ಮೊಬೈಲ್ ನಲ್ಲಿ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ ನೀಡುತ್ತಿದ್ದ ಯುವಕನಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಶಿವಮೊಗ್ಗ ನಗರದ ನಿವಾಸಿ 24 ವರ್ಷ ವಯೋಮಾನದ ಯುವಕನೆ ಜೈಲು ಶಿಕ್ಷೆಗೆ ಗುರಿಯಾದವನೆಂದು ಗುರುತಿಸಲಾಗಿದೆ. ಜೈಲು ಶಿಕ್ಷೆಯ ಜೊತೆಗೆ 3,01,000 ರೂ. ದಂಡ ವಿಧಿಸಲಾಗಿದೆ. ಮೇ 2 ರಂದು ನ್ಯಾಯಾಧೀಶರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಮೊಬೈಲ್ ಪೋನ್ ಮೂಲಕ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ : ಯುವಕನಿಗೆ ಜೈಲು ಶಿಕ್ಷೆ!

ಶಿವಮೊಗ್ಗ, ಮೇ 3: ಮೊಬೈಲ್ ನಲ್ಲಿ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ ನೀಡುತ್ತಿದ್ದ ಯುವಕನಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಶಿವಮೊಗ್ಗ ನಗರದ ನಿವಾಸಿ 24 ವರ್ಷ ವಯೋಮಾನದ ಯುವಕನೆ ಜೈಲು ಶಿಕ್ಷೆಗೆ ಗುರಿಯಾದವನೆಂದು ಗುರುತಿಸಲಾಗಿದೆ. ಜೈಲು ಶಿಕ್ಷೆಯ ಜೊತೆಗೆ 3,01,000 ರೂ. ದಂಡ ವಿಧಿಸಲಾಗಿದೆ. ಮೇ 2 ರಂದು ನ್ಯಾಯಾಧೀಶರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ: ಶಿಕ್ಷೆಗೊಳಗಾದ ಯುವಕನು, 2019 ರಲ್ಲಿ 14 ವರ್ಷ ವಯೋಮಾನದ ಬಾಲಕಿಯ ಅಶ್ಲೀಲ ಫೋಟೋಗಳನ್ನು ಮೊಬೈಲ್ ಪೋನ್ ಮೂಲಕ ತೆಗೆದು ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಕುರಿತಂತೆ ನೊಂದ ಬಾಲಕಿಯ ತಾಯಿಯು ಶಿವಮೊಗ್ಗ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಅಂದು ಮಹಿಳಾ ಪೊಲೀಸ್ ಠಾಣೆ ಇನ್ಸ್’ಪೆಕ್ಟರ್ ಆಗಿದ್ದ ಅಭಯಪ್ರಕಾಶ್ ಸೋಮನಾಳ್ ಹಾಗೂ ಮಹಿಳಾ ಸಿಬ್ಬಂದಿ ಸರೋಜರವರು ಪ್ರಕರಣದ ತನಿಖೆ ನಡೆಸಿದ್ದರು. ಆರೋಪಿತ ಯುವಕನನ್ನು ಬಂಧಿಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ದಾಖಲಿಸಿದ್ದರು.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ 20 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.  33 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದವ. ಶಿಕ್ಷೆಯ ಜೊತೆಗೆ 20 ಸಾವಿರ ರೂ. ದಂಡ ಕೂಡ ವಿಧಿಸಲಾಗಿದ್ದು, ದಂಡ ಕಟ್ಟಲು ವಿಫಲವಾದಲ್ಲಿ 6 ತಿಂಗಳ ಕಾಲ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಮೇ 2 ರಂದು ನೀಡಿರುವ ತೀರ್ಪಿನಲ್ಲಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು. Previous post ಬಾಲಕಿಗೆ ಲೈಂಗಿಕ ಕಿರುಕುಳ : ಯುವಕನಿಗೆ 20 ವರ್ಷ ಜೈಲು ಶಿಕ್ಷೆ!
ಮೊಟ್ಟಮೊದಲ ಬಾರಿಗೆ ಮಲೆನಾಡು ಭಾಗದಲ್ಲಿ ಮೂತ್ರಪಿಂಡ ಕಸಿ (ಕಿಡ್ನಿ ಟ್ರಾನ್ಸ್ಪ್ಲಾಂಟ್) ಶಸ್ತ್ರಚಿಕಿತ್ಸೆಯನ್ನು ಎನ್ ಯು ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ. 'ಇದೊಂದು ಮೈಲಿಗಲ್ಲಾಗಿದೆ' ಎಂದು ಎನ್‌ಯು ಆಸತ್ರೆ ಸಹಾಯಕ ವೈದ್ಯಕೀಯ ನಿರ್ದೇಶಕ ಡಾ.ಪ್ರವೀಣ್ ಮಾಳವದೆ ತಿಳಿಸಿದ್ದಾರೆ. ಮಾಚೇನಹಳ್ಳಿಯಲ್ಲಿಯ ಎನ್‌ಯು ಆಸ್ಪತ್ರೆಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 23 ವರ್ಷದ ಯುವತಿ ಉಸಿರಾಟದ ತೊಂದರೆಯಿಂದ ಬಳುತ್ತಿದ್ದರು. ಅವರನ್ನು ಪರೀಕ್ಷಿಸಿದಾಗ ಅಧಿಕ ರಕ್ತದೊತ್ತಡ, ಮೂತ್ರಪಿಂಡ ವೈಫಲ್ಯ ಕಂಡುಬಂದಿತ್ತು. Next post ಮೂತ್ರಪಿಂಡ ಕಸಿ ಯಶಸ್ವಿ ಶಸ್ತ್ರ ಚಿಕಿತ್ಸೆ : ಶಿವಮೊಗ್ಗ ಎನ್.ಯು. ಆಸ್ಪತ್ರೆ ವೈದ್ಯರ ತಂಡದ ಸಾಧನೆ!