ಶಿವಮೊಗ್ಗ, ಮೇ 10: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದುರೋಗ ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ ಬಿ ಯಲಿ ತಿಳಿಸಿದ್ದಾರೆ. ಕಂದುರೋಗವು ಪ್ರಾಣಿಜನ್ಯರೋಗವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭ ಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭ ಸ್ರಾವದಿಂದ ಮತ್ತು ಹಸಿ ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಸದರಿ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಕಂದುರೋಗ (ಬ್ರುಸೆಲೋಸಿಸ್) ದ ವಿರುದ್ಧ ಲಸಿಕೆ ಹಾಕಿಸಿ ಜಾನುವಾರುಗಳ ರಕ್ಷಣೆಗೆ ಪಶು ವೈದ್ಯಕೀಯ ಇಲಾಖೆ ಮನವಿ

ಶಿವಮೊಗ್ಗ, ಮೇ 10: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣದಡಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಿಗೆ ಕಂದುರೋಗ ನಿಯಂತ್ರಣಕ್ಕೆ ಲಸಿಕೆ ಹಾಕುವ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ ಬಿ ಯಲಿ ತಿಳಿಸಿದ್ದಾರೆ.

ಕಂದುರೋಗವು ಪ್ರಾಣಿಜನ್ಯರೋಗವಾಗಿದೆ. ರಾಸುಗಳಲ್ಲಿ ಈ ರೋಗದಿಂದ ಗರ್ಭ ಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಕರು ಹಾಕಬಹುದು. ಅವುಗಳ ಗರ್ಭ ಸ್ರಾವದಿಂದ ಮತ್ತು  ಹಸಿ  ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ, ಸದರಿ ರೋಗವು ಮನುಷ್ಯರಿಗೂ ಹರಡಬಹುದು. ಸದರಿ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಲಸಿಕಾ ಕಾರ್ಯಕ್ರಮದಡಿ 4 ರಿಂದ 8 ತಿಂಗಳ ಆಕಳು/ಎಮ್ಮೆಗಳ ಹೆಣ್ಣು ಕರುಗಳಿಗೆ ಲಸಿಕೆ 15-05-2023 ರಿಂದ 30-05-2023 ರವರೆಗೆ ಲಸಿಕೆ ಹಾಕಲಾಗುತ್ತದೆ. 2023-24 ನೇ ಸಾಲಿನಲ್ಲಿವಾರ್ಷಿಕ ಒಟ್ಟು 75,000 ಹೆಣ್ಣು ಕರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ಈ ಸುತ್ತಿನಲ್ಲಿ 25,000 ಹೆಣ್ಣು ಕರುಗಳಿಗೆ ಲಸಿಕೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.

ಲಸಿಕಾದಾರರು ತಮ್ಮ ಮನೆ ಬಾಗಿಲಲ್ಲೇ ಕರುಗಳಿಗೆ, ಕಿವಿಯೋಲೆ ಅಳವಡಿಸಿ ನೊಂದಣಿ ಮಾಡಿಕೊಂಡು ಲಸಿಕೆ ಹಾಕುತ್ತಾರೆ. ಪಶು ಪಾಲಕರು ಹೆಣ್ಣು ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ಕಂದು ರೋಗ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲೂಕುವಾರು, ಗ್ರಾಮವಾರು ತಯಾರಿಸಲಾಗಿದೆ. ಪಶುಪಾಲನಾ ಇಲಾಖೆ ಅಧಿಕಾರಿ/ಸಿಬ್ಬಂದಿಯನ್ನೊಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ಚಿಕಿತ್ಸಾ ಸಂಸ್ಥೆಗಳನ್ನು ಸಂಪರ್ಕಿಸಬೇಕೆಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ.ಬಿ.ಯಲಿ ಅವರು ತಿಳಿಸಿದ್ದಾರೆ.

ಸಂಪೂರ್ಣ ನಿಗೂಢವಾಗಿ ಪರಿಣಮಿಸಿದ್ದ ಯುವತಿಯ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಮುಂಬೈನಲ್ಲಿ ಕ್ರೈಸ್ತ ಸನ್ಯಾನಿಸಿಯಾಗಲು ಹಾಗೂ ಪೋಷಕರಿಂದ ಹಣ ಪಡೆಯುವ ಉದ್ದೇಶದಿಂದ, ಸ್ವತಃ ಯುವತಿಯೇ ಕಿಡ್ನ್ಯಾಪ್ ಕಥೆ ಸೃಷ್ಟಿಸಿದ್ದು ಬೆಳಕಿಗೆ ಬಂದಿದೆ! ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್ ಮಾಡಲಾಗಿದೆ ಎಂಬ ದೂರು, ಶಿವಮೊಗ್ಗ ಪೊಲೀಸರ ನಿದ್ದೆಗೆಡಿಸಿತ್ತು ಸಿನಿಮೀಯ ಶೈಲಿಯಲ್ಲಿ ಪ್ರಕರಣದ ತನಿಖೆ ನಡೆಸಿದ್ದಾರೆ. ಇನ್ನೇನು ಹುಬ್ಬಳ್ಳಿಯಿಂದ ಮುಂಬೈಗೆ ಬಸ್ ಏರಲು ಸಿದ್ದವಾಗಿ ನಿಂತಿದ್ದ ಯುವತಿಯನ್ನು ಪತ್ತೆ ಹಚ್ಚಿ ಶಿವಮೊಗ್ಗಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. Previous post ಮುಂಬೈನಲ್ಲಿ ಕ್ರೈಸ್ತ ಸನ್ಯಾಸಿನಿಯಾಗಲು ‘ಕಿಡ್ನ್ಯಾಪ್’ ಕಥೆ ಸೃಷ್ಟಿಸಿದ ಯುವತಿ..!
ಪ್ರಸ್ತುತ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಸಂಖ್ಯೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಯಾರ ಅಂಕೆಗೂ ಸಿಗದ ಮಟ್ಟದಲ್ಲಿ ಆನ್ಲೈನ್ ಜೂಜು ದೊಡ್ಡ ಮಟ್ಟದ ವ್ಯವಹಾರವಾಗಿ ನಡೆಯುತ್ತಿದೆ. ಕೋಟಿ ಕೋಟಿ ರೂ. ಮೊತ್ತದ ಬೆಟ್ಟಿಂಗ್ ನಡೆಯುತ್ತಿದೆ. ಸದ್ಯ ಐಪಿಎಲ್ ಕ್ರಿಕೆಟ್ ಟೂರ್ನಮೆಂಟ್ ವೇಳೆ ಆನ್ಲೈನ್ ಬೆಟ್ಟಿಂಗ್ ಭಾರೀ ಸದ್ದು ಮಾಡಲಾರಂಭಿಸಿದೆ! ಕ್ರೀಡೆ, ಮನರಂಜನೆ, ಕೌಶಲ್ಯ ಮತ್ತೀತರ ಚಟುವಟಿಕೆಗಳ ಹೆಸರಿನಲ್ಲಿ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಕಾರ್ಯನಿರ್ವಹಿಸುತ್ತಿವೆ. ಸಾಲುಸಾಲು ದೇಶ – ವಿದೇಶಿ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಕಾರ್ಯಾಚರಿಸುತ್ತಿವೆ. ಯುವ ಜನಾಂಗ ಮಾತ್ರವಲ್ಲದೆ ಎಲ್ಲ ವಯೋಮಾನ, ವರ್ಗದವರು ಕೂಡ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ದಾಸರಾಗುತ್ತಿದ್ದಾರೆ. ಎಲ್ಲದಕ್ಕಿಂತ ಮುಖ್ಯವಾಗಿ ಆನ್ಲೈನ್ ಗೇಮಿಂಗ್, ಬೆಟ್ಟಿಂಗ್ ಆ್ಯಪ್ ಗಳಿಗೆ ಚಲನಚಿತ್ರ ನಟನಟಿಯರು, ಕ್ರಿಕೆಟ್ ಆಟಗಾರರು ಸೇರಿದಂತೆ ಹಲವರು ಪ್ರಚಾರ ರಾಯಭಾರಿಗಳಾಗಿದ್ದಾರೆ. ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಭಾರೀ ದೊಡ್ಡ ಪ್ರಮಾಣದ ಜಾಹೀರಾತುಗಳು ಹರಿದಾಡುತ್ತಿವೆ. Next post ಯಾರ ಅಂಕೆಗೂ ಸಿಗದ ಆನ್‌ಲೈನ್‌ ಜೂಜು : ನಡೆಯುತ್ತಿದೆ ಕೋಟಿ, ಕೋಟಿ ರೂ. ಬೆಟ್ಟಿಂಗ್..!