ಚಿತ್ರನಟ ಶಿವರಾಜಕುಮಾರ್ ಅವರು ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಬೀಡುಬಿಟ್ಟಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ಆಯೋಜಿತವಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿರವರ ಜೊತೆ ವೇದಿಕೆ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಸಮಾರಂಭದಲ್ಲಿ ಮಾತನಾಡಿದ ಶಿವರಾಜಕುಮಾರ್, ‘ತಾವು ರಾಹುಲ್ ಗಾಂಧಿ ಅಭಿಮಾನಿಯಾಗಿದ್ದೆನೆ. ಅವರನ್ನು ನೋಡಲೆಂದು ಆಗಮಿಸಿದ್ದೆನೆ. ಭಾರತ್ ಜೋಡೋ ಯಾತ್ರೆ ನೋಡಿ ತಮಗೆ ಅತೀವ ಸಂತೋಷ ಉಂಟಾಯಿತು. ಅವರ ಫಿಟ್ನೆಸ್ ಇಷ್ಟವಾಯಿತು. ಒಂದು ಉದ್ದೇಶಕ್ಕಾಗಿ ಇಡೀ ದೇಶವನ್ನು ನಡೆದುಕೊಂಡು ಹೋದ ಅವರ ಬಗ್ಗೆ ಅಭಿಮಾನವಿದೆ.

ತೀರ್ಥಹಳ್ಳಿ – ‘ರಾಹುಲ್ ಗಾಂಧಿ ಅಭಿಮಾನಿಯಾಗಿ ಬಂದಿದ್ದೆನೆ’ : ನಟ ಶಿವರಾಜಕುಮಾರ್

ತೀರ್ಥಹಳ್ಳಿ, ಮೇ  2: ಚಿತ್ರನಟ ಶಿವರಾಜಕುಮಾರ್ ಅವರು ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಬೀಡುಬಿಟ್ಟಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.

ಈ ನಡುವೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ಆಯೋಜಿತವಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿರವರ ಜೊತೆ ವೇದಿಕೆ ಹಂಚಿಕೊಂಡು ಗಮನ ಸೆಳೆದಿದ್ದಾರೆ.

ಸಮಾರಂಭದಲ್ಲಿ ಮಾತನಾಡಿದ ಶಿವರಾಜಕುಮಾರ್, ‘ತಾವು ರಾಹುಲ್ ಗಾಂಧಿ ಅಭಿಮಾನಿಯಾಗಿದ್ದೆನೆ. ಅವರನ್ನು ನೋಡಲೆಂದು ಆಗಮಿಸಿದ್ದೆನೆ. ಭಾರತ್ ಜೋಡೋ ಯಾತ್ರೆ ನೋಡಿ ತಮಗೆ ಅತೀವ ಸಂತೋಷ ಉಂಟಾಯಿತು.

ಅವರ ಫಿಟ್ನೆಸ್ ಇಷ್ಟವಾಯಿತು. ಒಂದು ಉದ್ದೇಶಕ್ಕಾಗಿ ಇಡೀ ದೇಶವನ್ನು ನಡೆದುಕೊಂಡು ಹೋದ ಅವರ ಬಗ್ಗೆ ಅಭಿಮಾನವಿದೆ.

ನನಗೆ ರಾಜಕೀಯ ಗೊತ್ತಿಲ್ಲ. ನಾನೊಬ್ಬ ನಟನಷ್ಟೆ. ನನ್ನ ಪತ್ನಿ ಗೀತಾ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಈಗಾಗಲೇ ಅವರು ಒಮ್ಮೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಹಾಗೆಯೇ ಮಾವ ಬಂಗಾರಪ್ಪ, ಮಧು ಬಂಗಾರಪ್ಪ ಮೊದಲಿನಿಂದಲೂ ರಾಜಕಾರಣದಲ್ಲಿದ್ದರು ಎಂದರು.

ಯಾರನ್ನು ಆಯ್ಕೆ ಮಾಡಬೇಕು ಎಂಬುವುದು ನಿಮಗೆ ಗೊತ್ತಿದೆ. ಜಯಭೇರಿ ಬಾರಿಸಲಿ ಎಂದು ಹಾಗೂ ನೀವೆಲ್ಲ ಆಶೀರ್ವಾದ ಮಾಡಿ ಎಂದು ಕೋರಿಕೊಳ್ಳುತ್ತೆನೆ ಎಂದು ಶಿವರಾಜಕುಮಾರ್ ತಿಳಿಸಿದ್ದಾರೆ.

‘ಬಿಜೆಪಿಯವರಿಗೆ 40 ನಂಬರ್ ಮೇಲೆ ಬಹಳ ಪ್ರೀತಿಯಿದೆ. ಈ ಕಾರಣದಿಂದ ಅವರಿಗೆ 40 ಸೀಟ್ ಮಾತ್ರ ನೀಡಿ’ ಎಂದು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಮತದಾರರಿಗೆ ಕರೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿ ಕಳ್ಳತನ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಮುಂದೆಯೂ ಹೀಗೆಯೇ ಮಾಡಲಿದೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ ಎಂದರು. Previous post ತೀರ್ಥಹಳ್ಳಿ – ‘ಬಿಜೆಪಿಯವರಿಗೆ 40 ನಂಬರ್ ಎಂದರೇ ಇಷ್ಟ – ಅವರಿಗೆ 40 ಸೀಟ್ ಮಾತ್ರ ನೀಡಿ’ : ರಾಹುಲ್ ಗಾಂಧಿ
ಶಿಕಾರಿಪುರದ ಮನೆ ಮೇಲೆ ಕಲ್ಲು ತೂರಾಟ ನಡೆದಾಗ ಕುಟುಂಬದವರು ಕಣ್ಣೀರು ಹಾಕಿದ್ದೆವೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬೆಂಡೆಕಟ್ಟೆ ತಾಂಡಾ, ಬಳೂರು, ಗುಳೇದಾಹಳ್ಳಿ ತಾಂಡಾಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ವೇಳೆ ಅವರು ಮಾತನಾಡಿದರು. ನಾನು ಏನಾದರೂ ತಪ್ಪು ಮಾತಾಡಿದರೆ ನನ್ನ ಮನೆತನ ಹಾಳಾಗಲಿ. ದೇವಾಲಯದ ಮುಂದೆ ನಿಂತುಕೊಂಡು ಮಾತಾಡುತ್ತಿದ್ದೆನೆ. ಸೇವೆ ಮಾಡಿದ ಮನೆತನಕ್ಕೆ ಕಲ್ಲು ಹೊಡೆಸುವ ಕೆಲಸವನ್ನು ವಿರೋಧಿಗಳು ಮಾಡಿದ್ದಾರೆ ಎಂದು ಹೇಳಿದರು. Next post ಶಿಕಾರಿಪುರ – ‘ಮನೆ ಮೇಲೆ ಕಲ್ಲುತೂರಾಟ ನಡೆದಾಗ ಕಣ್ಣೀರು ಹಾಕಿದ್ದೆವೆ’ : ಸಂಸದ ಬಿ.ವೈ.ರಾಘವೇಂದ್ರ