ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಶಿವಮೊಗ್ಗ, ಸೆ. 9: ಸಂಚಾರಿ ನಿಯಮಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶನಿವಾರ ಜಿಲ್ಲಾ ಪೊಲೀಸ್ ಇಲಾಖೆಯು ಶಿವಮೊಗ್ಗ ನಗರದಲ್ಲಿ ಬೈಕ್ ಜಾಥಾ ಹಮ್ಮಿಕೊಂಡಿತ್ತು.

ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ ಶಿವಮೊಗ್ಗ, ರೋಡ್ ಥ್ರಿಲ್ಲರ್ಸ್ ಶಿವಮೊಗ್ಗ, ಮಲ್ನಾಡ್ ಟಸ್ಕರ್ಸ್ ಶಿವಮೊಗ್ಗ, ಕೆಟಿಎಂ ಶಿವಮೊಗ್ಗ ಮತ್ತು ಇತರೆ ಕ್ಲಬ್ ಗಳ ಸಹಯೋಗದಲ್ಲಿ ಬೈಕ್ ಜಾಥಾ ಆಯೋಜಿಸಲಾಗಿತ್ತು.

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಕೂಡ ಜಾಥಾದಲ್ಲಿ ಬುಲೆಟ್ ಬೈಕ್ ಓಡಿಸಿ ಗಮನ ಸೆಳೆದರು. ಡಿಎಆರ್ ಮೈದಾನದಿಂದ ಆರಂಭವಾದ ಜಾಥಾವು ಐಬಿ ವೃತ್ತ, ಆಲ್ಕೋಳ ಸರ್ಕಲ್, ವಿನೋಬನಗರ ಪೊಲೀಸ್ ಚೌಕಿ,

ಉಷಾ ನರ್ಸಿಂಗ್ ಹೋಂ ಸರ್ಕಲ್, ಮಹಾವೀರ ಸರ್ಕಲ್, ಕರ್ನಾಟಕ ಸಂಘ, ಹೊಳೆ ಬಸ್ ನಿಲ್ದಾಣ, ಎಂಆರ್’ಎಸ್ ವೃತ್ತ, ನ್ಯೂ ಮಂಡ್ಲಿ, ಗೋಪಾಳ, ಆಲ್ಕೋಳ ವೃತ್ತ, ಐಬಿ ವೃತ್ತದ ಮೂಲಕ ಡಿಐಆರ್ ಮೈದಾನದಲ್ಲಿ ಜಾಥಾ ಅಂತ್ಯಗೊಂಡಿತು.

 ಜಾಥಾದಲ್ಲಿ ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್, ಸುರೇಶ್, ಡಿಎಆರ್ ಆರ್.ಪಿ.ಐ ಪ್ರಶಾಂತ್, ಟ್ರಾಫಿಕ್ ಸರ್ಕಲ್ ಇನ್ಸ್’ಪೆಕ್ಟರ್ ಸಂತೋಷ್ ಕುಮಾರ್ ಸೇರಿದಂತೆ ಬೈಕ್ ಕ್ಲಬ್ ಗಳ ಸದಸ್ಯರು ಉಪಸ್ಥಿತರಿದ್ದರು.

ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ - ಇಬ್ಬರ ಬಂಧನ! ಹೊರವಲಯದ ಪ್ರದೇಶಗಳಲ್ಲಿ ಮುಂದುವರಿದ ಪೊಲೀಸರ ವಿಶೇಷ ಗಸ್ತು ಕಾರ್ಯಾಚರಣೆ! Previous post ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ – ಇಬ್ಬರ ಬಂಧನ!
ಶಿವಮೊಗ್ಗ – ಭದ್ರಾವತಿಯ ವಿವಿಧೆಡೆ ಪೊಲೀಸ್ ಪಥ ಸಂಚಲನ Next post ಶಿವಮೊಗ್ಗ – ಭದ್ರಾವತಿಯ ವಿವಿಧೆಡೆ ಪೊಲೀಸ್ ಪಥ ಸಂಚಲನ