ಶಿವಮೊಗ್ಗ ನಗರದಲ್ಲಿ ಮಳೆಗಾಲದ ವೇಳೆ ಜನವಸತಿ ಪ್ರದೇಶಗಳಲ್ಲಿ ಉಂಟಾಗುವ ಜಲಾವೃತ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ನಗರದ ವಿವಿಧೆಡೆ ಭೇಟಿಯಿತ್ತು ನಡೆಸುತ್ತಿರುವ ಪರಿಶೀಲನಾ ಕಾರ್ಯ ಶುಕ್ರವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಎಲ್.ಬಿ.ಎಸ್. ನಗರ, ಶರಾವತಿ ನಗರ, ಹರಿಗೆ, ಗುರುಪುರ, ವಿದ್ಯಾನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಹಾದು ಹೋಗಿರುವ ತುಂಗಾ ನಾಲೆ ಹಾಗೂ ಪ್ರಮುಖ ರಾಜ ಕಾಲುವೆಗಳ ಸ್ಥಿತಿಗತಿಯ ವೀಕ್ಷಣೆ ಮಾಡಿದರು. ಶರಾವತಿ ನಗರದ ಬಳಿ ಕೊಳಚೆ ನೀರು ತುಂಗಾ ನಾಲೆಗೆ ಸೇರ್ಪಡೆಯಾಗದಂತೆ ಹಾಗೂ ಎಲ್.ಬಿ.ಎಸ್. ನಗರದ ಚಾನಲ್ ಬಳಿ ಬಿದ್ದಿರುವ ಕಸದ ರಾಶಿ ತೆರವುಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಂಗಾರು ಮಳೆ ಆರಂಭವಾಗುವುದರೊಳಗೆ ರಾಜಕಾಲುವೆ, ಚರಂಡಿಗಳಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗುವ ವ್ಯವಸ್ಥೆ ಮಾಡಬೇಕು. ತಗ್ಗು ಪ್ರದೇಶಗಳಲ್ಲಿ ಸಮಸ್ಯೆ ತಲೆದೋರದಂತೆ ಅಗತ್ಯವಿರುವ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಳೆಗಾಲ ಮುನ್ನೆಚ್ಚರಿಕೆ ಕ್ರಮ : ಮುಂದುವರಿದ ಜಿಲ್ಲಾಧಿಕಾರಿಗಳ ಶಿವಮೊಗ್ಗ ಸಿಟಿ ರೌಂಡ್ಸ್..!

ಶಿವಮೊಗ್ಗ, ಮೇ 26:  ಮುಂಬರುವ ಮಳೆಗಾಲದ ವೇಳೆ ಜಲಾವೃತ ಸಮಸ್ಯೆ ಎದುರಾಗದಂತೆ ಸೂಕ್ತ ಪರಿಹಾರ ಕ್ರಮಕೈಗೊಳ್ಳುವ ಉದ್ದೇಶದಿಂದ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಶಿವಮೊಗ್ಗ ನಗರದಲ್ಲಿ ನಡೆಸುತ್ತಿರುವ ಪರಿಶೀಲನಾ ಕಾರ್ಯ ಮುಂದುವರಿದಿದೆ.

ಶುಕ್ರವಾರ ಕೂಡ ನಗರದ ವಿವಿಧ ಪ್ರದೇಶಗಳಿಗೆ ಡಿಸಿ ಭೇಟಿ ನೀಡಿದ್ದರು. ಮಳೆಯಿಂದ ಸಮಸ್ಯೆ ಎದುರಿಸಬಹುದಾದ ಪ್ರದೇಶಗಳನ್ನು, ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.

ಪಾಲಿಕೆ ವ್ಯಾಪ್ತಿಯ ಎಲ್‍ಬಿಎಸ್ ನಗರದ ಚಾನಲ್‍ಗೆ ಭೇಟಿ ನೀಡಿ, ಚಾನಲ್‍ನಲ್ಲಿರುವ ಗಿಡಗಂಟಿ, ಕಸ ತೆಗೆಸಬೇಕು. ಇಲ್ಲವಾದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ನೀರು ಹೊರಗೆ ನುಗ್ಗುವ ಸಂಭವವಿದ್ದು, ನೀರು ಸರಾಗವಾಗಿ ಹರಿಯಲು ಅನುವಾಗುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ಶರಾವತಿ ನಗರ ಚಾನಲ್ ಬಳಿ ಭೇಟಿ ನೀಡಿ, ಚರಂಡಿ ಕೊಳಚೆ ನೀರನ್ನು ಚಾನಲ್‍ಗೆ ಬಿಡದಂತೆ ಕ್ರಮ ವಹಿಸಬೇಕೆಂದು ತಿಳಿಸಿದ ಅವರು ನಗರದ ಹೊರ ವಲಯದ ಗೋಪಿಶೆಟ್ಟಿಕೊಪ್ಪದ ಚಾನೆಲ್ ತಿರುವಿನಲ್ಲಿ ನೀರು ರಭಸವಾಗಿ ಹರಿಯುವುದರಿಂದ ಕಳೆದ ಬಾರಿ ಚಾನಲ್ ಏರಿ ಒಡೆದಿತ್ತು. ಈ ಬಾರಿ ಹಾಗಾಗದಂತೆ ರಾಮೇನಕೊಪ್ಪ ಬಳಿಯ ಕಾನೆಹಳ್ಳಕ್ಕೆ ನೀರು ಹರಿಸುವ ಮೂಲಕ ಆ ರಭಸವನ್ನು ಕಡಿಮೆ ಮಾಡಬಹುದೆಂದು ಸಲಹೆ ನೀಡಿದರು.

ದಿ.25 ರಂದು ನಗರದ ಹರಿಗೆ ಚಾನಲ್, ಗುರುಪುರ ಮತ್ತು ವಿದ್ಯಾನಗರದ ರಾಜಾ ಕಾ ಲುವೆ ಗಳ ಬಳಿ ಭೇಟಿ ನೀಡಿ ಪರಿಶೀಲನೆ ನಡೆಸಿ ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಕುರಿತು ಸೂಚನೆಗಳನ್ನು ನೀಡಿದ್ದರು. ವಿವಿಧ ನಾಲೆಗಳು, ರಾಜ ಕಾಲುವೆ, ಚಾನಲ್, ಚರಂಡಿಗಳನ್ನು ಪರಿಶೀಲಿಸಿ, ಮಳೆ ಆರಂಭವಾಗುವ ಮುನ್ನ ಕಸ, ಮಣ್ಣು, ಹೂಳು ತೆಗೆಸುವಂತೆ ಹಾಗೂ ಇತರೆ ಪರ್ಯಾಯ ವ್ಯವಸ್ಥೆ ಮಾಡಿ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ಕ್ರಮ ವಹಿಸುವಂತೆ ಸಣ್ಣ ನೀರಾವರಿ ಇಲಾಖೆ, ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿವಮೊಗ್ಗ, ಮೇ 26: ಶಿವಮೊಗ್ಗ ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳ ಸಂಚಾರ ಸಮರ್ಪಕವಾಗಿಲ್ಲ. ನಗರದ ಹೊರವಲಯದ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಬಸ್ ಗಳ ಸಂಚಾರವನ್ನು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಸ್ಥಗಿತಗೊಳಿಸಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಶೋಷಿತ ಸಮುದಾಯಗಳ ವೇದಿಕೆ ಆರೋಪಿಸಿದೆ. ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್.ಆರ್.ಟಿ.ಸಿ. ವಿರುದ್ದ ಸಂಘಟನೆ ಪ್ರತಿಭಟನೆ ನಡೆಸಿತು. ನಂತರ ಡಿಸಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಪತ್ರ ಅರ್ಪಿಸಿತು. ಸ್ಥಗಿತ: ಕೆ.ಎಸ್.ಆರ್.ಟಿ.ಸಿ. ಮುಖ್ಯ ಬಸ್ ನಿಲ್ದಾಣದಿಂದ ವಿನೋಬನಗರ ಮಾರ್ಗವಾಗಿ ಸೋಮಿನಕೊಪ್ಪ, ಕೋಟೆಗಂಗೂರು, ಸಿದ್ಲಿಪುರ, ಗೆಜ್ಜೇನಹಳ್ಳಿ, ವಿರುಪಿನಕೊಪ್ಪ ಸೇರಿದಂತೆ ವಿವಿಧ ಬಡಾವಣೆ ಹಾಗೂ ಗ್ರಾಮಗಳಿಗೆ ಸರ್ಕಾರಿ ಸಿಟಿ ಬಸ್ ಗಳನ್ನು ಓಡಿಸಲಾಗುತ್ತಿತ್ತು. ಇದರಿಂದ ಸಾವಿರಾರು ಜನರಿಗೆ ಅನುಕೂಲವಾಗಿತ್ತು. Previous post ಸರ್ಕಾರಿ ಸಿಟಿ ಬಸ್ ಓಡಿಸಲು ಕೆ.ಎಸ್.ಆರ್.ಟಿ.ಸಿ. ನಿರ್ಲಕ್ಷ್ಯ : ಡಿಸಿ ಕಚೇರಿ ಎದುರು ಪ್ರತಿಭಟನೆ
‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ, ಮೇ 26: ‘ಮಲೆನಾಡು ಭಾಗದಲ್ಲಿ ಮೊಬೈಲ್ ಫೋನ್ ಹಾಗೂ ಇಂಟರ್ನೆಟ್ ಸಂಪರ್ಕ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4 ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ’ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಈ ಕುರಿತಂತೆ ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರು ಕ್ಷೇತ್ರಕ್ಕೆ 25 ಟವರ್ ಗಳು ಮಂಜೂರಾಗಿದೆ ಎಂದು ಮಾಹಿತಿ ನೀಡಿದ್ದಾರೆ. Next post ‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ