ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ

ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು – 10 ಜನರಿಗೆ ಗಾಯ!

ಶಿವಮೊಗ್ಗ, ಮೇ 11: ಶಿವಮೊಗ್ಗ ತಾಲೂಕಿನ ಚೋರಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯ ಹಳೇ ಸೇತುವೆ ತಿರುವಿನ ಬಳಿ, ಗುರುವಾರ ಸಂಜೆ ಎರಡು ಖಾಸಗಿ ಪ್ರಯಾಣಿಕ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಪ್ರಾಥಮಿಕ ಹಂತದ ಮಾಹಿತಿ ಅನುಸಾರ, ಇಬ್ಬರು ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದಂತೆ ಸುಮಾರು 5 ರಿಂದ 6 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ

ಶಿವಮೊಗ್ಗದಿಂದ ಶಿಕಾರಿಪುರದೆಡೆಗೆ ತೆರಳುತ್ತಿದ್ದ ಹಾಗೂ ಶಿಕಾರಿಪುರದಿಂದ ಶಿವಮೊಗ್ಗದೆಡೆಗೆ ಆಗಮಿಸುತ್ತಿದ್ದ ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಎರಡು ಬಸ್ ಗಳ ಮುಂಭಾಗ ಸಂಪೂರ್ಣ ನುಜ್ಜಗಜ್ಜಾಗಿದೆ.

ಬಸ್ ಗಳಲ್ಲಿ ಸಿಲುಕಿ ಬಿದ್ದಿದ್ದ ಪ್ರಯಾಣಿಕರನ್ನು ಸ್ಥಳೀಯ ಗ್ರಾಮಸ್ಥರು ಆಂಬ್ಯುಲೆನ್ಸ್ ಸೇರಿದಂತೆ ಮತ್ತೀತರ ವಾಹನಗಳ ಮೂಲಕ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.


ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ

ಅಪಘಾತದಿಂದ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಎರಡು ಕಡೆ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕಾಗಮಿಸಿದ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.


ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ
ವಿಧಾನಸಭೆ ಸಾರ್ವತ್ರಿಕ ಚುನಾವಣೆ - 2023 ಮಹಾ ಸಮರಕ್ಕೆ ತೆರೆ ಬಿದ್ದಿದೆ. ಮೇ 13 ರ ಮತ ಎಣಿಕೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ರಾಜಕೀಯ ಪಕ್ಷ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರಗಳು ಬಿರುಸುಗೊಂಡಿವೆ! ಯಾವ ಅಸೆಂಬ್ಲಿ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ? ಯಾವ ಪಕ್ಷಕ್ಕೆ ಎಷ್ಟೆಷ್ಟು ಮತ ಬೀಳಬಹುದು? ಯಾವ ಅಭ್ಯರ್ಥಿ ಗೆಲ್ಲಬಹುದು – ಸೋಲಬಹುದು? ಸೋಲು – ಗೆಲುವಿಗೆ ಕಾರಣವಾಗುವ ಅಂಶಗಳೇನು? ಎಂಬಿತ್ಯಾದಿ ಚರ್ಚೆಗಳು ಸರ್ವೇ ಸಾಮಾನ್ಯವಾಗಿದೆ. ಮತ್ತೊಂದೆಡೆ, ಕೆಲ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಅಸೆಂಬ್ಲಿ ಕ್ಷೇತ್ರಗಳ ಪ್ರತಿಯೊಂದು ಬೂತ್ ನಲ್ಲಿ ಆಗಿರುವ ಮತದಾನದ ವಿವರ ಕಲೆ ಹಾಕುತ್ತಿದ್ದಾರೆ. ತಮ್ಮ ಪಕ್ಷಗಳ ಬೂತ್ ಏಜೆಂಟ್ ಗಳ ಮೂಲಕ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇದರ ಆಧಾರದ ಮೇಲೆ ಯಾವ್ಯಾವ ಭಾಗದಲ್ಲಿ ಎಷ್ಟೆಷ್ಟು ಮತ ತಮಗೆ ಬಿದ್ದಿರಬಹುದು? ಎದುರಾಳಿಗಳ ಮತ ಗಳಿಕೆ ಎಷ್ಟಿರಬಹುದು? ಎಂಬ ಊಹಾತ್ಮಕ ಲೆಕ್ಕಾಚಾರದಲ್ಲಿ ಮುಳುಗಿರುವುದು ಕಂಡುಬರುತ್ತಿದೆ. Previous post ಮತದಾನದ ನಂತರ ಸೋಲು-ಗೆಲುವಿನ ಲೆಕ್ಕಾಚಾರ ಬಿರುಸು!
ಶಿವಮೊಗ್ಗ, ಮೇ.11: ‘ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. Next post ವಿಧಾನಸಭೆ ಚುನಾವಣೆ : ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಮತ ಎಣಿಕೆ!