ಶಿವಮೊಗ್ಗ, ಮೇ 20: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಶಿವಮೊಗ್ಗ ನಗರದ ಗಾಡಿಕೊಪ್ಪದಲ್ಲಿ ಶನಿವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಶಿವಮೊಗ್ಗ, ಮೇ 20: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಶಿವಮೊಗ್ಗ ನಗರದ ಗಾಡಿಕೊಪ್ಪದಲ್ಲಿ ಶನಿವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಿದ ಕಾರ್ಯಕರ್ತರು ಪಕ್ಷದ ನಾಯಕರ ಪರವಾಗಿ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನ ಉತ್ತರ ಬ್ಲಾಕ್ ನ ಅಧ್ಯಕ್ಷ ಗಿರೀಶ್ ಗಾಡಿಕೊಪ್ಪ,, ವಾರ್ಡ್ ಅಧ್ಯಕ್ಷ ಭೀಮಣ್ಣ, ಮುಖಂಡರಾದ ಮನೋಜ್, ಗಣೇಶ್, ದೇವರಾಜ್, ಚರಣ್, ಗಾಡಿಕೊಪ್ಪ ಬಸವರಾಜ್, ಜಯಣ್ಣ, ಕುಮಾರ್ ಸೇರಿದಂತೆ ಮೊದಲಾದವರಿದ್ದರು.

ಶಿವಮೊಗ್ಗ, ಮೇ 20: ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿಯೇ ಕಳ್ಳರ ತಂಡವೊಂದು, ಶ್ರೀಗಂಧದ ಮರ ಕಡಿತಲೆಗೊಳಿಸಿ ತುಂಡುಗಳ ಸಾಗಾಣೆಗೆ ಯತ್ನಿಸಿದ ಘಟನೆ ಶಿವಮೊಗ್ಗ ನಗರದ ಹೊರವಲಯ ಆಲ್ಕೋಳ ಬಡಾವಣೆಯಲ್ಲಿ ನಡೆದಿದೆ. ಆಲ್ಕೊಳದ ವಿನೋಬನಗರ 100 ಅಡಿ ರಸ್ತೆಯಲ್ಲಿರುವ ಅರಣ್ಯ ಇಲಾಖೆಯ ವಲಯ ಕಚೇರಿ ಆವರಣದಲ್ಲಿ, ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಆರೋಪಿಗಳು ಶ್ರೀಗಂಧದ ಮರ ಕಡಿತಲೆಗೊಳಿಸಿ, ಮರದ ತುಂಡುಗಳನ್ನು ಚೀಲದಲ್ಲಿ ತುಂಬಿಕೊಂಡು ಬೈಕ್ ನಲ್ಲಿ ಕೊಂಡೊಯ್ಯುವ ವೇಳೆ ಸ್ಥಳೀಯ ನಾಗರೀಕರು ಗಮನಿಸಿದ್ದಾರೆ. ತಕ್ಷಣವೇ ಪೊಲಿಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಗಮನಕ್ಕೆ ತಂದಿದ್ದಾರೆ. Previous post ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿಯೇ ಶ್ರೀಗಂಧದ ಮರ ಕಡಿತಲೆಗೊಳಿಸಿದ ಕಳ್ಳರು!
ಶಿವಮೊಗ್ಗ, ಮೇ 21: ವಿಧಾನಸಭೆ ಅಧಿವೇಶನದ ನಂತರ, ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಈ ವೇಳೆ ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ, ಓರ್ವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವುದು ಖಚಿತ ಎಂದು ಹೇಳಲಾಗುತ್ತಿದ್ದು, ಯಾರಿಗೆ ಅವಕಾಶ ದೊರಕಲಿದೆ ಎಂಬ ಕುತೂಹಲ ಮೂಡಿಸಿದೆ! ಕಾಂಗ್ರೆಸ್ ಮೂಲಗಳ ಅನುಸಾರ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ಅವರ ನಡುವೆ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಇವರಿಬ್ಬರಲ್ಲಿ ಓರ್ವರಿಗೆ ಮಂತ್ರಿ ಪದವಿ ನಿಶ್ಚಿತ ಎಂದು ಹೇಳಲಾಗುತ್ತಿದೆ. Next post ಬಿ.ಕೆ.ಸಂಗಮೇಶ್ವರ್ – ಮಧು ಬಂಗಾರಪ್ಪ ನಡುವೆ ಸಚಿವ ಸ್ಥಾನಕ್ಕೆ ಭಾರೀ ಪೈಪೋಟಿ!