ತಮಿಳುನಾಡಿನ ನಾಡಗೀತೆ ಅರ್ಧಕ್ಕೆ ಸ್ಥಗಿತಗೊಳಿಸಿ, ಕನ್ನಡ ನಾಡಗೀತೆ ಹಾಡು ಹಾಕಿದ ಘಟನೆ ಬಿಜೆಪಿ ಕಾರ್ಯಕ್ರಮದಲ್ಲಿ ಗುರುವಾರ ನಡೆಯಿತು. ಶಿವಮೊಗ್ಗ ನಗರದ ಎನ್ಇಎಸ್ ಮೈದಾನದಲ್ಲಿ ಗುರುವಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮಿಳು ಬಾಂಧವರ ಸಮಾವೇಶವನ್ನು ಬಿಜೆಪಿ ಪಕ್ಷ ಹಮ್ಮಿಕೊಂಡಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತಮಿಳುನಾಡಿನ ಬಿಜೆಪಿ ಮುಖಂಡ ಅಣ್ಣಾಮಲೈ ಭಾಗವಹಿಸಿದ್ದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಸೇರಿದಂತೆ ತಮಿಳು ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ ಅರ್ಧಕ್ಕೆ ಸ್ಥಗಿತ!

ಕನ್ನಡ ನಾಡಗೀತೆಗೆ ಕೆ.ಎಸ್.ಈಶ್ವರಪ್ಪ ಸೂಚನೆ : ಅಣ್ಣಾಮಲೈ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಡೆದ ಘಟನೆ

ಶಿವಮೊಗ್ಗ, ಎ. 27: ತಮಿಳುನಾಡಿನ ನಾಡಗೀತೆ ಅರ್ಧಕ್ಕೆ ಸ್ಥಗಿತಗೊಳಿಸಿ, ಕನ್ನಡ ನಾಡಗೀತೆ ಹಾಡು ಹಾಕಿದ ಘಟನೆ ಬಿಜೆಪಿ ಕಾರ್ಯಕ್ರಮದಲ್ಲಿ ಗುರುವಾರ ನಡೆಯಿತು.

ಶಿವಮೊಗ್ಗ ನಗರದ ಎನ್ಇಎಸ್ ಮೈದಾನದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮಿಳು ಬಾಂಧವರ ಸಮಾವೇಶವನ್ನು ಬಿಜೆಪಿ ಪಕ್ಷ ಹಮ್ಮಿಕೊಂಡಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತಮಿಳು ನಾಡು ಬಿಜೆಪಿ ಅಧ್ಯಕ್ಷರೂ ಆದ ಕರ್ನಾಟಕ ಚುನಾವಣೆಯ ಸಹ ಉಸ್ತುವಾರಿ ಕೆ.ಅಣ್ಣಾಮಲೈ ಭಾಗವಹಿಸಿದ್ದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಸೇರಿದಂತೆ ತಮಿಳು ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತಮಿಳು ನಾಡು ಬಿಜೆಪಿ ಅಧ್ಯಕ್ಷರೂ ಆದ ಕರ್ನಾಟಕ ಚುನಾವಣೆಯ ಸಹ ಉಸ್ತುವಾರಿ ಕೆ.ಅಣ್ಣಾಮಲೈ ಭಾಗವಹಿಸಿದ್ದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಸೇರಿದಂತೆ ತಮಿಳು ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ನಿರೂಪಕರು ನಾಡಗೀತೆ ಹಾಡಲಾಗುತ್ತದೆ ಎಂದು ಹೇಳಿದ ಹಿನ್ನೆಲೆಯಲ್ಲಿ, ಸಮಾರಂಭದಲ್ಲಿದ್ದವರೆಲ್ಲರೂ ಗೌರವ ಸೂಚಿಸಲು ಎದ್ದು ನಿಂತರು. ಈ ವೇಳೆ ತಮಿಳುನಾಡು ರಾಜ್ಯದ ನಾಡಗೀತೆಯ ಧ್ವನಿಮುದ್ರಿತ ಹಾಡು ಸ್ಪೀಕರ್ ನಲ್ಲಿ ಕೇಳಿಬರಲಾರಂಭಿಸಿತು.

ತಕ್ಷಣವೇ ವೇದಿಕೆಯ ಮುಂಭಾಗಕ್ಕೆ ಆಗಮಿಸಿದ ಕೆ.ಎಸ್.ಈಶ್ವರಪ್ಪ ಅವರು, ಕನ್ನಡ ನಾಡಗೀತೆ ಹಾಡುವವರು ಯಾರಾದರು ಇದ್ದರೆ ವೇದಿಕೆ ಮೇಲೆ ಬಂದು ಹಾಡುವಂತೆ ಮೈಕ್ ಮೂಲಕ ಮನವಿ ಮಾಡಿದರು.  

ಅವರು ಮನವಿ ಮಾಡಿಕೊಳ್ಳುತ್ತಿದ್ದ ವೇಳೆಯೇ, ತಮಿಳುನಾಡು ನಾಡಗೀತೆ ಸ್ಥಗಿತಗೊಳಿಸಲಾಗಿತ್ತು. ನಂತರ ಕನ್ನಡ ನಾಡಗೀತೆಯ ಧ್ವನಿಮುದ್ರಿತ ಹಾಡನ್ನು ಸಭೆಯಲ್ಲಿ ಹಾಕಲಾಯಿತು.

ಯಡಿಯೂರಪ್ಪ – ಈಶ್ವರಪ್ಪ ಜೋಡೆತ್ತುಗಳಿದ್ದಂತೆ : ಅಣ್ಣಾಮಲೈ

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಣ್ಣಾಮಲೈ ಅವರು ಮಾತನಾಡಿ, ‘ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪರವರು ಜೋಡೆತ್ತುಗಳಿದ್ದಂತೆ. ಇವರಿಬ್ಬರು ಚುನಾವಣೆಗೆ ಸ್ಪರ್ಧಿಸದೆ, ಬಿಜೆಪಿಗೆ ಪೂರ್ಣ ಬಹುಮತ ದೊರಕಿಸಿಕೊಡುವ ನಿಟ್ಟಿನಲ್ಲಿ ಹೋರಾಡುತ್ತಿದ್ದಾರೆ’ ಎಂದು ತಿಳಿಸಿದರು.

ಶಿವಮೊಗ್ಗ/ಭದ್ರಾವತಿ, ಎ. 27: ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗದ ತುಂಗಾ ನಗರ ಹಾಗೂ ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, 24 ಜನರನ್ನು ವಶಕ್ಕೆ ಪಡೆದ ಘಟನೆ ಎ.26 ರ ರಾತ್ರಿ ನಡೆದಿದೆ.   Previous post ಶಿವಮೊಗ್ಗ – ಭದ್ರಾವತಿಯಲ್ಲಿ 24 ಜನರು ಪೊಲೀಸ್ ವಶಕ್ಕೆ
#ಭದ್ರಾದಿಂದತುಂಗಭದ್ರಾಜಲಾಶಯಕ್ಕೆನೀರುಬಿಡುಗಡೆ, Next post ಭದ್ರಾ ಡ್ಯಾಂನಿಂದ ನೀರು ಬಿಡುಗಡೆ : ನದಿಪಾತ್ರದಲ್ಲಿ ಎಚ್ಚರವಹಿಸಲು ಸೂಚನೆ