ಶಿವಮೊಗ್ಗ, ಜೂ. 5: ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ದೀನ್ ಅವರನ್ನು, ಬೆಂಗಳೂರಿನ ವಾರ್ತಾ ಇಲಾಖೆಯ ಕೇಂದ್ರ ಕಚೇರಿಗೆ ವರ್ಗಾವಣೆಗೊಳಿಸಲಾಗಿದೆ. ಶಫಿ ಸಾದುದ್ದೀನ್ ಅವರು ಕಳೆದ 6 ವರ್ಷಗಳಿಂದ ಶಿವಮೊಗ್ಗದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಸರಳ, ಸಜ್ಜನ, ಪ್ರಾಮಾಣಿಕ ವ್ಯಕ್ತಿತ್ವದವರಾಗಿದ್ದರು. ಯಾವುದೇ ಗೊಂದಲ, ಗಡಿಬಿಡಿಗೆ ಆಸ್ಪದವಾಗದಂತೆ ತಮ್ಮ ಕರ್ತವ್ಯ ನಿರ್ವಹಣೆ ಮಾಡಿಕೊಂಡು ಬಂದಿದ್ದರು.

ಶಿವಮೊಗ್ಗ ಜಿಲ್ಲಾ ವಾರ್ತಾ – ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ಧೀನ್ ವರ್ಗಾವಣೆ

ಶಿವಮೊಗ್ಗ, ಜೂ. 5: ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ದೀನ್ ಅವರನ್ನು, ವಾರ್ತಾ ಇಲಾಖೆಯ ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆಗೊಳಿಸಲಾಗಿದೆ.

ಶಫಿ ಸಾದುದ್ದೀನ್ ಅವರು ಕಳೆದ 6 ವರ್ಷಗಳಿಂದ ಶಿವಮೊಗ್ಗದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಸರಳ, ಸಜ್ಜನ, ಪ್ರಾಮಾಣಿಕ ವ್ಯಕ್ತಿತ್ವದವರಾಗಿದ್ದರು. ಯಾವುದೇ ಗೊಂದಲ, ಗಡಿಬಿಡಿಗೆ ಆಸ್ಪದವಾಗದಂತೆ ತಮ್ಮ ಕರ್ತವ್ಯ ನಿರ್ವಹಣೆ ಮಾಡಿಕೊಂಡು ಬಂದಿದ್ದರು.

ಸರ್ಕಾರಿ ಕಾರ್ಯಕ್ರಮ – ಸಭೆಗಳ ಕುರಿತಂತೆ ಮಾಧ್ಯಮಗಳಿಗೆ ಅವರು ಕಳುಹಿಸುತ್ತಿದ್ದ ವರದಿಗಳ ನಿರೂಪಣಾ ಶೈಲಿಯು ಪತ್ರಕರ್ತ ವಲಯದ ಮೆಚ್ಚುಗೆಗೆ ಪಾತ್ರವಾಗಿತ್ತು.

ಶಫಿ ಸಾದುದ್ದೀನ್ ಅವರ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಇನ್ನಷ್ಟೆ ವಾರ್ತಾಧಿಕಾರಿಗಳ ನಿಯೋಜನೆಯಾಗಬೇಕಾಗಿದೆ. ಕಚೇರಿಯ ಸಹಾಯಕ ವಾರ್ತಾಧಿಕಾರಿ ಮಾರುತಿ ಅವರಿಗೆ ಪ್ರಭಾರ ವಾರ್ತಾಧಿಕಾರಿ ಜವಾಬ್ದಾರಿ ವಹಿಸಲಾಗಿದೆ.

ಮದ್ಯ ಸೇವನೆಗೆ ಆಗಮಿಸಿದ್ದ ಯುವಕರ ತಂಡವೊಂದು, ಪೊಲೀಸರ ಸಮ್ಮುಖದಲ್ಲಿಯೇ ಬಾರ್ ವೊಂದರ ಕ್ಯಾಷಿಯರ್ ಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಆಘಾತಕಾರಿ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಚಿನ್ (27) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಆಯನೂರು ತಾಂಡಾದ ನಿವಾಸಿಗಳಾದ ನಿರಂಜನ, ಸತೀಶ್ ಹಾಗೂ ಅಶೋಕ ನಾಯ್ಕ್ ಆರೋಪಿಗಳೆಂದು ಗುರುತಿಸಲಾಗಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. Previous post ಬಾರ್ ಕ್ಯಾಷಿಯರ್ ಕೊಲೆ ಮಾಡಿದ ಮದ್ಯ ಸೇವನೆಗೆ ಆಗಮಿಸಿದ್ದ ಯುವಕರು!
Next post ಬಾರ್ ಕ್ಯಾಷಿಯರ್ ಹತ್ಯೆ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು..!