
ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ದಿನಾಂಕ ವಿಸ್ತರಣೆ
ಶಿವಮೊಗ್ಗ, ಮೇ 5: 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ, ಭದ್ರಾ ಜಲಾಶಯದಿಂದ ಬಲ ಹಾಗೂ ಎಡದಂಡೆ ನಾಲೆಗಳಿಗೆ ಹರಿಸಲಾಗುತ್ತಿರುವ ನೀರಿನ ಹರಿವನ್ನು ಇನ್ನಷ್ಟು ದಿನಗಳವರೆಗೆ ವಿಸ್ತರಿಸಲಾಗಿದೆ.
ಪ್ರಸ್ತುತ ಎಡದಂಡೆ ನಾಲೆಗೆ 01.01.2023 ರ ರಾತ್ರಿಯಿಂದ ಹಾಗೂ ಬಲದಂಡೆ ನಾಲೆಗೆ 03.01.2023 ರ ರಾತ್ರಿಯಿಂದ ನೀರನ್ನು ಹರಿಸಲಾಗುತ್ತಿದೆ.
ಭದ್ರಾ ಅಚ್ಚುಕಟ್ಟು ಪ್ರದೇಶದ 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ನೀರನ್ನು ಹರಿಸಲು ಸರ್ಕಾರದ ಅನುಮೋದನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಭದ್ರಾ ಎಡದಂಡೆ ನಾಲೆಗೆ ಮೇ 12 ರವರೆಗೆ ಹಾಗೂ ಬಲದಂಡೆ ನಾಲೆಗೆ ಮೇ 18 ರವರೆಗೆ ಹೆಚ್ಚುವರಿಯಾಗಿ ನೀರನ್ನು ಹರಿಸಲಾಗುವುದು. ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
More Stories
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರ ಅಕ್ರಮ ಮರಳು ಲೂಟಿಗೆ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?
shimoga | A temporary break in illegal sand looting after the case of the female officer: Does the administration need to wake up?
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರಕ ಅಕ್ರಮ ಮರಳು ಲೂಟಿಗೆ ತಾತ್ಕಾಲಿಕ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?