ಶಿವಮೊಗ್ಗ, ಮೇ 26: ಶಿವಮೊಗ್ಗ ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳ ಸಂಚಾರ ಸಮರ್ಪಕವಾಗಿಲ್ಲ. ನಗರದ ಹೊರವಲಯದ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಬಸ್ ಗಳ ಸಂಚಾರವನ್ನು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಸ್ಥಗಿತಗೊಳಿಸಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಶೋಷಿತ ಸಮುದಾಯಗಳ ವೇದಿಕೆ ಆರೋಪಿಸಿದೆ. ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್.ಆರ್.ಟಿ.ಸಿ. ವಿರುದ್ದ ಸಂಘಟನೆ ಪ್ರತಿಭಟನೆ ನಡೆಸಿತು. ನಂತರ ಡಿಸಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಪತ್ರ ಅರ್ಪಿಸಿತು. ಸ್ಥಗಿತ: ಕೆ.ಎಸ್.ಆರ್.ಟಿ.ಸಿ. ಮುಖ್ಯ ಬಸ್ ನಿಲ್ದಾಣದಿಂದ ವಿನೋಬನಗರ ಮಾರ್ಗವಾಗಿ ಸೋಮಿನಕೊಪ್ಪ, ಕೋಟೆಗಂಗೂರು, ಸಿದ್ಲಿಪುರ, ಗೆಜ್ಜೇನಹಳ್ಳಿ, ವಿರುಪಿನಕೊಪ್ಪ ಸೇರಿದಂತೆ ವಿವಿಧ ಬಡಾವಣೆ ಹಾಗೂ ಗ್ರಾಮಗಳಿಗೆ ಸರ್ಕಾರಿ ಸಿಟಿ ಬಸ್ ಗಳನ್ನು ಓಡಿಸಲಾಗುತ್ತಿತ್ತು. ಇದರಿಂದ ಸಾವಿರಾರು ಜನರಿಗೆ ಅನುಕೂಲವಾಗಿತ್ತು.

ಸರ್ಕಾರಿ ಸಿಟಿ ಬಸ್ ಓಡಿಸಲು ಕೆ.ಎಸ್.ಆರ್.ಟಿ.ಸಿ. ನಿರ್ಲಕ್ಷ್ಯ : ಡಿಸಿ ಕಚೇರಿ ಎದುರು ಪ್ರತಿಭಟನೆ

ಶಿವಮೊಗ್ಗ, ಮೇ 26: ಶಿವಮೊಗ್ಗ ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳ ಸಂಚಾರ ಸಮರ್ಪಕವಾಗಿಲ್ಲ. ನಗರದ ಹೊರವಲಯದ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಬಸ್ ಗಳ ಸಂಚಾರವನ್ನು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಸ್ಥಗಿತಗೊಳಿಸಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಶೋಷಿತ ಸಮುದಾಯಗಳ ವೇದಿಕೆ ಆರೋಪಿಸಿದೆ.

ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್.ಆರ್.ಟಿ.ಸಿ. ವಿರುದ್ದ ಸಂಘಟನೆ ಪ್ರತಿಭಟನೆ ನಡೆಸಿತು. ನಂತರ ಡಿಸಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಪತ್ರ ಅರ್ಪಿಸಿತು.

ಸ್ಥಗಿತ: ಕೆ.ಎಸ್.ಆರ್.ಟಿ.ಸಿ. ಮುಖ್ಯ ಬಸ್ ನಿಲ್ದಾಣದಿಂದ ವಿನೋಬನಗರ ಮಾರ್ಗವಾಗಿ ಸೋಮಿನಕೊಪ್ಪ, ಕೋಟೆಗಂಗೂರು, ಸಿದ್ಲಿಪುರ, ಗೆಜ್ಜೇನಹಳ್ಳಿ, ವಿರುಪಿನಕೊಪ್ಪ ಸೇರಿದಂತೆ ವಿವಿಧ ಬಡಾವಣೆ ಹಾಗೂ ಗ್ರಾಮಗಳಿಗೆ ಸರ್ಕಾರಿ ಸಿಟಿ ಬಸ್ ಗಳನ್ನು ಓಡಿಸಲಾಗುತ್ತಿತ್ತು. ಇದರಿಂದ ಸಾವಿರಾರು ಜನರಿಗೆ ಅನುಕೂಲವಾಗಿತ್ತು.

ಆದರೆ ದಿಢೀರ್ ಆಗಿ ಕೆ.ಎಸ್.ಆರ್.ಟಿ.ಸಿ. ಸಂಸ್ಥೆ ಬಸ್ ಗಳ ಸಂಚಾರ ಸ್ಥಗಿತಗೊಳಿಸಿದೆ. ತಕ್ಷಣವೇ ಬಸ್ ಗಳ ಸಂಚಾರಕ್ಕೆ ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಂದು ಸಂಘಟನೆವತಿಯಿಂದ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಮಕ್ಬುಲ್ ಅಹಮದ್, ಜುಬೇರ್ ಅಹಮದ್, ಸಯ್ಯದ್ ಜಬೀರ್, ನಾಗರಾಜ್, ಸಿದ್ದಪ್ಪ, ದಿಲ್ ಶಾದ್, ಸಮೀನಾ, ದಾದಾ ಖಲಂದರ್, ಇರ್ಫಾನ್, ಶಫೀವುಲ್ಲಾ, ಮಹಮ್ಮದ್ ಅಲಿ, ಪುಷ್ಪಲತಾ ಸೇರಿದಂತೆ ಮೊದಲಾದವರಿದ್ದರು.

ಶಿವಮೊಗ್ಗ, ಮೇ 25: ರೈಲ್ವೆ ಎಂಜಿನ್ ಹಾಗೂ ಬೋಗಿ ನಡುವೆ ಸಂಪರ್ಕದ ಕೊಂಡಿ ಕಳಚಿ, ಬೋಗಿಗಳನ್ನು ಬಿಟ್ಟು ಎಂಜಿನ್ ಮುಂದಕ್ಕೆ ಚಲಿಸಿದ ವಿಲಕ್ಷಣ ಘಟನೆ, ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ತಾಳಗುಪ್ಪ – ಬೆಂಗಳೂರು ನಡುವೆ ಸಂಚರಿಸುವ ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, ಎಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡ ರೈಲಾಗಿದೆ. ಈ ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು. ತಾಳಗುಪ್ಪದಿಂದ ಶಿವಮೊಗ್ಗ ಮುಖ್ಯ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ಸದರಿ ರೈಲು, ಬೆಳಿಗ್ಗೆ 7 ಗಂಟೆ 5 ನಿಮಿಷಕ್ಕೆ ಭದ್ರಾವತಿ ನಿಲ್ದಾಣದತ್ತ ಪ್ರಯಾಣ ಬೆಳೆಸಿತ್ತು. ಬಿಳಕಿ ಸಮೀಪ ಏಕಾಏಕಿ ರೈಲ್ವೆ ಎಂಜಿನ್ ಬೋಗಿಗಳ ಬಿಟ್ಟು ಮುಂದಕ್ಕೆ ಚಲಿಸಿದೆ. ಕೊಂಚ ದೂರ ಕ್ರಮಿಸಿದ ನಂತರ ಎಂಜಿನ್ ನನ್ನು, ಲೋಕೋ ಪೈಲೆಟ್ ನಿಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. Previous post ರೈಲ್ವೆ ಎಂಜಿನ್ – ಬೋಗಿಗಳ ನಡುವೆ ತಪ್ಪಿದ ಸಂಪರ್ಕ..! ಬೋಗಿಗಳನ್ನೇ ಬಿಟ್ಟು ಮುಂದಕ್ಕೆ ಚಲಿಸಿದ ರೈಲ್ವೆ ಎಂಜಿನ್..!!
ಶಿವಮೊಗ್ಗ ನಗರದಲ್ಲಿ ಮಳೆಗಾಲದ ವೇಳೆ ಜನವಸತಿ ಪ್ರದೇಶಗಳಲ್ಲಿ ಉಂಟಾಗುವ ಜಲಾವೃತ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ನಗರದ ವಿವಿಧೆಡೆ ಭೇಟಿಯಿತ್ತು ನಡೆಸುತ್ತಿರುವ ಪರಿಶೀಲನಾ ಕಾರ್ಯ ಶುಕ್ರವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಎಲ್.ಬಿ.ಎಸ್. ನಗರ, ಶರಾವತಿ ನಗರ, ಹರಿಗೆ, ಗುರುಪುರ, ವಿದ್ಯಾನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಹಾದು ಹೋಗಿರುವ ತುಂಗಾ ನಾಲೆ ಹಾಗೂ ಪ್ರಮುಖ ರಾಜ ಕಾಲುವೆಗಳ ಸ್ಥಿತಿಗತಿಯ ವೀಕ್ಷಣೆ ಮಾಡಿದರು. ಶರಾವತಿ ನಗರದ ಬಳಿ ಕೊಳಚೆ ನೀರು ತುಂಗಾ ನಾಲೆಗೆ ಸೇರ್ಪಡೆಯಾಗದಂತೆ ಹಾಗೂ ಎಲ್.ಬಿ.ಎಸ್. ನಗರದ ಚಾನಲ್ ಬಳಿ ಬಿದ್ದಿರುವ ಕಸದ ರಾಶಿ ತೆರವುಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಂಗಾರು ಮಳೆ ಆರಂಭವಾಗುವುದರೊಳಗೆ ರಾಜಕಾಲುವೆ, ಚರಂಡಿಗಳಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗುವ ವ್ಯವಸ್ಥೆ ಮಾಡಬೇಕು. ತಗ್ಗು ಪ್ರದೇಶಗಳಲ್ಲಿ ಸಮಸ್ಯೆ ತಲೆದೋರದಂತೆ ಅಗತ್ಯವಿರುವ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು. Next post ಮಳೆಗಾಲ ಮುನ್ನೆಚ್ಚರಿಕೆ ಕ್ರಮ : ಮುಂದುವರಿದ ಜಿಲ್ಲಾಧಿಕಾರಿಗಳ ಶಿವಮೊಗ್ಗ ಸಿಟಿ ರೌಂಡ್ಸ್..!