
ಕಾವೇರಿ ನೆಪದಲ್ಲಿ ಬಿಜೆಪಿ-ಜೆಡಿಎಸ್ ರಾಜಕೀಯ : ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಸೆ. 25: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆ ಯಲ್ಲಿ ಹಾಗೆ ಹೇಳಲಿಲ್ಲವಲ್ಲ ಎಂದು ಸಿಎಂ ಪ್ರಶ್ನಿಸಿದರು.
ಪ್ರತಿಭಟನೆಗೆ ಅವಕಾಶವಿದೆ : ಕಾವೇರಿ ನೀರಿನ ಸಂಬಂಧ ನಾಳೆ ಬೆಂಗಳೂರು ಬಂದ್ ಹಾಗೂ ನಾಡಿದ್ದು ಕರ್ನಾಟಕ ಬಂದ್ ಕರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಅದನ್ನು ನಾವು ಹತ್ತಿಕ್ಕಲು ಹೋಗುವುದಿಲ್ಲ ಎಂದು ತಿಳಿಸಿದರು.
ವಾದ ಮಂಡನೆ : ಕಾವೇರಿ ನೀರು ಹರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶ ಇದೆ. ನೀರು ಹರಿಸಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ನಮ್ಮ ಅರ್ಜಿ ವಜಾ ಆಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ನಿರ್ವಹಣಾ ಪ್ರಾಧಿಕಾರ ಎರಡರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೆವು. ಸುಪ್ರೀಂಕೋರ್ಟ್ ನಮ್ಮ ಹಾಗೂ ತಮಿಳುನಾಡಿನ ಅರ್ಜಿಯನ್ನು ತಿರಸ್ಕಾರ ಮಾಡಿದೆ.
ತಮಿಳುನಾಡು 24,000 ಕ್ಯೂಸೆಕ್ಸ್ ನೀರು ಕೇಳಿದ್ದರು. ನಂತರ 7200 ಕ್ಯೂಸೆಕ್ಸ್ ಕೇಳಿದರು. ನಾವು 5000 ಕ್ಯೂಸೆಕ್ಸ್ ನೀರು ಕೂಡ ಕೊಡಲಾಗುವುದಿಲ್ಲ. ನಮ್ಮ ಬಳಿ ನೀರಿಲ್ಲ ಎಂದು ವಾದಿಸಿದ್ದು, ಅದನ್ನು ನ್ಯಾಯಾಲಯ ಒಪ್ಪಿಲ್ಲ. ಪುನಃ ಸೆಪ್ಟೆಂಬರ್ 26 ರಂದು ಸರ್ವೋಚ್ಚ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಲಿದ್ದು. ನಮ್ಮ ವಾದವನ್ನು ಇನ್ನಷ್ಟು ಬಲವಾಗಿ ಮಂಡಿಸಲಾಗುವುದು ಎಂದರು.
More Stories
bengaluru | ಮಲೆನಾಡ ಭಗೀರಥ ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ : ಏ. 25 ರಂದು ಶಿವಮೊಗ್ಗದಲ್ಲಿ ಅಂತ್ಯ ಸಂಸ್ಕಾರ
Former Minister Begane Ramaiah passes away : Funeral to be held in Shivamogga on April 25
ಮಲೆನಾಡ ಭಗೀರಥ ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ : ಏ. 25 ರಂದು ಶಿವಮೊಗ್ಗದಲ್ಲಿ ಅಂತ್ಯ ಸಂಸ್ಕಾರ
bengaluru | ಬೆಂಗಳೂರು | ಜನಿವಾರ ಪ್ರಕರಣ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
bengaluru | Bangalore | Janivara case: What did CM Siddaramaiah say?
bengaluru | ಬೆಂಗಳೂರು | ಜನಿವಾರ ಪ್ರಕರಣ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
bengaluru | ಬೆಂಗಳೂರು : ನಿವೃತ್ತ ಡಿಜಿ – ಐಜಿಪಿ ಓಂ ಪ್ರಕಾಶ್ ರಾವ್ ಭೀಕರ ಕೊಲೆ!
Retired DG-IGP Om Prakash Rao who served as SP in Shimoga brutally murdered!
ಶಿವಮೊಗ್ಗದಲ್ಲಿ ಎಸ್ಪಿ ಆಗಿ ಕಾರ್ಯನಿರ್ವಹಿಸಿದ್ದ ನಿವೃತ್ತ ಡಿಜಿ – ಐಜಿಪಿ ಓಂ ಪ್ರಕಾಶ್ ರಾವ್ ಭೀಕರ ಕೊಲೆ!
bengaluru | ಗುತ್ತಿಗೆ ಪೌರ ಕಾರ್ಮಿಕರು, ವಾಹನ ಚಾಲಕರ ಸೇವೆ ಕಾಯಂ : ಸಿಎಂ ಮಹತ್ವದ ಘೋಷಣೆ!
Bengaluru | Permanent service for civic workers vehicle drivers: CM makes important announcement!
bengaluru | ಪೌರ ಕಾರ್ಮಿಕರು ವಾಹನ ಚಾಲಕರ ಸೇವೆ ಕಾಯಂ : ಸಿಎಂ ಮಹತ್ವದ ಘೋಷಣೆ!
milk price hike | ನಂದಿನಿ ಹಾಲಿನ ದರ ಹೆಚ್ಚಳ : ಗ್ರಾಹಕರಿಗೆ ಮತ್ತಷ್ಟು ಹೊರೆ!
milk price hike | Nandini milk price hike: More burden on consumers!
milk price hike | ನಂದಿನಿ ಹಾಲಿನ ದರ ಹೆಚ್ಚಳ : ಗ್ರಾಹಕರಿಗೆ ಮತ್ತಷ್ಟು ಹೊರೆ!
rain alert | ಮಾ. 22 ರಿಂದ 25 ರವರೆಗೆ ವಿವಿಧೆಡೆ ಮಳೆ ಮುನ್ಸೂಚನೆ!
Rain forecast for various places from March 22 nd to 25th!
rain alert | ಮಾ. 22 ರಿಂದ 25 ರವರೆಗೆ ವಿವಿಧೆಡೆ ಮಳೆ ಮುನ್ಸೂಚನೆ!