
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟಕ್ಕೆ ಚಾಲನೆ
ಬೆಂಗಳೂರು/ಶಿವಮೊಗ್ಗ, ಆ. 31: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟಕ್ಕೆ ಮಂಗಳವಾರ ಬೆಳಿಗ್ಗೆ ವಿಧ್ಯುಕ್ತ ಚಾಲನೆ ದೊರಕಿದೆ.
ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಬೆಳಿಗ್ಗೆ 9.50 ಕ್ಕೆ ಪ್ರಯಾಣ ಆರಂಭಿಸಿತು. ಇಂಡೀಗೋ ಏರ್ ಲೈನ್ಸ್ ಸಂಸ್ಥೆಯ ಸಿಬ್ಬಂದಿಗಳು ಗಣ್ಯರಿಗೆ ಪುಷ್ಪಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.
ಶಿವಮೊಗ್ಗಕ್ಕೆ ಹೊರಟ ವಿಮಾನದಲ್ಲಿ ಮೂಲಸೌಕರ್ಯ ಇಲಾಖೆ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಆರಗ ಜ್ಞಾನೇಂದ್ರ, ಶಾಸಕ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಮೊದಲಾದವರಿದ್ದರು.