ಶಿವಮೊಗ್ಗ, ಮೇ 19: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಿ ಮೂರು ತಿಂಗಳಾಗುತ್ತಾ ಬಂದಿದೆ. ವಿಮಾನಗಳ ಸಂಚಾರಕ್ಕೆ ಅನುಮತಿ ಕೂಡ ದೊರಕಿದೆ. ಆದರೆ ಪ್ರಯಾಣಿಕ ವಿಮಾನ ಸಂಚಾರ ಆರಂಭ ಯಾವಾಗ ಎಂಬುವುದು ನಿಗೂಢವಾಗಿ ಪರಿಣಮಿಸಿದೆ! ಈಗಾಗಲೇ ಬೆಂಗಳೂರು-ಶಿವಮೊಗ್ಗ ನಡುವೆ ವಿಮಾನ ಸಂಚಾರಕ್ಕೆ, ಇಂಡಿಗೋ ಏರ್ಲೈನ್ಸ್ ಸಂಸ್ಥೆ ಕೇಂದ್ರ ವಿಮಾನಯಾನ ಪ್ರಾಧಿಕಾರದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಸಂಸ್ಥೆಯ ಕೋರಿಕೆಯಂತೆ ಪ್ರತಿ ಪ್ರಯಾಣಿಕನಿಗೆ 500 ರೂ. ನಂತೆ, ದಿನಕ್ಕೆ ಸರಿಸುಮಾರು 78 ಸಾವಿರ ರೂ. ಪಾವತಿಸಲು ಸರ್ಕಾರ ಸಮ್ಮತಿ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ– ಬೆಂಗಳೂರು ನಡುವೆ ಯಾವಾಗ ಆರಂಭವಾಗಲಿದೆ ವಿಮಾನ ಸಂಚಾರ?

-ಬಿ.ರೇಣುಕೇಶ್-

ಶಿವಮೊಗ್ಗ, ಮೇ 19: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಿ ಮೂರು ತಿಂಗಳಾಗುತ್ತಾ ಬಂದಿದೆ. ವಿಮಾನಗಳ ಸಂಚಾರಕ್ಕೆ ಅನುಮತಿ ಕೂಡ ದೊರಕಿದೆ. ಆದರೆ ಪ್ರಯಾಣಿಕ ವಿಮಾನ ಸಂಚಾರ ಆರಂಭ ಯಾವಾಗ ಎಂಬುವುದು ನಿಗೂಢವಾಗಿ ಪರಿಣಮಿಸಿದೆ!

ಈಗಾಗಲೇ ಬೆಂಗಳೂರು-ಶಿವಮೊಗ್ಗ ನಡುವೆ ವಿಮಾನ ಸಂಚಾರಕ್ಕೆ, ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆ ಕೇಂದ್ರ ವಿಮಾನಯಾನ ಪ್ರಾಧಿಕಾರದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಸಂಸ್ಥೆಯ ಕೋರಿಕೆಯಂತೆ ಪ್ರತಿ ಪ್ರಯಾಣಿಕನಿಗೆ 500 ರೂ. ನಂತೆ, ದಿನಕ್ಕೆ ಸರಿಸುಮಾರು 78 ಸಾವಿರ ರೂ. ಪಾವತಿಸಲು ಸರ್ಕಾರ ಸಮ್ಮತಿ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆ ನಡುವೆಯೇ, ನಿಗದಿತ ಅಗ್ನಿಶಾಮಕ ವಾಹನಗಳು ಆಗಮಿಸುವವರೆಗೆ ವಿಮಾನ ಸಂಚಾರಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಈ ಕಾರಣದಿಂದ ಕೋಟ್ಯಾಂತರ ರೂ. ವೆಚ್ಚದಲ್ಲಿ, ವಿದೇಶದಿಂದ ಅತ್ಯಾಧುನಿಕ ಅಗ್ನಿಶಾಮಕ ದಳದ ಮೂರು ವಾಹನಗಳನ್ನು ಖರೀದಿಸಲಾಗಿತ್ತು.

ಯಾವಾಗ?:  ಕಳೆದ ತಿಂಗಳು, ಇಷ್ಟರಲ್ಲಿಯೇ ಬೆಂಗಳೂರು – ಶಿವಮೊಗ್ಗ ನಡುವೆ ವಿಮಾನ ಸಂಚಾರ ಆರಂಭವಾಗಲಿದೆ. ಕೆಲವೇ ದಿನಗಳಲ್ಲಿ ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆ ವಿಮಾನ ಸಂಚಾರದ ವೇಳಾಪಟ್ಟಿ ಪ್ರಕಟಿಸಲಿದೆ. ವಿಧಾನಸಭೆ ಚುನಾವಣೆ ವೇಳೆಯೇ ವಿಮಾನ ಹಾರಾಟ ಆರಂಭವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು.

ಈ ಕುರಿತಂತೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾಹಿತಿ ಕೂಡ ನೀಡಿದ್ದರು. ಆದರೆ ಇಲ್ಲಿಯವರೆಗೂ ಶಿವಮೊಗ್ಗ – ಬೆಂಗಳೂರು ನಡುವೆ ವಿಮಾನ ಸಂಚಾರ ಆರಂಭವಾಗಿಲ್ಲ. ವೇಳಾಪಟ್ಟಿ ಕೂಡ ಪ್ರಕಟವಾಗಿಲ್ಲ.  

ಈ ಕುರಿತಂತೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾಹಿತಿ ಕೂಡ ನೀಡಿದ್ದರು. ಆದರೆ ಇಲ್ಲಿಯವರೆಗೂ ಶಿವಮೊಗ್ಗ – ಬೆಂಗಳೂರು ನಡುವೆ ವಿಮಾನ ಸಂಚಾರ ಆರಂಭವಾಗಿಲ್ಲ. ವೇಳಾಪಟ್ಟಿ ಕೂಡ ಪ್ರಕಟವಾಗಿಲ್ಲ.  

ಸರ್ವಾಂಗೀಣ ಅಭಿವೃದ್ದಿ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಾನದಂಡಗಳಿಗೆ ಅನುಗುಣವಾಗಿ, ಶಿವಮೊಗ್ಗ ಏರ್’ಪೋರ್ಟ್ ನಿರ್ಮಿಸಲಾಗಿದೆ. ರಾತ್ರಿ ವಿಮಾನಗಳ ಲ್ಯಾಂಡಿಂಗ್ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು ನಂತರ ಅತೀ ದೊಡ್ಡ ವಿಮಾನ ನಿಲ್ದಾಣ ಎಂಬ ಖ್ಯಾತಿಗೆ ಪಾತ್ರವಾಗಿದೆ. ಕಳೆದ ಫೆಬ್ರವರಿ 27 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣ ಲೋಕಾರ್ಪಣೆಗೊಳಿಸಿದ್ದರು.

ಇದಕ್ಕೂ ಮುನ್ನ ಕೇಂದ್ರ ವಿಮಾನಯಾನ ಪ್ರಾಧಿಕಾರವು ನಿಲ್ದಾಣದ ತಪಾಸಣೆ ನಡೆಸಿತ್ತು. ವಿಮಾನ ಸಂಚಾರಕ್ಕೆ ಅಗತ್ಯ ಸೌಲಭ್ಯವಿರುವ ಕುರಿತಂತೆ ಸಮಗ್ರ ತಪಾಸಣೆ ನಡೆಸಿತ್ತು. ನಂತರ ವಿಮಾನಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು. ತದನಂತರ ನಡೆದ ಪರೀಕ್ಷಾರ್ಥ ವಿಮಾನ ಸಂಚಾರ ಯಶಸ್ವಿಯಾಗಿತ್ತು.

ಇದಕ್ಕೂ ಮುನ್ನ ಕೇಂದ್ರ ವಿಮಾನಯಾನ ಪ್ರಾಧಿಕಾರವು ನಿಲ್ದಾಣದ ತಪಾಸಣೆ ನಡೆಸಿತ್ತು. ವಿಮಾನ ಸಂಚಾರಕ್ಕೆ ಅಗತ್ಯ ಸೌಲಭ್ಯವಿರುವ ಕುರಿತಂತೆ ಸಮಗ್ರ ತಪಾಸಣೆ ನಡೆಸಿತ್ತು. ನಂತರ ವಿಮಾನಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು. ತದನಂತರ ನಡೆದ ಪರೀಕ್ಷಾರ್ಥ ವಿಮಾನ ಸಂಚಾರ ಯಶಸ್ವಿಯಾಗಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವದೆಹಲಿಯಿಂದ ನೇರವಾಗಿ ಶಿವಮೊಗ್ಗಕ್ಕೆ ವಿಮಾನದಲ್ಲಿ ಆಗಮಿಸಿ, ನಿಲ್ದಾಣ ಉದ್ಘಾಟಿಸಿದ್ದರು.

ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ ರೂ.449.22 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ.  ಎಟಿಆರ್ 72 ರಿಂದ ಏರ್‍ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು, ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ  3.2 ಕಿ.ಮೀ ರನ್‍ವೇ ನಿರ್ಮಿಸಲಾಗಿದೆ. ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳೊಂದಿಗೆ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ.

ಶಿವಮೊಗ್ಗದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 21 ರಂದು ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ. Previous post ಶಿವಮೊಗ್ಗ : ಸೋಗಾನೆ, ಬಿದರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೇ 21 ರಂದು ವಿದ್ಯುತ್ ವ್ಯತ್ಯಯ!
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ರಾಜ್ಯದ ವಿವಿಧೆಡೆಯಿಂದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸಮಾರಂಭಕ್ಕೆ ಸಾಕ್ಷಿಯಾದರು. ಸಚಿವರಾದವರು: ಸಚಿವರಾಗಿ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೋಳಿ, ಪ್ರಿಯಾಂಕ ಖರ್ಗೆ ಹಾಗೂ ಜಮೀರ್ ಅಹಮದ್ ಖಾನ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರಾಗಿದ್ದಾರೆ. Next post ಪ್ರಮಾಣ ವಚನ ಸ್ವೀಕಾರ  : ಕಾಂಗ್ರೆಸ್ ಸರ್ಕಾರದ ಅಧಿಕಾರ!