ಶಿವಮೊಗ್ಗ/ಭದ್ರಾವತಿ, ಎ. 27: ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗದ ತುಂಗಾ ನಗರ ಹಾಗೂ ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, 24 ಜನರನ್ನು ವಶಕ್ಕೆ ಪಡೆದ ಘಟನೆ ಎ.26 ರ ರಾತ್ರಿ ನಡೆದಿದೆ.  

ಶಿವಮೊಗ್ಗ – ಭದ್ರಾವತಿಯಲ್ಲಿ 24 ಜನರು ಪೊಲೀಸ್ ವಶಕ್ಕೆ

ಶಿವಮೊಗ್ಗ/ಭದ್ರಾವತಿ, ಎ. 27: ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗದ ತುಂಗಾ ನಗರ ಹಾಗೂ ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, 24 ಜನರನ್ನು ವಶಕ್ಕೆ ಪಡೆದ ಘಟನೆ ಎ.26 ರ ರಾತ್ರಿ ನಡೆದಿದೆ.  

ಶಿವಮೊಗ್ಗ ವರದಿ : ತುಂಗಾ ನಗರ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಗಳಾದ ದೂದ್ಯನಾಯ್ಕ್, ಬಳಿಗಾರ್ ನೇತೃತ್ವದ ತಂಡವು ಠಾಣಾ ವ್ಯಾಪ್ತಿಯ ಹೊರವಲಯ ಮತ್ತು ನಿರ್ಜನ ಪ್ರದೇಶಗಳಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದೆ.

ಶಿವಮೊಗ್ಗ ವರದಿ : ತುಂಗಾ ನಗರ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಗಳಾದ ದೂದ್ಯನಾಯ್ಕ್, ಬಳಿಗಾರ್ ನೇತೃತ್ವದ ತಂಡವು ಠಾಣಾ ವ್ಯಾಪ್ತಿಯ ಹೊರವಲಯ ಮತ್ತು ನಿರ್ಜನ ಪ್ರದೇಶಗಳಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದೆ.

ಈ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ಪೂರ್ವಾಪರ ಪರಿಶೀಲಿಸಿದ್ದಾರೆ. 7 ಜನರ ವಿರುದ್ದ ಲಘು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭದ್ರಾವತಿ ವರದಿ: ಭದ್ರಾವತಿ ಹೊಸಮನೆ ಠಾಣೆ ಸಬ್ ಇನ್ಸ್’ಪೆಕ್ಟರ್ ನಿಂಗರಾಜ್ ಮತ್ತವರ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ವಿವಿಧೆಡೆ ಕಾರ್ಯಾಚರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ

ಭದ್ರಾವತಿ ವರದಿ: ಭದ್ರಾವತಿ ಹೊಸಮನೆ ಠಾಣೆ ಸಬ್ ಇನ್ಸ್’ಪೆಕ್ಟರ್ ನಿಂಗರಾಜ್ ಮತ್ತವರ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ವಿವಿಧೆಡೆ ಕಾರ್ಯಾಚರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆದಿದೆ. ಸದರಿ ವ್ಯಕ್ತಿಗಳ ಪೂರ್ವಾಪರ ಪರಿಶೀಲನೆ ನಡೆಸಿ, 12 ಲಘು ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

ಹಾಗೂ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆದಿದೆ. ಸದರಿ ವ್ಯಕ್ತಿಗಳ ಪೂರ್ವಾಪರ ಪರಿಶೀಲನೆ ನಡೆಸಿ, 12 ಲಘು ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ವಿಧಾನಸಭಾ ಚುನಾವಣಾ ಕಣ ರಂಗೇರಲಾರಂಭಿಸಿದೆ. ಈ ನಡುವೆ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ, ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಆಗಮಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಎ. 27 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ. ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗ ನಗರಕ್ಕೆ ಆಗಮಿಸಲಿರುವ ಈ ಇಬ್ಬರು ನಾಯಕರು, ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ಮೂಲಕ ಉಡುಪಿ ಜಿಲ್ಲೆಗೆ ತೆರಳುತ್ತಿದ್ದಾರೆ. ಮತ್ತೊಂದೆಡೆ, ಮೇ ತಿಂಗಳಲ್ಲಿ ಬಿಜೆಪಿ ನಾಯಕರ ಪ್ರಧಾನಿ ನರೇಂದ್ರ, ಗೃಹ ಸಚಿವ ಅಮಿತ್ ಶಾ, ಆ ಪಕ್ಷದ ರಾಷ್ಟ್ರಾಧ್ಯಕ್ಷ ನಡ್ಡಾ ಅವರು ಪ್ರತ್ಯೇಕವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದು ತಿಳಿದುಬಂದಿದ್ದು, ಅಧಿಕೃತ ದಿನಾಂಕಗಳು ಇನ್ನಷ್ಟೆ ಖಚಿತವಾಗಬೇಕಾಗಿದೆ. Previous post ಚುನಾವಣಾ ಪ್ರಚಾರ : ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ನಾಯಕರು!
ತಮಿಳುನಾಡಿನ ನಾಡಗೀತೆ ಅರ್ಧಕ್ಕೆ ಸ್ಥಗಿತಗೊಳಿಸಿ, ಕನ್ನಡ ನಾಡಗೀತೆ ಹಾಡು ಹಾಕಿದ ಘಟನೆ ಬಿಜೆಪಿ ಕಾರ್ಯಕ್ರಮದಲ್ಲಿ ಗುರುವಾರ ನಡೆಯಿತು. ಶಿವಮೊಗ್ಗ ನಗರದ ಎನ್ಇಎಸ್ ಮೈದಾನದಲ್ಲಿ ಗುರುವಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮಿಳು ಬಾಂಧವರ ಸಮಾವೇಶವನ್ನು ಬಿಜೆಪಿ ಪಕ್ಷ ಹಮ್ಮಿಕೊಂಡಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತಮಿಳುನಾಡಿನ ಬಿಜೆಪಿ ಮುಖಂಡ ಅಣ್ಣಾಮಲೈ ಭಾಗವಹಿಸಿದ್ದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಸೇರಿದಂತೆ ತಮಿಳು ಸಮಾಜದ ಮುಖಂಡರು ಉಪಸ್ಥಿತರಿದ್ದರು. Next post ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ ಅರ್ಧಕ್ಕೆ ಸ್ಥಗಿತ!