ಶಿವಮೊಗ್ಗ, ಮೇ 28: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ (ಸೆಂಟ್ರಲ್ ಜೈಲ್) ದ ಮೇಲೆ ಕಳೆದ ಏಪ್ರಿಲ್ ತಿಂಗಳು ಎಸ್ಪಿ ನೇತೃತ್ವದ ಪೊಲೀಸ್ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿತ್ತು. ಇದೀಗ ಮತ್ತೊಮ್ಮೆ ಸೆಂಟ್ರಲ್ ಜೈಲ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಭಾರೀ ದೊಡ್ಡ ಸಂಖ್ಯೆಯ ಪೊಲೀಸರು, ಭಾನುವಾರ ಬೆಳಿಗ್ಗೆ ಕಾರಾಗೃಹದ ಪ್ರತಿಯೊಂದು ಸೆಲ್ ತಪಾಸಣೆ ನಡೆಸಿದ್ದಾರೆ. ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಕೆ.ಬಿಂಧುಮಣಿ, ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ವಿವಿಧ ಠಾಣೆಗಳ ಇನ್ಸ್’ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ ತಪಾಸಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಮತ್ತೆ ಪೊಲೀಸ್ ರೈಡ್..!

ಶಿವಮೊಗ್ಗ, ಮೇ 28: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ (ಸೆಂಟ್ರಲ್ ಜೈಲ್) ದ ಮೇಲೆ, ಕಳೆದ ಎಪ್ರಿಲ್ ತಿಂಗಳು ಎಸ್ಪಿ ನೇತೃತ್ವದ ಪೊಲೀಸ್ ತಂಡ ದಿಢೀರ್ ದಾಳಿ ಮಾಡಿ ತಪಾಸಣೆ ನಡೆಸಿತ್ತು.

ಇದೀಗ ಮತ್ತೊಮ್ಮೆ ಸೆಂಟ್ರಲ್ ಜೈಲ್ ಮೇಲೆ, ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಭಾರೀ ದೊಡ್ಡ ಸಂಖ್ಯೆಯ ಪೊಲೀಸ್ ತಂಡ, ಭಾನುವಾರ ಬೆಳಿಗ್ಗೆ ಕಾರಾಗೃಹದ ಪ್ರತಿಯೊಂದು ಸೆಲ್ ತಪಾಸಣೆಗೊಳಪಡಿಸಿದೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಕೆ.ಬಿಂಧುಮಣಿ, ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ವಿವಿಧ ಠಾಣೆಗಳ ಇನ್ಸ್’ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿಗಳು ತಪಾಸಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಕಾರಾಗೃಹದ ಮೇಲೆ ದಾಳಿ ನಡೆಸಿದ ವೇಳೆ ಯಾವೆಲ್ಲ ವಸ್ತುಗಳು ಸಿಕ್ಕಿವೆ? ದಿಢೀರ್ ದಾಳಿ ನಡೆಸಲು ಕಾರಣವಾದ ಅಂಶಗಳೇನು? ಎಂಬಿತ್ಯಾದಿ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ. ಈ ಕುರಿತಂತೆ ಪೊಲೀಸ್ ಇಲಾಖೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಆರೋಪಗಳು: ಕೇಂದ್ರ ಕಾರಾಗೃಹದಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಇದರ ಜೊತೆಗೆ ಕಳೆದ ತಿಂಗಳು ಜೈಲ್ ನಲ್ಲಿದ್ದ ವಿಚಾರಣಾಧೀನ ಕೈದಿಯೋರ್ವರು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಅನಾರೋಗ್ಯದ ಕಾರಣದಿಂದ ಇವರು ಮೃತಪಟ್ಟಿದ್ದರು ಎಂದು ಹೇಳಲಾಗಿತ್ತು. ಆದರೆ ವಿಚಾರಣಾಧೀನ ಕೈದಿಯ ಸಾವಿಗೆ, ಜೈಲ್ ನಲ್ಲಿಯೇ ಕೆಲ ಕೈದಿಗಳು ನಡೆಸಿದ್ದ ಹಲ್ಲೆ ಕಾರಣವಾಗಿದೆ ಎಂದು ಮೃತನ ಕುಟುಂಬದವರು ಆರೋಪಿಸಿದ್ದರು.

ಈ ಘಟನೆಯ ಬೆನ್ನಲ್ಲೇ, ಕಾರಾಗೃಹದಲ್ಲಿಯೇ ಮತ್ತೋರ್ವ ವಿಚಾರಣಾಧೀನ ಕೈದಿ ಕಿಟಕಿಯೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ಕೂಡ ನಡೆದಿತ್ತು.

‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ, ಮೇ 26: ‘ಮಲೆನಾಡು ಭಾಗದಲ್ಲಿ ಮೊಬೈಲ್ ಫೋನ್ ಹಾಗೂ ಇಂಟರ್ನೆಟ್ ಸಂಪರ್ಕ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4 ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ’ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಈ ಕುರಿತಂತೆ ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರು ಕ್ಷೇತ್ರಕ್ಕೆ 25 ಟವರ್ ಗಳು ಮಂಜೂರಾಗಿದೆ ಎಂದು ಮಾಹಿತಿ ನೀಡಿದ್ದಾರೆ. Previous post ‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ
ಬೆಂಗಳೂರು/ಶಿವಮೊಗ್ಗ, ಮೇ 29: ಸರ್ಕಾರದ 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ, ಮೇ 31 ರ ಬುಧವಾರದಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಮೇ 29 ರಿಂದಲೇ ಶಾಲೆಗಳ ಆರಂಭದ ಪೂರ್ವಭಾವಿ ಸಿದ್ದತೆಗಳು ನಡೆಯಲಾರಂಭಿಸಿವೆ. ‘ಮೇ 31 ರಂದು ಮಕ್ಕಳಿಗೆ ಸಿಹಿ ವಿತರಣೆ ಮಾಡುವ ಮೂಲಕ ಶಾಲೆಗಳಿಗೆ ಬರ ಮಾಡಿಕೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. Next post ಮೇ 31 ರಿಂದ ಶಾಲೆಗಳು ಆರಂಭ : ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಸ್ವಾಗತ –  ಶಿಕ್ಷಣ ಸಚಿವ ಮಧು ಬಂಗಾರಪ್ಪ