ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಪೊಲೀಸ್ ಸರ್ಪಗಾವಲು!

ಶಿವಮೊಗ್ಗ, ಸೆ. 27: ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಗುರುವಾರ ನಡೆಯಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ‌. ಭದ್ರತಾ ಕಾರ್ಯಕ್ಕೆ ಸಾವಿರಾರು ಪೊಲೀಸರ ನಿಯೋಜಿಸಲಾಗುತ್ತಿದೆ.

5 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 14 ಪೊಲೀಸ್  ಉಪಾಧೀಕ್ಷಕರು, 40 ಪೋಲಿಸ್ ನಿರೀಕ್ಷಕರು, 75 ಪೊಲೀಸ್ ಉಪ ನಿರೀಕ್ಷಕರು, 2,500 ಎಎಸ್ಐ, ಹೆಚ್.ಸಿ, ಪಿಸಿ ಮತ್ತು ಹೋಂ ಗಾರ್ಡ್ ಸಿಬ್ಬಂದಿಗಳು,

10 ಡಿಎಆರ್ ತುಕಡಿ, 15 ಕೆಎಸ್ಆರ್.ಪಿ ತುಕಡಿ, 02 ಆರ್.ಎ.ಎಫ್ ಪಡೆ, 100 ವಿಡಿಯೋ ಕ್ಯಾಮರಾಗಳು ಮತ್ತು 8 ಡ್ರೋಣ್ ಕ್ಯಾಮರಾಗಳನ್ನು  ನಿಯೋಜಿಸಲಾಗಿರುತ್ತದೆ ಎಂದು ಪೊಲೀಸ್ ಇಲಾಖೆಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಮೆರವಣಿಗೆ ಮಾರ್ಗ : ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಲಿದೆ. ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧೀ ಬಜಾರ್ ಮುಖ್ಯ ರಸ್ತೆ, ಎಸ್.ಎನ್. ಸರ್ಕಲ್, ಬಿ.ಹೆಚ್ ರಸ್ತೆ ಮುಖಾಂತರ ಎ.ಎ ಸರ್ಕಲ್, ನೆಹರು ರಸ್ತೆ ಮುಖಾಂತರವಾಗಿ ಗೋಪಿ ಸರ್ಕಲ್, ದುರ್ಗಿಗುಡಿ ಮುಖ್ಯ ರಸ್ತೆಯಿಂದ ಜೈಲ್ ಸರ್ಕಲ್,

ಕುವೆಂಪು ರಸ್ತೆ ಮಾರ್ಗವಾಗಿ ಶಿವಮೂರ್ತಿ ಸರ್ಕಲ್, ಸವಳಂಗ ಮುಖ್ಯ ರಸ್ತೆ ಮಾರ್ಗವಾಗಿ ಮಹಾವೀರ್ ಸರ್ಕಲ್, ಡಿ.ವಿ.ಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಬಿ.ಹೆಚ್ ರಸ್ತೆ, ಪೊಲೀಸ್ ಕಾರ್ನರ್, ಕೋಟೆ ಪೊಲೀಸ್ ಠಾಣೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಬಳಿಯ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗತ್ತದೆ.

2000 ರೂ. ನೋಟು ಬದಲಾವಣೆ : ಸಮೀಪಿಸುತ್ತಿರುವ ಸೆ. 30 ರ ಗಡುವು! Previous post 2000 ರೂ. ನೋಟು ಬದಲಾವಣೆ : ಸಮೀಪಿಸುತ್ತಿರುವ ಸೆ. 30 ರ ಗಡುವು!
ಬಿಜೆಪಿ ಜೊತೆ ಮೈತ್ರಿ : ಜೆಡಿಎಸ್ ಪಕ್ಷದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ! Next post ಬಿಜೆಪಿ ಜೊತೆ ಮೈತ್ರಿ : ಜೆಡಿಎಸ್ ಪಕ್ಷದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ!