ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಗಳಲ್ಲಿ, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ 22 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜೂ. 1 ರ ರಾತ್ರಿ ನಡೆದಿದೆ. ಠಾಣಾ ವ್ಯಾಪ್ತಿಯ ಕಾಶೀಪುರ, ಆಲ್ಕೋಳ, ಗಾಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದ ವರ್ತನೆ : 22 ಜನರು ಪೊಲೀಸ್ ವಶಕ್ಕೆ

ಶಿವಮೊಗ್ಗ, ಜೂ. 2: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಗಳಲ್ಲಿ, ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಾಗೂ ಅಸಭ್ಯ ವರ್ತನೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ, 22 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜೂ. 1 ರ ರಾತ್ರಿ ನಡೆದಿದೆ.

ಠಾಣಾ ವ್ಯಾಪ್ತಿಯ ಕಾಶೀಪುರ, ಆಲ್ಕೋಳ, ಗಾಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ನಡೆಸಿದ ವಿಶೇಷ ಗಸ್ತು ಕಾರ್ಯಾಚರಣೆ ವೇಳೆ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದವರನ್ನು ವಶಕ್ಕೆ ಪಡೆಯಲಾಗಿದೆ.

ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದ ವರ್ತನೆ : 22 ಜನರು ಪೊಲೀಸ್ ವಶಕ್ಕೆ

ವಶಕ್ಕೆ ಪಡೆದವರನ್ನು ಠಾಣೆಗೆ ಕರೆತಂದು ಅವರ ಪೂರ್ವಾಪರಗಳನ್ನು ಸಂಗ್ರಹಿಸಿದ್ದಾರೆ. 22 ಲಘು ಪ್ರಕರಣ ದಾಖಲಿಸಿಕೊಂಡು ಬಿಡುಗಡೆ ಮಾಡಿದ್ದಾರೆ.

ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ವಿನೋಬನಗರ ಠಾಣೆ ಇನ್ಸ್’ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್, ಸಬ್ ಇನ್ಸ್’ಪೆಕ್ಟರ್ ಸುನೀಲ್ ಮತ್ತವರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ, ಜೂ. 2: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಳೆ ಹಾನಿ ತಡೆಗೆ ಅಗತ್ಯ ಕ್ರಮಕೈಗೊಳ್ಳುವಂತೆ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಇದೀಗ ಅವರೇ ಹೊರಡಿಸಿರುವ ಆದೇಶದಿಂದ, ಮಳೆ ಹಾನಿ ಸಂಬಂಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಅಡೆತಡೆಯಾಗಿ ಪರಿಣಮಿಸಿದೆ! ಹೌದು. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡಿದ್ದ ಎಲ್ಲ ಇಲಾಖೆ ಹಾಗೂ ನಿಗಮ-ಮಂಡಳಿ, ಪ್ರಾಧಿಕಾರಿಗಳ ಕಾಮಗಾರಿಗಳಿಗೆ ಸಂಬಂಧಿಸಿದ ಹಣ ಬಿಡುಗಡೆ / ಪಾವತಿ ತಡೆಹಿಡಿಯುವಂತೆ ಮತ್ತು ಪ್ರಾರಂಭವಾಗದಿರುವ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದರು. Previous post ಸಿಎಂ ಆದೇಶದ ಎಫೆಕ್ಟ್ : ಮಳೆ ಹಾನಿ ತಡೆ ಕಾಮಗಾರಿ ಅನುಷ್ಠಾನಕ್ಕೆ ಅಡೆತಡೆ!
ಶಿವಮೊಗ್ಗ, ಜೂ. 2: ಶಿವಮೊಗ್ಗ ನಗರದ ವಿವಿಧೆಡೆ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ತುಂಗಾ ನಗರ ಠಾಣೆ ಪೊಲೀಸರು ಮೂವರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಿದ್ದಾರೆ. Next post ಸುಲಿಗೆ ಪ್ರಕರಣ – ಮೂವರು ಅಪ್ರಾಪ್ತರ ಬಂಧನ : 23 ಮೊಬೈಲ್ ಪೋನ್ ವಶ!