
ವಿಧಾನಸಭೆ ಚುನಾವಣೆ : ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 78.28 ರಷ್ಟು ಮತದಾನ
ಶಿವಮೊಗ್ಗ, ಮೇ 10: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬುಧವಾರ ನಡೆದ ಮತದಾನ ಕಾರ್ಯಕ್ಕೆ ಅಂತಿಮ ತೆರೆ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ, ಒಟ್ಟಾರೆ ಶೇ. 78.28 ರಷ್ಟು ಮತದಾನವಾಗಿದೆ.
ಶಿವಮೊಗ್ಗಗ್ರಾಮಾಂತರ ಶೇ. 83.71, ಭದ್ರಾವತಿ ಶೇ. 68.47, ಶಿವಮೊಗ್ಗ ಶೇ. 68.74, ತೀರ್ಥಹಳ್ಳಿ ಶೇ. 84.83, ಶಿಕಾರಿಪುರ ಶೇ. 82.57, ಸೊರಬ ಶೇ. 82.97, ಸಾಗರ ಶೇ. 80.29 ರಷ್ಟು ಮತದಾನವಾಗಿದೆ.
ಪ್ರಸ್ತುತ ಜಿಲ್ಲೆಯ ಅಸೆಂಬ್ಲಿವಾರು ಮತದಾನದ ವಿವರ ಗಮನಿಸಿದರೆ, ತೀರ್ಥಹಳ್ಳಿ ಅಸೆಂಬ್ಲಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನವಾಗಿದೆ. ಶಿವಮೊಗ್ಗ ಹಾಗೂ ಭದ್ರಾವತಿ ಕ್ಷೇತ್ರಗಳಲ್ಲಿ ಕಡಿಮೆ ಮತದಾನವಾಗಿರುವುದು ಕಂಡುಬರುತ್ತದೆ.
ಉಳಿದಂತೆ ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ, ಸೊರಬ, ಸಾಗರ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಉತ್ತಮ ಮತದಾನವಾಗಿದೆ.
-: ಕ್ಷೇತ್ರವಾರು ಮತದಾನದ ವಿವರ :-
——————————————-
ಶಿವಮೊಗ್ಗಗ್ರಾಮಾಂತರ 83.71%
ಭದ್ರಾವತಿ 68.47%
ಶಿವಮೊಗ್ಗ68.74%
ತೀರ್ಥಹಳ್ಳಿ 84.83%
ಶಿಕಾರಿಪುರ 82.57%
ಸೊರಬ 82.97%
ಸಾಗರ 80.29%
More Stories
ಶಿವಮೊಗ್ಗ ಜಿಲ್ಲೆ : ಕಾಂಗ್ರೆಸ್ 3, ಬಿಜೆಪಿ 3, ಜೆಡಿಎಸ್ 1!
ಶಿವಮೊಗ್ಗ, ಮೇ 13: ಬಿಜೆಪಿ ಭದ್ರಕೋಟೆಯೆಂದೇ ಬಿಂಬಿತವಾಗಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ, ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಗೆ ಭಾರೀ ಪೈಪೋಟಿ ನೀಡುವ ಮೂಲಕ ಸಮಬಲದ ಸಾಧನೆ ಮಾಡಿ ಗಮನ ಸೆಳೆದಿದೆ!
ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 3, ಕಾಂಗ್ರೆಸ್ 3 ಹಾಗೂ ಜೆಡಿಎಸ್ 1 ಕಡೆ ಜಯ ಸಾಧಿಸಿದೆ. ಕಳೆದ 2018 ರ ಚುನಾವಣೆಯಲ್ಲಿ 6 ಕಡೆ ಜಯ ಸಾಧಿಸಿ ಪ್ರಾಬಲ್ಯ ಮೆರೆದಿದ್ದ ಬಿಜೆಪಿ ಪಕ್ಷ ಈ ಬಾರಿ ಮೂರು ಕಡೆ ಪರಾಭವಗೊಂಡು ಕೈ ಸುಟ್ಟುಕೊಂಡಿದೆ.
ಶಿವಮೊಗ್ಗ ನಗರ, ಶಿಕಾರಿಪುರ, ತೀರ್ಥಹಳ್ಳಿ ಕ್ಷೇತ್ರಗಳಲ್ಲಿ ಮತ್ತೆ ಬಿಜೆಪಿ ಜಯ ಸಾಧಿಸಿದೆ. ಕಾಂಗ್ರೆಸ್ ಪಕ್ಷವು ಕಳೆದ ಬಾರಿ ಜಯ ಸಾಧಿಸಿದ್ದ ಭದ್ರಾವತಿ ಜೊತೆಗೆ ಬಿಜೆಪಿ ವಶದಲ್ಲಿದ್ದ ಸಾಗರ ಹಾಗೂ ಸೊರಬ ಕ್ಷೇತ್ರಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವಲ್ಲಿ ಸಫಲವಾಗಿದೆ.
ಮತದಾನದ ನಂತರ ಸೋಲು-ಗೆಲುವಿನ ಲೆಕ್ಕಾಚಾರ ಬಿರುಸು!
ವಿಧಾನಸಭೆ ಸಾರ್ವತ್ರಿಕ ಚುನಾವಣೆ – 2023 ಮಹಾ ಸಮರಕ್ಕೆ ತೆರೆ ಬಿದ್ದಿದೆ. ಮೇ 13 ರ ಮತ ಎಣಿಕೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ರಾಜಕೀಯ ಪಕ್ಷ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರಗಳು ಬಿರುಸುಗೊಂಡಿವೆ!
ಯಾವ ಅಸೆಂಬ್ಲಿ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ? ಯಾವ ಪಕ್ಷಕ್ಕೆ ಎಷ್ಟೆಷ್ಟು ಮತ ಬೀಳಬಹುದು? ಯಾವ ಅಭ್ಯರ್ಥಿ ಗೆಲ್ಲಬಹುದು – ಸೋಲಬಹುದು? ಸೋಲು – ಗೆಲುವಿಗೆ ಕಾರಣವಾಗುವ ಅಂಶಗಳೇನು? ಎಂಬಿತ್ಯಾದಿ ಚರ್ಚೆಗಳು ಸರ್ವೇ ಸಾಮಾನ್ಯವಾಗಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ
ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಬುಧವಾರ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿತ್ತು. ಬಿಸಿಲ ಬೇಗೆಯ ನಡುವೆಯೂ ಮತಗಟ್ಟೆಗಳಲ್ಲಿ ಸರದಿ ಸಾಲಿನಲ್ಲಿ ನಿಂತು, ಅತ್ಯಂತ ಉತ್ಸಾಹದಿಂದ ಮತದಾರರು ತಮ್ಮ ಹಕ್ಕು ಚಲಾಯಿಸಿದರು.
ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ, ಕೆಲ ಸಮಯ ಮತದಾನ ಕಾರ್ಯ ಸ್ಥಗಿತಗೊಂಡಿದ್ದ ವರದಿಗಳು ಹೊರತುಪಡಿಸಿದರೆ, ಉಳಿದಂತೆ ಯಾವುದೇ ಅಹಿತಕರ ಘಟನೆ ಹಾಗೂ ಗೊಂದಲ-ಗಡಿಬಿಡಿಯಿಲ್ಲದೆ ಮತದಾನ ಪ್ರಕ್ರಿಯೆ ನಡೆಯಿತು.
ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..!
ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ!
ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.
ಚುನಾವಣೆ ಕಾವು, ಬಿಸಿಲ ಧಗೆಗೆ ಬಸವಳಿದ ರಾಜಕಾರಣಿಗಳು..!
ಒಂದೆಡೆ ಚುನಾವಣೆ ಕಾವು, ಮತ್ತೊಂದೆಡೆ ಬಿಸಿಲ ಧಗೆಯಿಂದ ಕೆಲ ರಾಜಕಾರಣಿಗಳು ಅಕ್ಷರಶಃ ಬಸವಳಿದಿದ್ದಾರೆ. ಬೆವರು ಹರಿಸಲಾರಂಭಿಸಿದ್ದಾರೆ. ಯಾವಾಗ ಚುನಾವಣೆ ಪೂರ್ಣಗೊಳ್ಳಲಿದೆಯೋ ಎಂದು ಕಾದು ಕುಳಿತುಕೊಳ್ಳುವಂತೆ ಮಾಡಿದೆ!
ಹೌದು. ಪ್ರಸ್ತುತ ವರ್ಷ ತಾಪಮಾನದ ಪ್ರಮಾಣದಲ್ಲಿ, ಗಣನೀಯ ಪ್ರಮಾಣದ ಹೆಚ್ಚಳ ಕಂಡುಬಂದಿದೆ. ಬಿರು ಬಿಸಿಲು ನಾಗರೀಕರನ್ನು ಹೈರಾಣಾಗಿಸಿದೆ. ಸುಡು ಬಿಸಿಲಿನಲ್ಲಿ ಎದುರಾಗಿರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯು ಅಖಾಡದಲ್ಲಿರುವ ಹಲವು ಅಭ್ಯರ್ಥಿಗಳನ್ನು ಹೈರಾಣಾಗಿಸಿದೆ.