
ಭೀಕರ ರಸ್ತೆ ಅಪಘಾತ : ಮೂವರು ಕಾಲೇಜ್ ವಿದ್ಯಾರ್ಥಿಗಳ ದಾರುಣ ಸಾವು – ಓರ್ವನಿಗೆ ಗಂಭೀರ ಗಾಯ!
ಶಿವಮೊಗ್ಗ, ಅ. 1: ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೈಮರ – ಅರಹತೊಳಲು ಗ್ರಾಮಗಳ ನಡುವೆ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಬೈಕ್ ವೊಂದರಲ್ಲಿದ್ದ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟು ಮತ್ತೊಂದು ಬೈಕ್ ನಲ್ಲಿದ್ದ ಯುವಕ ಗಾಯಗೊಂಡ ಘಟನೆ ನಡೆದಿದೆ.
ಹಳೇ ಜಂಬರಘಟ್ಟ ಗ್ರಾಮದ ನಿವಾಸಿಗಳಾದ ವಿಕಾಸ್ (18), ಯಶವಂತ್ (18) ಹಾಗೂ ಶಶಾಂಕ್ (18) ಮೃತಪಟ್ಟ ಯುವಕರೆಂದು ಗುರುತಿಸಲಾಗಿದೆ. ಮೂವರು ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಗಗನ್ ಎಂಬ ಯುವಕನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿಯನ್ನು ಓವರ್ ಟೇಕ್ ಮಾಡುವ ವೇಳೆ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಮೂವರು ಯುವಕರು ಲಾರಿಯಡಿ ಬಿದ್ದಿದ್ದಾರೆ. ಮತ್ತೊಂದು ಬೈಕ್ ನಲ್ಲಿದ್ದ ಯುವಕ ಮತ್ತೊಂದು ಬದಿ ಬಿದ್ದಿದ್ದಾನೆ ಎಂದು ಹೇಳಲಾಗಿದೆ. ಘಟನೆಯ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಅಪಘಾತದ ಕುರಿತಂತೆ ಇನ್ನಷ್ಟೆ ಹೆಚ್ಚಿವ ವಿವರಗಳು ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲಿಸಿದ್ದಾರೆ.
More Stories
ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು!
ಶಿವಮೊಗ್ಗ, ಆ. 21: ಅಪರಿಚಿತ ದುಷ್ಕರ್ಮಿಗಳು ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಧ್ವಂಸಗೊಳಿಸಿರುವ ಘಟನೆ, ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದ್ದು, ಸೋಮವಾರ...
ಶಿವಮೊಗ್ಗ : ಆ.11 – 12 ರಂದು ಆಯನೂರು, ಕುಂಸಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಹೊಸದಾಗಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ನಿರ್ಮಿಸಲಾಗುತ್ತಿದ್ದು, ಟ್ಯಾಪಿಂಗ್ ಗೋಪುರದ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುವ ಈ ಕೆಳಕಂಡ ಗ್ರಾಮಗಳಲ್ಲಿ 11-08-2023 ಮತ್ತು 12-08-2023 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ : ಸೋಗಾನೆ, ಬಿದರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೇ 21 ರಂದು ವಿದ್ಯುತ್ ವ್ಯತ್ಯಯ!
ಶಿವಮೊಗ್ಗ, ಮೇ.19: ಶಿವಮೊಗ್ಗದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಮೇ 21 ರಂದು ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.