ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ! ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..!

-ಬಿ.ರೇಣುಕೇಶ್-

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ!

ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಚುನಾವಣಾ ಕಣಕ್ಕಿಳಿದಿರುವ ಅಭ್ಯರ್ಥಿಗಳು, ಕಾರ್ಯಕರ್ತರು, ಬೆಂಬಲಿಗರು ಬಿರುಸಿನ ಪ್ರಚಾರ ಕಾರ್ಯದಲ್ಲಿ ತಲ್ಲೀನವಾಗಿದ್ದಾರೆ. ಮತದಾರರ ಮನವೊಲಿಕೆಗೆ ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಮನೆ ಮನೆಗೆ ತೆರಳಿ ಕರಪತ್ರ ವಿತರಣೆ ಮಾಡಲಾಗುತ್ತಿದೆ.

ಇದೆಲ್ಲದರ ನಡುವೆ ವಿವಿಧ ಪಕ್ಷಗಳ ಸ್ಟಾರ್ ಕ್ಯಾಂಪೇನರ್ ಗಳು ಸಮಾವೇಶ, ಸಭೆ, ರೋಡ್ ಶೋ ಪಾದಯಾತ್ರೆಗಳ ಮೂಲಕ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮತದಾರರಿಗೆ ಮನವಿ ಮಾಡುತ್ತಿದ್ದಾರೆ.

ಇದರ ಜೊತೆಗೆ ಕೆಲ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ, ಆಟೋ ಮತ್ತೀತರ ವಾಹನಗಳಲ್ಲಿ ಮೈಕ್ ಮೂಲಕ ಪ್ರಚಾರ ನಡೆಸುತ್ತಿರುವುದು ಕಂಡುಬರುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಅಬ್ಬರ: ಸಾಮಾಜಿಕ ಜಾಲತಾಣಗಳ ವೇದಿಕೆಯಲ್ಲಿ ಚುನಾವಣಾ ಪ್ರಚಾರದ ಅಬ್ಬರ ಮತ್ತಷ್ಟು ಜೋರಾಗಿದೆ. ಪಕ್ಷ, ಅಭ್ಯರ್ಥಿಗಳು, ತತ್ವ-ಸಿದ್ದಾಂತಗಳ ಪರವಾದ ಹಾಗೂ ಎದುರಾಳಿ ಪಕ್ಷ, ನಾಯಕರಿಗೆ ಸಂಬಂಧಿಸಿದಂತೆ ಟೀಕೆ-ಟಿಪ್ಪಣಿಗಳು ಸೇರಿದಂತೆ ನಾನಾ ರಾಜಕೀಯ ವಿಷಯಗಳ ಕುರಿತಾದ ಫೋಟೋ-ವೀಡಿಯೋಗಳು ಭಾರೀ ದೊಡ್ಡ ಸಂಖ್ಯೆಯಲ್ಲಿ ಹರಿದಾಡುತ್ತಿವೆ.

ಒಟ್ಟಾರೆ ಮತದಾರರ ಗಮನ ಸೆಳೆಯಲು ಚುನಾವಣಾ ಕಣದಲ್ಲಿ ಭಾರೀ ಹೈಡ್ರಾಮಾಗಳೇ ನಡೆಯುತ್ತಿವೆ. ಪ್ರಚಾರ ಕಣದಲ್ಲಿ ದಿನಕ್ಕೊಂದು ತಿರುವುಗಳು ಕಂಡುಬರುತ್ತಿವೆ. ಆದರೆ ಮತದಾರ ಪ್ರಭುವಿನ ಚಿತ್ತ ಯಾರತ್ತ ಎಂಬುವುದು ಸಂಪೂರ್ಣ ನಿಗೂಢವಾಗಿರುವುದಂತೂ ಸತ್ಯ!

ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ದಿನಾಂಕ ವಿಸ್ತರಣೆ ಶಿವಮೊಗ್ಗ, ಮೇ 5: 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ, ಭದ್ರಾ ಜಲಾಶಯದಿಂದ ಬಲ ಹಾಗೂ ಎಡದಂಡೆ ನಾಲೆಗಳಿಗೆ ಹರಿಸಲಾಗುತ್ತಿರುವ ನೀರಿನ ಹರಿವನ್ನು ಇನ್ನಷ್ಟು ದಿನಗಳ ವಿಸ್ತರಿಸಲಾಗಿದೆ. ಪ್ರಸ್ತುತ ಎಡದಂಡೆ ನಾಲೆಗೆ 01.01.2023 ರ ರಾತ್ರಿಯಿಂದ ಹಾಗೂ ಬಲದಂಡೆ ನಾಲೆಗೆ 03.01.2023 ರ ರಾತ್ರಿಯಿಂದ ನೀರನ್ನು ಹರಿಸಲಾಗುತ್ತಿದೆ. ಭದ್ರಾ ಅಚ್ಚುಕಟ್ಟು ಪ್ರದೇಶದ 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ನೀರನ್ನು ಹರಿಸಲು ಸರ್ಕಾರದ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಭದ್ರಾ ಎಡದಂಡೆ ನಾಲೆಗೆ ಮೇ 12 ರವರೆಗೆ ಹಾಗೂ ಬಲದಂಡೆ ನಾಲೆಗೆ ಮೇ 18 ರವರೆಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. Previous post ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ದಿನಾಂಕ ವಿಸ್ತರಣೆ
ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಮತ ಎಣಿಕೆ ನಡೆಯಲಿರುವ ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ ಮೇ 13 ರ ಬೆಳಗ್ಗೆ 6 ರಿಂದ ಮೇ14 ರ ಬೆಳಿಗ್ಗೆ 6 ಗಂಟೆಯವರೆಗೆ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ನಿಬಂಧನೆಗಳ ವಿವರ: ನಿಷೇಧಾಜ್ಞೆ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗೂಡುವಂತಿಲ್ಲ. ಮೆರವಣಿಗೆ, ಸಭೆ, ಸಮಾರಂಭ, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. Next post ಮತ ಎಣಿಕೆ ಕೇಂದ್ರದ ಸುತ್ತಮುತ್ತ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ