ಶಿವಮೊಗ್ಗ : ಗಣೇಶ ಹಬ್ಬದ ವೇಳೆ ಪೊಲೀಸರೊಂದಿಗೆ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಸಾರ್ವಜನಿಕರಿಗೆ ಅವಕಾಶ

ಶಿವಮೊಗ್ಗ : ಗಣೇಶ ಹಬ್ಬದ ವೇಳೆ ಪೊಲೀಸರೊಂದಿಗೆ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಸಾರ್ವಜನಿಕರಿಗೆ ಅವಕಾಶ

ಶಿವಮೊಗ್ಗ, ಸೆ. 1: ಮುಂಬರುವ ಗಣೇಶ ಹಬ್ಬದ ಭದ್ರತೆಗೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳಲಾರಂಭಿಸಿದೆ. ಇದೀಗ ಗಣೇಶೋತ್ಸವದ ಭದ್ರತಾ ಕಾರ್ಯಕ್ಕೆ ನಾಗರೀಕರು ಹಾಗೂ ಸಂಘಸಂಸ್ಥೆಗಳ ನೆರವು ಪಡೆದುಕೊಳ್ಳಲು ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ, ಪೊಲೀಸ್ ಇಲಾಖೆ ಸಿಬ್ಬಂದಿಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯಿರುವ ಸಾರ್ವಜನಿಕರು – ಸಂಘಸಂಸ್ಥೆಗಳಿಗೆ ಅವಕಾಶ ಕಲ್ಪಿಸಿದೆ.

ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಇಚ್ಛಿಸುವ ನಾಗರೀಕರು, ಸಂಘಸಂಸ್ಥೆಗಳ ಸದಸ್ಯರು ಸೆಪ್ಟೆಂಬರ್ 5 ರೊಳಗೆ ಸ್ಥಳೀಯ ಪೊಲೀಸ್ ಠಾಣೆಗಳಿಗೆ ತೆರಳಿ ತಮ್ಮ ಹೆಸರು, ವಾಸ ಸ್ಥಳದ ವಿಳಾಸಕ್ಕೆ ಸಂಬಂಧಿಸಿದ ಮಾಹಿತಿ ನೀಡಿ ನೊಂದಾಯಿಸಿಕೊಳ್ಳಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.

Previous post ಧರ್ಮದ ಬಗ್ಗೆ ಭಾಷಣ ಮಾಡುವವರು ಧರ್ಮವಂತರಾಗಿ ಬದುಕುತ್ತಿಲ್ಲ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಕನ್ನಡ ಭಾಷೆಗೆ ಆದ್ಯತೆ ನೀಡಲು, ರಾಷ್ಟ್ರಕವಿ ಕುವೆಂಪು ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಶಿವಮೊಗ್ಗ ವಿಮಾನ ನಿಲ್ದಾಣ ಟರ್ಮಿನಲ್ ಎದುರು ಪ್ರತಿಭಟನೆ! Next post ಕನ್ನಡ ಭಾಷೆಗೆ ಆದ್ಯತೆ ನೀಡಲು, ರಾಷ್ಟ್ರಕವಿ ಕುವೆಂಪು ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಶಿವಮೊಗ್ಗ ವಿಮಾನ ನಿಲ್ದಾಣ ಟರ್ಮಿನಲ್ ಎದುರು ಪ್ರತಿಭಟನೆ!