ಹೆಂಡತಿ ಕೊಂದ ಗಂಡನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ!

ಪತ್ನಿಯ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

ಭದ್ರಾವತಿ ತಾಲೂಕು ಹೊಳೆಹೊನ್ನೂರು ಪಟ್ಟಣದಲ್ಲಿ ನಡೆದಿದ್ದ ಘಟನೆ

ಶಿವಮೊಗ್ಗ, ಜು. 2: ಪತ್ನಿಯ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಭದ್ರಾವತಿಯ 4 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಹೊಳೆಹೊನ್ನೂರು ಪಟ್ಟಣದ ನಿವಾಸಿ ಗಣೇಶ್ (44) ಶಿಕ್ಷೆಗೊಳಗಾದ ಪತಿ ಎಂದು ಗುರುತಿಸಲಾಗಿದೆ. ಜೀವಾವಧಿ ಶಿಕ್ಷೆಯ ಜೊತೆಗೆ 50 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 3 ವರ್ಷಗಳ ಕಾಲ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಲಾಗಿದೆ.

ನ್ಯಾಯಾಧೀಶರಾದ ಶಶಿಧರ ಅವರು ಜು. 1 ರಂದು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ರತ್ನಮ್ಮರವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನಲೆ: 3-5-2020 ರಂದು ಕೌಟಂಬಿಕ ಕಲಹದ ಹಿನ್ನಲೆಯಲ್ಲಿ ಗಣೇಶನು ಪತ್ನಿ ಗೀತಾ (40) ಅವರ ತಲೆಗೆ ಆಯುಧವೊಂದರಿಂದ ಹೊಡೆದು ಕೊಲೆ ಮಾಡಿದ್ದ. ಈ ಕುರಿತಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್’ಪೆಕ್ಟರ್ ಇ.ಓ. ಮಂಜುನಾಥ್ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಎಎಸ್ಐ ಶ್ರೀನಿವಾಸ್ ಅವರು ಪ್ರಕರಣದ ತನಿಖಾ ಸಹಾಯಕರಾಗಿ ಕಾರ್ಯನಿರ್ವಹಣೆ ಮಾಡಿದ್ದರು.

Previous post ‘ದಿಕ್ಕು ತಪ್ಪಿದ, ಮೌಲ್ಯಗಳನ್ನು ಮರೆತ ಪತ್ರಿಕೋದ್ಯಮ’ – ಹಿರಿಯ ಪತ್ರಕರ್ತ ಸಮಿವುಲ್ಲಾ ಬೆಲಗೂರು
ಹಣ ವಸೂಲಿ : ತಪ್ಪಿತಸ್ಥ ಮ್ಯಾನ್ ಪವರ್ ಏಜೆನ್ಸಿಗಳ ವಿರುದ್ದ ಕ್ರಮಕ್ಕೆ ಡಿಸಿ ಸೂಚನೆ ಮರಳು ದಂಧೆ : ಸಿ ಸಿ ಕ್ಯಾಮರಾ ದೃಶ್ಯಾವಳಿ ಸಂಗ್ರಹಕ್ಕೆ ಆದೇಶ ಶಾಲಾ ಭೂಮಿ ಒತ್ತುವರಿ ತೆರವಿಗೆ, ಮೀನುಗಾರಿಕೆ ನಿರ್ಬಂಧಕ್ಕೆ ಶಿವಮೊಗ್ಗ ಡಿಸಿ ತಾಕೀತು! Next post ಹಣ ವಸೂಲಿ : ತಪ್ಪಿತಸ್ಥ ಮ್ಯಾನ್ ಪವರ್ ಏಜೆನ್ಸಿಗಳ ವಿರುದ್ದ ಕ್ರಮಕ್ಕೆ ಡಿಸಿ ಸೂಚನೆ