ಶಿವಮೊಗ್ಗ, ಮೇ 9: ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಇಬ್ಬರು ಸಿಬ್ಬಂದಿಗಳು, ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ, ಆರೋಪಿತ ನೌಕರರನ್ನು ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು : ಇಬ್ಬರು ಸಸ್ಪೆಂಡ್!

ಶಿವಮೊಗ್ಗ, ಮೇ 9: ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಇಬ್ಬರು ಸಿಬ್ಬಂದಿಗಳು, ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ, ಆರೋಪಿತ ನೌಕರರನ್ನು ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಭದ್ರಾವತಿ ತಾಲೂಕು ಬಿ.ಆರ್.ಪಿ. ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ ನೌಕರ ಬಿ.ರಮೇಶ್ ಹಾಗೂ ಸೊರಬ ತಾಲೂಕು ಹುರುಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾದ ಮಾಲತೇಶ್ ಎನ್ ಅಮಾನತ್ತುಗೊಂಡವರೆಂದು ಗುರುತಿಸಲಾಗಿದೆ.

ಇವರಿಬ್ಬರು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಮತಗಟ್ಟೆ ಸಿಬ್ಬಂದಿಯಾಗಿ ಕಾರ್ಯನಿರ್ವಹಣೆಗೆ ನಿಯೋಜನೆಯಾಗಿದ್ದರು. ಮಂಗಳವಾರ ಬೆಳಿಗ್ಗೆ ಶಿವಮೊಗ್ಗದ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ್ದ ವೇಳೆ ಮದ್ಯಪಾನ ಮಾಡಿದ್ದು ಕಂಡುಬಂದಿತ್ತು.

ಇವರಿಬ್ಬರನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಮದ್ಯಪಾನ ಮಾಡಿದ್ದು ದೃಢಪಟ್ಟಿತ್ತು. ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ, ಇವರಿಬ್ಬರನ್ನು ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ಧಾರೆ.

2023 ನೇ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾನ ಜಾಗೃತಿ ನಡೆಯುತ್ತಿದ್ದು, ಮದುವೆ ಮನೆಯೊಂದರಲ್ಲಿ ಸಮನ್ವಯ ಟ್ರಸ್ಟ್ ಸದಸ್ಯರು ಮತದಾನ ಮಾಡುವಂತೆ ಮದುವೆಗೆ ಆಗಮಿಸಿದ್ದವರಿಗೆ ಜಾಗೃತಿ ಮೂಡಿಸಿದರು. ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ ಅವರ ಪುತ್ರಿ ದಾಮಿನಿ ಟಿ.ಕೆ. ಹಾಗೂ ಶಿಕಾರಿಪುರದ ಡಾ. ಹೇಮಂತ್ಕುಮಾರ್ ಅವರ ವಿವಾಹವು ಭಾನುವಾರ ಜರುಗಿತು Previous post ಮದುವೆ ಮನೆಯಲ್ಲಿ ಮತದಾನ ಜಾಗೃತಿ!
ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಬುಧವಾರ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿತ್ತು. ಬಿಸಿಲ ಬೇಗೆಯ ನಡುವೆಯೂ ಮತಗಟ್ಟೆಗಳಲ್ಲಿ ಸರದಿ ಸಾಲಿನಲ್ಲಿ ನಿಂತು, ಅತ್ಯಂತ ಉತ್ಸಾಹದಿಂದ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ, ಕೆಲ ಸಮಯ ಮತದಾನ ಕಾರ್ಯ ಸ್ಥಗಿತಗೊಂಡಿದ್ದ ವರದಿಗಳು ಹೊರತುಪಡಿಸಿದರೆ, ಉಳಿದಂತೆ ಯಾವುದೇ ಅಹಿತಕರ ಘಟನೆ ಹಾಗೂ ಗೊಂದಲ-ಗಡಿಬಿಡಿಯಿಲ್ಲದೆ ಮತದಾನ ಪ್ರಕ್ರಿಯೆ ನಡೆಯಿತು. Next post ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ