ಶಿವಮೊಗ್ಗ : ಕೊನೆಗೂ ಬೋನಿಗೆ ಬಿದ್ದ ಗಂಡು ಚಿರತೆ..!

ಶಿವಮೊಗ್ಗ : ಕೊನೆಗೂ ಬೋನಿಗೆ ಬಿದ್ದ ಗಂಡು ಚಿರತೆ!

ಶಿವಮೊಗ್ಗ, ಆ. 19: ಶಿವಮೊಗ್ಗ ತಾಲೂಕಿನ ಬಿಕ್ಕೋನಹಳ್ಳಿ ಗ್ರಾಮದ ಹೊರವಲಯದಲ್ಲಿ ಗಂಡು ಚಿರತೆಯೊಂದು ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ತಡರಾತ್ರಿ ನಡೆದಿದ್ದು, ಶನಿವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

ಶಿವಮೊಗ್ಗ : ಕೊನೆಗೂ ಬೋನಿಗೆ ಬಿದ್ದ ಗಂಡು ಚಿರತೆ!

‘ಪ್ರಸ್ತುತ ಬೋನಿಗೆ ಬಿದ್ದಿರುವ ಚಿರತೆಗೆ ಸರಿಸುಮಾರು 7 ವರ್ಷ ವಯೋಮಾನವಿದೆ. ಚಿರತೆಯನ್ನು ತ್ಯಾವರೆಕೊಪ್ಪ ಲಯನ್ ಸಫಾರಿಯಲ್ಲಿಡಲಾಗಿದ್ದು, ಇದನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ರವಾನಿಸಲಾಗುವುದು’ ಎಂದು ಅರಣ್ಯ ಇಲಾಖೆ ಮೂಲಗಳು ಮಾಹಿತಿ ನೀಡಿವೆ.

ಶಿವಮೊಗ್ಗ  ಕೊನೆಗೂ ಬೋನಿಗೆ ಬಿದ್ದ ಗಂಡು ಚಿರತೆ!

ಕಳೆದ ಕೆಲ ದಿನಗಳ ಹಿಂದೆ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಸಾಯಿಸಿತ್ತು. ಘಟನೆಯ ನಂತರ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಕ್ರಮಕೈಗೊಂಡಿತ್ತು. ಇದಕ್ಕಾಗಿ ಮೈಸೂರಿನಿಂದ ವಿಶೇಷ ತಂಡ ಕೂಡ ಆಗಮಿಸಿತ್ತು.

ಶಿವಮೊಗ್ಗ : ಕೊನೆಗೂ ಬೋನಿಗೆ ಬಿದ್ದ ಗಂಡು ಚಿರತೆ!

ಕಳೆದ ಹಲವು ದಿನಗಳಿಂದ ಬಿಕ್ಕೋನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಸುತ್ತಮುತ್ತ ಚಿರತೆ ಸೆರೆಗೆ ಅರಣ್ಯ ಇಲಾಖೆ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿತ್ತು. ಹಲವೆಡೆ ಕ್ಯಾಮರಾಗಳನ್ನು ಅಳವಡಿಸಿ ಚಿರತೆಯ ಚಲನವಲನದ ಮೇಲೆ ಕಣ್ಣಿಟ್ಟಿತ್ತು. ಇದೀಗ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಸಫಲವಾಗಿದೆ.

ಶಿವಮೊಗ್ಗ : ಕೊನೆಗೂ ಬೋನಿಗೆ ಬಿದ್ದ ಗಂಡು ಚಿರತೆ!

ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಶಂಕರ ವಲಯದ ಆರ್.ಎಫ್.ಓ ಸುಧಾಕರ್, ಡಿ.ಆರ್.ಎಫ್.ಓ ಪಾಂಡುರಂಗ, ಇಫ್ತೀಕರ್, ಉಮೇಶ್ ನಾಯ್ಕ್, ಹನುಮಂತು ಮೊದಲಾದವರು ಭಾಗಿಯಾಗಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *