
ಶಿವಮೊಗ್ಗ : ಗಾಡಿಕೊಪ್ಪದಲ್ಲಿ ಯಶಸ್ವಿಯಾಗಿ ನಡೆದ ಜಾತ್ರಾ ಮಹೋತ್ಸವ
ಶಿವಮೊಗ್ಗ, ಎ. 25: ಶಿವಮೊಗ್ಗ ನಗರದ ಹೊರವಲಯ ಗಾಡಿಕೊಪ್ಪದಲ್ಲಿ ಎರಡು ದಿನಗಳ ಕಾಲ ನಡೆದ, ಮುದ್ದು ಬಸವೇಶ್ವರ ಹಾಗೂ ಕೆಂಡದೇಶ್ವರಿ ಜಾತ್ರಾ ಮಹೋತ್ಸವ ಮತ್ತು ಗುಗ್ಗಳ ಕೆಂಡಾರ್ಚನೆಯು ಮಂಗಳವಾರ ಸಂಪನ್ನಗೊಂಡಿತು.
ಸೋಮವಾರ ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಮುಖ್ಯ ರಸ್ತೆಗಳಲ್ಲಿ ಅಡ್ಡಪಲ್ಲಕ್ಕಿ ಮೆರವಣಿಗೆ ಸಾಗಿತು. ನಂತರ ಶ್ರೀಗಳ ಆಶೀರ್ವಚನ ನಡೆಯಿತು.
ಮಂಗಳವಾರ ಮುದ್ದು ಬಸವೇಶ್ವರ ಹಾಗೂ ಕೆಂಡದೇಶ್ವರಿ ಜಾತ್ರಾ ಮಹೋತ್ಸವ ಮತ್ತು ಗುಗ್ಗಳ ಕೆಂಡಾರ್ಚನೆ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಮುಖ್ಯ ರಸ್ತೆಗಳಲ್ಲಿ ದೇವರ ಮೂರ್ತಿಗಳ ಮೆರವಣಿಗೆ ನಡೆಯಿತು. ವೀರಗಾಸೆ ಸೇರಿದಂತೆ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು.
ಜಾತ್ರಾ ಮಹೋತ್ಸವದಲ್ಲಿ ಸ್ಥಳೀಯರು ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮಗಳಿಂದಲೂ ಭಕ್ತಾಧಿಗಳು ಭಾಗವಹಿಸಿದ್ದರು. ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು.
More Stories
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರ ಅಕ್ರಮ ಮರಳು ಲೂಟಿಗೆ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?
shimoga | A temporary break in illegal sand looting after the case of the female officer: Does the administration need to wake up?
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರಕ ಅಕ್ರಮ ಮರಳು ಲೂಟಿಗೆ ತಾತ್ಕಾಲಿಕ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?