
ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಸರ ಕಳವು ಮಾಡಿದ್ದ ಆರೋಪಿ ಸೆರೆ!
ಶಿವಮೊಗ್ಗ, ಜೂ. 10: ಮನೆಯೊಂದರಲ್ಲಿ ಬಂಗಾರದ ಸರ ಕಳವು ಮಾಡಿದ್ದ ಆರೋಪಿಯನ್ನು ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನವುಲೆ ಗ್ರಾಮದ ನಿವಾಸಿ ಚೇತನ್ ಬಿ (32) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಕಳವು ಮಾಡಿದ್ದ 3.40 ಲಕ್ಷ ರೂ. ಮೌಲ್ಯದ 68 ಗ್ರಾಂ ತೂಕದ ಬಂಗಾರದ ಸರವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಎಂ.ಸುರೇಶ್ ಮಾರ್ಗದರ್ಶನದಲ್ಲಿ ಜಯನಗರ ಠಾಣೆ ಇನ್ಸ್’ಪೆಕ್ಟರ್ ಮಾದಪ್ಪ, ಎಎಸ್ಐ ಕರಿಬಸಪ್ಪ, ಸಿಬ್ಬಂದಿಗಳಾದ ಆದರ್ಶ, ರೋಷನ್, ರವಿಕಿರಣ್ ಅವರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಪ್ರಕರಣದ ಹಿನ್ನಲೆ: ಜೂ. 18 ರ ಬೆಳಗಿನ ಜಾವ ಶಿವಮೊಗ್ಗದ ಗಾಂಧಿನಗರ ಬಿ ಬ್ಲಾಕ್ 3 ನೇ ಕ್ರಾಸ್ ನ ವಾಸದ ಮನೆಯೊಂದರಲ್ಲಿ ಚಿನ್ನದ ಸರ ಕಳವು ಮಾಡಲಾಗಿತ್ತು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
More Stories
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರ ಅಕ್ರಮ ಮರಳು ಲೂಟಿಗೆ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?
shimoga | A temporary break in illegal sand looting after the case of the female officer: Does the administration need to wake up?
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರಕ ಅಕ್ರಮ ಮರಳು ಲೂಟಿಗೆ ತಾತ್ಕಾಲಿಕ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?