾಳೇಯದಲ್ಲಿ ಭಿನ್ನಮತ ಭುಗಿಲೆದ್ದಿದೆ! ಮೂರು ಕ್ಷೇತ್ರಗಳಲ್ಲಿ ಭಾನುವಾರ ಕೆಲ ಟಿಕೆಟ್ ಆಕಾಂಕ್ಷಿಗಳು ಮತ್ತವರ ಬೆಂಬಲಿಗರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಲಾರಂಭಿಸಿದ್ದಾರೆ. ಪ್ರತ್ಯೇಕ ಸಭೆ ನಡೆಸಿದ್ದಾರೆ. ಜೊತೆಗೆ ಕೆಲ ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರದಲ್ಲಿ ಟಿಕೆಟ್ ವಂಚಿತ ಕೆಲ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಯ ಎದುರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ. Previous post ಟಿಕೆಟ್ ಘೋಷಣೆ ಬೆನ್ನಲ್ಲೇ ‘ಕೈ’ ಪಾಳೇಯದಲ್ಲಿ ಭುಗಿಲೆದ್ದ ಭಿನ್ನಮತ!
ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯ ಜಾನುವಾರು ಪಾಲಕರು ಅಳಲು ತೋಡಿಕೊಂಡಿದ್ದಾರೆ. Next post ಜಾನುವಾರು ಕಳ್ಳರ ಹಾವಳಿ : ಗಮನಹರಿಸುವರೆ ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು?!