ಬಾರ್ ಕ್ಯಾಷಿಯರ್ ಹತ್ಯೆ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು..!

*ಕ್ರಿಮಿನಲ್ಸ್ ಗಳಿಗೆ ಪೊಲೀಸರ ಖಡಕ್ ವಾರ್ನಿಂಗ್!

*ಪೊಲೀಸರ ಎದುರಿನಲ್ಲಿಯೇ ಚೂರಿಯಿಂದ ದಾಳಿ ನಡೆಸಿದ್ದ ಹಂತಕರು!!

ಶಿವಮೊಗ್ಗ, ಜೂ. 5: ಶಿವಮೊಗ್ಗ ತಾಲೂಕು ಆಯನೂರು ಬಾರ್ ಕ್ಯಾಷಿಯರ್ ನನ್ನು ಪೊಲೀಸರ ಸಮ್ಮುಖದಲ್ಲಿಯೇ ಹತ್ಯೆ ನಡೆಸಿ ಪರಾರಿಯಾಗಿದ್ದ ಆರೋಪಿಗಳಲ್ಲಿ, ಓರ್ವನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸೋಮವಾರ ನಡೆದಿದೆ.

ಸತೀಶ್ ಗುಂಡೇಟಿಗೆ ತುತ್ತಾದ ಆರೋಪಿ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಹತ್ಯೆ ನಡೆಸಿದ ನಂತರ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನಕ್ಕೆ ಪೊಲೀಸರು ತೆರೆಳಿದ್ದ ವೇಳೆ, ಆಪಾದಿತ ಸತೀಶ್ ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿ ನಡೆಸಲು ಮುಂದಾಗಿದ್ದ. ಈ ವೇಳೆ ಆತ್ಮ ರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡಿಕ್ಕಿ ವಶಕ್ಕೆ ಪಡೆದಿದ್ದಾರೆ.

ಹತ್ಯೆ: ಆಯನೂರು ತಾಂಡಾದ ಮೂವರು ಆರೋಪಿಗಳು ಆಯನೂರಿನ ನವರತ್ನ ಬಾರ್  ನಲ್ಲಿ ಕ್ಯಾಷಿಯರ್ ಸಚಿನ್ ಎಂಬ ಯುವಕನನ್ನು ಪೊಲೀಸರ ಸಮ್ಮುಖದಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ನಂತರ ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಶಿವಮೊಗ್ಗ, ಜೂ. 5: ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ದೀನ್ ಅವರನ್ನು, ಬೆಂಗಳೂರಿನ ವಾರ್ತಾ ಇಲಾಖೆಯ ಕೇಂದ್ರ ಕಚೇರಿಗೆ ವರ್ಗಾವಣೆಗೊಳಿಸಲಾಗಿದೆ. ಶಫಿ ಸಾದುದ್ದೀನ್ ಅವರು ಕಳೆದ 6 ವರ್ಷಗಳಿಂದ ಶಿವಮೊಗ್ಗದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಸರಳ, ಸಜ್ಜನ, ಪ್ರಾಮಾಣಿಕ ವ್ಯಕ್ತಿತ್ವದವರಾಗಿದ್ದರು. ಯಾವುದೇ ಗೊಂದಲ, ಗಡಿಬಿಡಿಗೆ ಆಸ್ಪದವಾಗದಂತೆ ತಮ್ಮ ಕರ್ತವ್ಯ ನಿರ್ವಹಣೆ ಮಾಡಿಕೊಂಡು ಬಂದಿದ್ದರು. Previous post ಶಿವಮೊಗ್ಗ ಜಿಲ್ಲಾ ವಾರ್ತಾ – ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ಧೀನ್ ವರ್ಗಾವಣೆ
ಶಿವಮೊಗ್ಗ, ಜೂ. 6: ‘ದಕ್ಷಿಣ ಆಫ್ರಿಕಾದ ಜೋರ್ಡಾನ್ ದೇಶ ಹಾಗೂ ಉತ್ತರ ಭಾರತದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 9 ಜನರಲ್ಲಿ ಮಲೇರಿಯಾ ರೋಗ ಪತ್ತೆಯಾಗಿತ್ತು. ಇವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ’ ಎಂದು ಆರೋಗ್ಯ ಇಲಾಖೆಯ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡುದಪ್ಪ ಕಸಬಿ ಅವರು ತಿಳಿಸಿದ್ದಾರೆ. ‘ದಕ್ಷಿಣ ಆಫ್ರಿಕಾದಲ್ಲಿ ಮಲೇರಿಯಾ ರೋಗ ಹೆಚ್ಚಿದೆ. ಕಳೆದ ಮೇ ತಿಂಗಳಲ್ಲಿ ಜೋರ್ಡಾನ್ ದೇಶದಿಂದ ಹಿಂದಿರುಗಿದ್ದ ಹಕ್ಕಿಪಿಕ್ಕಿ ಸಮುದಾಯದ 106 ಜನರ ಆರೋಗ್ಯ ತಪಾಸಣೆಗೊಳಪಡಿಸಲಾಗಿತ್ತು. ಈ ವೇಳೆ ಮೂವರು ಪುರುಷರಲ್ಲಿ ರೋಗ ಪತ್ತೆಯಾಗಿತ್ತು. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಅವರೆಲ್ಲರೂ ಗುಣಮುಖರಾಗಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ. Next post ಸೂಡಾನ್ ದೇಶ, ಉತ್ತರ ಭಾರತದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 9 ಜನರಲ್ಲಿ ಮಲೇರಿಯಾ ರೋಗ ಪತ್ತೆ!