ಸೊರಬ - ಕಾರು ಡಿಕ್ಕಿ : ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರ ದಾರುಣ ಸಾವು!

ಸೊರಬ : ಕಾರು – ಬೈಕ್ ನಡುವೆ ಅಪಘಾತ ; ಸಹೋದರರಿಬ್ಬರ ದಾರುಣ ಸಾವು!

ಸೊರಬ, ಮೇ 3: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಹಾಗೂ ಹಿಂಬದಿ ಸವಾರ ಮೃತಪಟ್ಟ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಉಳವಿ ಸಮೀಪ ಬುಧವಾರ ನಡೆದಿದೆ. ಮೃತರಿಬ್ಬರು ಸಹೋದರರಾಗಿದ್ದಾರೆ.

ಸಾಗರದ ರಾಮನಗರದ ನಿವಾಸಿಗಳಾದ ವೆಲ್ಡಿಂಗ್ ಕೆಲಸ ಮಾಡುವ ಸುಹೇಲ್ (27) ಹಾಗೂ ಅಫ್ರೀದ್ (21) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಫ್ರೀದ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸುಹೇಲ್ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ.

ಉಳವಿಯಲ್ಲಿ ಆಯೋಜಿತವಾಗಿದ್ದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸೊರಬ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಅವಘಡದ ಕುರಿತಂತೆ ಇನ್ನಷ್ಟೆ ಹೆಚ್ಚಿನ ಇವರಗಳು ಲಭ್ಯವಾಗಬೇಕಾಗಿದೆ.

ಮೊಟ್ಟಮೊದಲ ಬಾರಿಗೆ ಮಲೆನಾಡು ಭಾಗದಲ್ಲಿ ಮೂತ್ರಪಿಂಡ ಕಸಿ (ಕಿಡ್ನಿ ಟ್ರಾನ್ಸ್ಪ್ಲಾಂಟ್) ಶಸ್ತ್ರಚಿಕಿತ್ಸೆಯನ್ನು ಎನ್ ಯು ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ. 'ಇದೊಂದು ಮೈಲಿಗಲ್ಲಾಗಿದೆ' ಎಂದು ಎನ್‌ಯು ಆಸತ್ರೆ ಸಹಾಯಕ ವೈದ್ಯಕೀಯ ನಿರ್ದೇಶಕ ಡಾ.ಪ್ರವೀಣ್ ಮಾಳವದೆ ತಿಳಿಸಿದ್ದಾರೆ. ಮಾಚೇನಹಳ್ಳಿಯಲ್ಲಿಯ ಎನ್‌ಯು ಆಸ್ಪತ್ರೆಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 23 ವರ್ಷದ ಯುವತಿ ಉಸಿರಾಟದ ತೊಂದರೆಯಿಂದ ಬಳುತ್ತಿದ್ದರು. ಅವರನ್ನು ಪರೀಕ್ಷಿಸಿದಾಗ ಅಧಿಕ ರಕ್ತದೊತ್ತಡ, ಮೂತ್ರಪಿಂಡ ವೈಫಲ್ಯ ಕಂಡುಬಂದಿತ್ತು. Previous post ಮೂತ್ರಪಿಂಡ ಕಸಿ ಯಶಸ್ವಿ ಶಸ್ತ್ರ ಚಿಕಿತ್ಸೆ : ಶಿವಮೊಗ್ಗ ಎನ್.ಯು. ಆಸ್ಪತ್ರೆ ವೈದ್ಯರ ತಂಡದ ಸಾಧನೆ!
ಶಿವಮೊಗ್ಗ ನಗರದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಆಟೋ ಚಾಲಕರಿಬ್ಬರು ತಮಗೆ ಸಿಕ್ಕಿದ್ದ ನಗದು ಹಾಗೂ ಮೊಬೈಲ್ ಪೋನ್ ನನ್ನು, ಪೊಲೀಸರ ಮೂಲಕ ಕಳೆದುಕೊಂಡವರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಇತರರಿಗೆ ಮಾದರಿಯಾಗಿದ್ದಾರೆ. ಇವರ ಪ್ರಾಮಾಣಿಕತೆ, ಉತ್ತಮ ನಡವಳಿಕೆ ಮೆಚ್ಚಿ ಪೊಲೀಸ್ ಇಲಾಖೆ ಹಾಗೂ ವಸ್ತುಗಳನ್ನು ಕಳೆದುಕೊಂಡಿದ್ದವರು ಸದರಿ ಆಟೋ ಚಾಲಕರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ. Next post ಶಿವಮೊಗ್ಗ : ಆಟೋ ಚಾಲಕರಿಬ್ಬರ ಪ್ರಾಮಾಣಿಕತೆ!