ಶಿಕಾರಿಪುರದ ಮನೆ ಮೇಲೆ ಕಲ್ಲು ತೂರಾಟ ನಡೆದಾಗ ಕುಟುಂಬದವರು ಕಣ್ಣೀರು ಹಾಕಿದ್ದೆವೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬೆಂಡೆಕಟ್ಟೆ ತಾಂಡಾ, ಬಳೂರು, ಗುಳೇದಾಹಳ್ಳಿ ತಾಂಡಾಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ವೇಳೆ ಅವರು ಮಾತನಾಡಿದರು. ನಾನು ಏನಾದರೂ ತಪ್ಪು ಮಾತಾಡಿದರೆ ನನ್ನ ಮನೆತನ ಹಾಳಾಗಲಿ. ದೇವಾಲಯದ ಮುಂದೆ ನಿಂತುಕೊಂಡು ಮಾತಾಡುತ್ತಿದ್ದೆನೆ. ಸೇವೆ ಮಾಡಿದ ಮನೆತನಕ್ಕೆ ಕಲ್ಲು ಹೊಡೆಸುವ ಕೆಲಸವನ್ನು ವಿರೋಧಿಗಳು ಮಾಡಿದ್ದಾರೆ ಎಂದು ಹೇಳಿದರು.

ಶಿಕಾರಿಪುರ – ‘ಮನೆ ಮೇಲೆ ಕಲ್ಲುತೂರಾಟ ನಡೆದಾಗ ಕಣ್ಣೀರು ಹಾಕಿದ್ದೆವೆ’ : ಸಂಸದ ಬಿ.ವೈ.ರಾಘವೇಂದ್ರ

ಶಿಕಾರಿಪುರ, ಮೇ 2: ಶಿಕಾರಿಪುರದ ಮನೆ ಮೇಲೆ ಕಲ್ಲು ತೂರಾಟ ನಡೆದಾಗ ಕುಟುಂಬದವರು ಕಣ್ಣೀರು ಹಾಕಿದ್ದೆವೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬೆಂಡೆಕಟ್ಟೆ ತಾಂಡಾ, ಬಳೂರು, ಗುಳೇದಾಹಳ್ಳಿ ತಾಂಡಾಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ವೇಳೆ ಅವರು ಮಾತನಾಡಿದರು.

ನಾನು ಏನಾದರೂ ತಪ್ಪು ಮಾತಾಡಿದರೆ ನನ್ನ ಮನೆತನ ಹಾಳಾಗಲಿ. ದೇವಾಲಯದ ಮುಂದೆ ನಿಂತುಕೊಂಡು ಮಾತಾಡುತ್ತಿದ್ದೆನೆ. ಸೇವೆ ಮಾಡಿದ ಮನೆತನಕ್ಕೆ ಕಲ್ಲು ಹೊಡೆಸುವ ಕೆಲಸವನ್ನು ವಿರೋಧಿಗಳು ಮಾಡಿದ್ದಾರೆ ಎಂದು ಹೇಳಿದರು.

ಮೀಸಲಾತಿ ಕುರಿತಂತೆ ಅಪಪ್ರಚಾರ ಮಾಡಲಾಗುತ್ತಿದೆ. ಯುವಕರಿಗೆ ತಪ್ಪು ತಿಳಿವಳಿಕೆ ಮೂಡಿಸುವ ಕಾರ್ಯ ನಡೆಸಲಾಗಿದೆ. ಸರ್ಕಾರ ಯಾರಿಗೂ ಅನ್ಯಾಯ ಮಾಡಿಲ್ಲ ಎಂಬುವುದನ್ನು ಅರಿತುಕೊಳ್ಳಬೇಕು ಎಂದು ಮನವಿ ಮಾಡಿದರು.

ಚಿತ್ರನಟ ಶಿವರಾಜಕುಮಾರ್ ಅವರು ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಬೀಡುಬಿಟ್ಟಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ಆಯೋಜಿತವಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿರವರ ಜೊತೆ ವೇದಿಕೆ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಸಮಾರಂಭದಲ್ಲಿ ಮಾತನಾಡಿದ ಶಿವರಾಜಕುಮಾರ್, ‘ತಾವು ರಾಹುಲ್ ಗಾಂಧಿ ಅಭಿಮಾನಿಯಾಗಿದ್ದೆನೆ. ಅವರನ್ನು ನೋಡಲೆಂದು ಆಗಮಿಸಿದ್ದೆನೆ. ಭಾರತ್ ಜೋಡೋ ಯಾತ್ರೆ ನೋಡಿ ತಮಗೆ ಅತೀವ ಸಂತೋಷ ಉಂಟಾಯಿತು. ಅವರ ಫಿಟ್ನೆಸ್ ಇಷ್ಟವಾಯಿತು. ಒಂದು ಉದ್ದೇಶಕ್ಕಾಗಿ ಇಡೀ ದೇಶವನ್ನು ನಡೆದುಕೊಂಡು ಹೋದ ಅವರ ಬಗ್ಗೆ ಅಭಿಮಾನವಿದೆ. Previous post ತೀರ್ಥಹಳ್ಳಿ – ‘ರಾಹುಲ್ ಗಾಂಧಿ ಅಭಿಮಾನಿಯಾಗಿ ಬಂದಿದ್ದೆನೆ’ : ನಟ ಶಿವರಾಜಕುಮಾರ್
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ 20 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.  33 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದವ. ಶಿಕ್ಷೆಯ ಜೊತೆಗೆ 20 ಸಾವಿರ ರೂ. ದಂಡ ಕೂಡ ವಿಧಿಸಲಾಗಿದ್ದು, ದಂಡ ಕಟ್ಟಲು ವಿಫಲವಾದಲ್ಲಿ 6 ತಿಂಗಳ ಕಾಲ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಮೇ 2 ರಂದು ನೀಡಿರುವ ತೀರ್ಪಿನಲ್ಲಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು. Next post ಬಾಲಕಿಗೆ ಲೈಂಗಿಕ ಕಿರುಕುಳ : ಯುವಕನಿಗೆ 20 ವರ್ಷ ಜೈಲು ಶಿಕ್ಷೆ!