ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ! ಭೂಗತ ಲೋಕಕ್ಕೆ ಪೊಲೀಸರ ಖಡಕ್ ವಾರ್ನಿಂಗ್!!

ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ!

ಭೂಗತ ಲೋಕಕ್ಕೆ ಪೊಲೀಸರ ಖಡಕ್ ವಾರ್ನಿಂಗ್!!

ಶಿವಮೊಗ್ಗ, ಸೆ. 11: ಬೆಳ್ಳಂಬೆಳಿಗ್ಗೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ನೂರಾರು ರೌಡಿಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ, ತಪಾಸಣೆ ನಡೆಸಿದ ಘಟನೆ ಸೋಮವಾರ ನಡೆದಿದೆ.

ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಾಂತಿ – ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಇಲಾಖೆ ಈ ಕಾರ್ಯಾಚರಣೆ ನಡೆಸಿದೆ. ಈ ಮೂಲಕ ಭೂಗತ ಲೋಕಕ್ಕೆ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ!

ಶಿವಮೊಗ್ಗದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಡಿವೈಎಸ್ಪಿ ಬಾಲರಾಜ್, ಸುರೇಶ್ ಅವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಉಳಿದಂತೆ ಭದ್ರಾವತಿಯಲ್ಲಿ ಡಿವೈಎಸ್ಪಿ ನಾಗರಾಜ್, ಸಾಗರದಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ತಿಮ್ಮಣ್ಣನಾಯ್ಕ್,

ಶಿಕಾರಿಪುರ ಡಿವೈಎಸ್ಪಿ ಶಿವಾನಂದ ಮದರಕಂಡಿ, ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಇದರಲ್ಲಿ ಇನ್ಸ್’ಪೆಕ್ಟರ್, ಸಬ್ ಇನ್ಸ್’ಪೆಕ್ಟರ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳ ನೂರಾರು ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ!

ಶಿವಮೊಗ್ಗ ಎ ಉಪ ವಿಭಾಗದಲ್ಲಿ – 39, ಬಿ ಉಪ ವಿಭಾಗದಲ್ಲಿ – 38, ಭದ್ರಾವತಿ ಉಪ ವಿಭಾಗದಲ್ಲಿ – 72, ಸಾಗರ ಉಪ ವಿಭಾಗದಲ್ಲಿ 21, ಶಿಕಾರಿಪುರ ಉಪ ವಿಭಾಗದಲ್ಲಿ 27, ತೀರ್ಥಹಳ್ಳಿ ಉಪ ವಿಭಾಗದಲ್ಲಿ 44 ಸೇರಿದಂತೆ ಒಟ್ಟಾರೆ 241 ರೌಡಿಗಳ ಮನೆಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ.

ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ!

ದಾಳಿಯ ವೇಳೆ ರೌಡಿ ಆಸಾಮಿಗಳ ಕಾರ್ಯ ಚುಟುವಟಿಕೆಯ ಮಾಹಿತಿ ಕಲೆ ಹಾಕಿದ್ದಾರೆ. ಮನೆಗಳಲ್ಲಿ ಮಾದಕ ವಸ್ತು, ಮಾರಕಾಸ್ತ್ರ ಹೊಂದಿದ್ದಾರೆಯೇ ಎಂಬುವುದನ್ನು ಪರಿಶೀಲಿಸಿದ್ದಾರೆ.

‘ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ವೇಳೆ ಯಾವುದೇ ಕಾನೂನುಬಾಹಿರ ಚಟುವಟಿಕೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ’ ರೌಡಿಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ತೀರ್ಥಹಳ್ಳಿ : ಬೆಂಗಳೂರಿನ ಯುವಕರಿಬ್ಬರು ನೀರುಪಾಲು! Previous post ತೀರ್ಥಹಳ್ಳಿ : ಬೆಂಗಳೂರಿನ ಯುವಕರಿಬ್ಬರು ನೀರುಪಾಲು!
ಇದೆಂಥಾ ಸ್ಮಾರ್ಟ್ ಸಿಟಿ ಕೆಲಸ : ನಾಗರೀಕರ ಅಮೂಲ್ಯ ತೆರಿಗೆ ಹಣದ ದುಂದು ವ್ಯರ್ಥ..! ವರದಿ : ಬಿ. ರೇಣುಕೇಶ್ Next post ಇದೆಂಥಾ ಸ್ಮಾರ್ಟ್ ಸಿಟಿ ಕೆಲಸ : ನಾಗರೀಕರ ಅಮೂಲ್ಯ ತೆರಿಗೆ ಹಣದ ದುಂದು ವ್ಯರ್ಥ..!