ಶಿವಮೊಗ್ಗ, ಮೇ 22: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕಳೆದ ಕೆಲ ವರ್ಷಗಳಿಂದ ಭಾರೀ ಮಳೆಯಾದ ವೇಳೆ, ಶಿವಮೊಗ್ಗ ನಗರ ಹಾಗೂ ಹೊರವಲಯದ ಹಲವು ಬಡಾವಣೆ - ರಸ್ತೆಗಳು ಜಲಾವೃತವಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿ ಪರಿಣಮಿಸಿದೆ! ಜಲಾವೃತ ಸಮಸ್ಯೆಗೆ ಹತ್ತು ಹಲವು ಕಾರಣಗಳಿವೆ. ಅವ್ಯವಸ್ಥಿತ ಅಭಿವೃದ್ದಿ ಕಾಮಗಾರಿಗಳು, ಅವೈಜ್ಞಾನಿಕ ನಗರದ ಬೆಳವಣಿಗೆ, ನಗರ ವ್ಯಾಪ್ತಿಯಲ್ಲಿದ್ದ ಕೆರೆಕಟ್ಟೆಗಳು ಕಣ್ಮರೆಯಾಗುತ್ತಿರುವುದು, ಚರಂಡಿ-ರಾಜಕಾಲುವೆಗಳು ಸುಸ್ಥಿತಿಯಲ್ಲಿಲ್ಲದಿರುವುದು ಹಾಗೂ ಹಲವೆಡೆ ಭಾರೀ ದೊಡ್ಡ ಪ್ರಮಾಣದಲ್ಲಿ ಒತ್ತುವರಿಯಾಗಿರುವುದು, ಆಡಳಿತದ ನಿರ್ಲಕ್ಷ್ಯ ಸೇರಿದಂತೆ ಹಲವು ಅಂಶಗಳು ಜಲಾವೃತ ಸಮಸ್ಯೆಗೆ ಮುಖ್ಯ ಕಾರಣವಾಗಿದೆ.

ಜಲಾವೃತ ಗಂಡಾಂತರ : ಮಳೆಗಾಲ ಆರಂಭಕ್ಕೂ ಮುನ್ನ ಎಚ್ಚೆತ್ತುಕೊಳ್ಳುವರೇ ಜನಪ್ರತಿನಿಧಿಗಳು, ಅಧಿಕಾರಿಗಳು?

-ಬಿ. ರೇಣುಕೇಶ್

ಶಿವಮೊಗ್ಗ, ಮೇ 22: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕಳೆದ ಕೆಲ ವರ್ಷಗಳಿಂದ ಭಾರೀ ಮಳೆಯಾದ ವೇಳೆ, ಶಿವಮೊಗ್ಗ ನಗರ ಹಾಗೂ ಹೊರವಲಯದ ಹಲವು ಬಡಾವಣೆ – ರಸ್ತೆಗಳು ಜಲಾವೃತವಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿ ಪರಿಣಮಿಸಿದೆ!

ಜಲಾವೃತ ಸಮಸ್ಯೆಗೆ ಹತ್ತು ಹಲವು ಕಾರಣಗಳಿವೆ. ಅವ್ಯವಸ್ಥಿತ ಅಭಿವೃದ್ದಿ ಕಾಮಗಾರಿಗಳು, ಅವೈಜ್ಞಾನಿಕ ನಗರದ ಬೆಳವಣಿಗೆ, ನಗರ ವ್ಯಾಪ್ತಿಯಲ್ಲಿದ್ದ ಕೆರೆಕಟ್ಟೆಗಳು ಕಣ್ಮರೆಯಾಗುತ್ತಿರುವುದು,

ಚರಂಡಿ-ರಾಜಕಾಲುವೆಗಳು ಸುಸ್ಥಿತಿಯಲ್ಲಿಲ್ಲದಿರುವುದು ಹಾಗೂ ಹಲವೆಡೆ ಭಾರೀ ದೊಡ್ಡ ಪ್ರಮಾಣದಲ್ಲಿ ಒತ್ತುವರಿಯಾಗಿರುವುದು, ಆಡಳಿತದ ನಿರ್ಲಕ್ಷ್ಯ ಸೇರಿದಂತೆ ಹಲವು ಅಂಶಗಳು ಜಲಾವೃತ ಸಮಸ್ಯೆಗೆ ಮುಖ್ಯ ಕಾರಣವಾಗಿದೆ.

ಭಾರೀ ಮಳೆಯಾದಗಲ್ಲೆಲ್ಲ ಜಲಾವೃತ ಸ್ಥಿತಿ ತಲೆದೋರುತ್ತಿದ್ದರೂ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮಸ್ಯೆಯ ಮೂಲ ಕಾರಣ ಪತ್ತೆ ಹಚ್ಚಿ ಪರಿಹಾರ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕ ಗಮನ ಹರಿಸದಿರುವುದರಿಂದ ವರ್ಷದಿಂದ ವರ್ಷಕ್ಕೆ ಸಮಸ್ಯೆ ಉಲ್ಬಣಿಸುವಂತಾಗಿದೆ.

‘ಕೆರೆ, ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸಲಾಗುವುದು. ಚರಂಡಿಗಳ ಸ್ವಚ್ಚತೆಗೆ ಕ್ರಮಕೈಗೊಳ್ಳಲಾಗುವುದು. ಮಳೆ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಲಾಗುವುದು. ಜಲಾವೃತ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು…’ ಎಂದು ಆಡಳಿತಗಾರರು ಸಿದ್ದ ಉತ್ತರಗಳ ಭರವಸೆ ನೀಡುತ್ತಾರೆ. ಆದರೆ ಈ ನಿಟ್ಟಿನಲ್ಲಿ ಯಾವುದೇ ಪ್ರಾಮಾಣಿಕ ಕ್ರಮಗಳು ಆಗುತ್ತಿಲ್ಲ.

ಇದರಿಂದ ನಗರದ ಪ್ರತಿಷ್ಠಿತ ಬಡಾವಣೆಗಳು ಕೂಡ ಜಲಾವೃತ ಸಮಸ್ಯೆಯ ಸುಳಿಯಲ್ಲಿ ಸಿಲುಕಿ ಬೀಳುವಂತಾಗಿದೆ. ತಮ್ಮದಲ್ಲದ ತಪ್ಪಿಗೆ ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಪ್ರಜ್ಞಾವಂತ ನಾಗರೀಕರು ದೂರುತ್ತಾರೆ.

ಅಗತ್ಯವಿದೆ ಪ್ರತ್ಯೇಕ ಕಾರ್ಯಪಡೆ!

ಜಲಾವೃತ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಆಡಳಿತ ಹಾಗೂ ಜನಪ್ರತಿನಿಧಿಗಳು ಚಿತ್ತ ಹರಿಸಬೇಕಾಗಿದೆ. ರಾಜಕಾಲುವೆ, ಚರಂಡಿ, ಕೆರೆ, ಜಲಮೂಲ ಪ್ರದೇಶ ಒತ್ತುವರಿ ತೆರವುಗೊಳಿಸಬೇಕು. ಜಲಾವೃತಕ್ಕೀಡಾಗುವ ಸ್ಥಳಗಳನ್ನು ಗುರುತಿಸಿ, ಕಾರಣ ಪತ್ತೆ ಹಚ್ಚಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ರಾಜಕಾಲುವೆ, ಚರಂಡಿಗಳನ್ನು ಸುವ್ಯವಸ್ಥಿತವಾಗಿಡುವ ಕಾರ್ಯ ನಡೆಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಕಾರ್ಯಪಡೆಯೊಂದನ್ನು ರಚಿಸಬೇಕಾಗಿದೆ.

ಶಿವಮೊಗ್ಗ, ಮೇ 21: ವಿಧಾನಸಭೆ ಅಧಿವೇಶನದ ನಂತರ, ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಈ ವೇಳೆ ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ, ಓರ್ವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವುದು ಖಚಿತ ಎಂದು ಹೇಳಲಾಗುತ್ತಿದ್ದು, ಯಾರಿಗೆ ಅವಕಾಶ ದೊರಕಲಿದೆ ಎಂಬ ಕುತೂಹಲ ಮೂಡಿಸಿದೆ! ಕಾಂಗ್ರೆಸ್ ಮೂಲಗಳ ಅನುಸಾರ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ಅವರ ನಡುವೆ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಇವರಿಬ್ಬರಲ್ಲಿ ಓರ್ವರಿಗೆ ಮಂತ್ರಿ ಪದವಿ ನಿಶ್ಚಿತ ಎಂದು ಹೇಳಲಾಗುತ್ತಿದೆ. Previous post ಬಿ.ಕೆ.ಸಂಗಮೇಶ್ವರ್ – ಮಧು ಬಂಗಾರಪ್ಪ ನಡುವೆ ಸಚಿವ ಸ್ಥಾನಕ್ಕೆ ಭಾರೀ ಪೈಪೋಟಿ!
ಹುಬ್ಬಳ್ಳಿ/ಶಿವಮೊಗ್ಗ, ಮೇ 23: ‘ಕೇಂದ್ರ – ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಮೊದಲ ಹಂತದ ಕಾಮಗಾರಿ, ಮುಂದಿನ ವಾರದಿಂದ ಆರಂಭಗೊಳ್ಳಲಿದೆ’ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮೇ 22 ರಂದು ನೈರುತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳ ಜೊತೆ ಸಂಸದರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚಿಸಲಾದ ವಿಷಯದ ಕುರಿತಂತೆ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 2025 ಕ್ಕೆ ಪೂರ್ಣ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಯನ್ನು 1200 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ಶಿವಮೊಗ್ಗ – ಶಿಕಾರಿಪುರ ನಡುವಿನ 46 ಕಿ.ಮೀ. ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಭೂ ಸ್ವಾದೀನ ಪ್ರಕ್ರಿಯೆ, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. Next post ಮುಂದಿನ ವಾರದಿಂದ ಆರಂಭವಾಗಲಿರುವ ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿ 2025 ಕ್ಕೆ ಪೂರ್ಣ