
ಶಿವಮೊಗ್ಗ ನಗರಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ!
ಶಿವಮೊಗ್ಗ, ಅ. 2: ಶಿವಮೊಗ್ಗದ ಶಾಂತಿನಗರದಲ್ಲಿ ಭಾನುವಾರ ಸಂಜೆ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ನಗರಾದ್ಯಂತ ಶಾಂತಿ – ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ, ಅ. 1 ರ ಮಧ್ಯರಾತ್ರಿ 12 ಗಂಟೆಯಿಂದ ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಸೂಕ್ತ ಸಹಕಾರ ನೀಡಬೇಕು ಎಂದು ಡಿಸಿ ಮನವಿ ಮಾಡಿದ್ದಾರೆ.
ನಿಬಂಧನೆಗಳು : ನಿಷೇಧಾಜ್ಞೆ ವೇಳೆ 5 ಜನರು ಹಾಗೂ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು ಮತ್ತು ಓಡಾಡುವುದನ್ನು ನಿರ್ಬಂಧಿಸಲಾಗಿದೆ. ನಿಷೇಧಾಜ್ಞೆ ವೇಳೆ ಯಾವುದೇ ಪ್ರತಿಭಟನೆ, ಮೆರವಣಿಗೆ, ಸಭೆ-ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ.
ಯಾವುದೇ ರೀತಿಯ ಘೋಷಣೆ ಕೂಗುವುದು, ಪ್ರಚೋದನಕಾರಿ ಹೇಳಿಕೆ ನೀಡುವುದು, ಪ್ರಚೋದನಕಾರಿ ಫ್ಲೆಕ್ಸ್, ಬಂಟಿಂಗ್ಸ್, ಬ್ಯಾನರ್, ಕಟ್ಟುವುದನ್ನು ನಿರ್ಬಂಧಿಸಲಾಗಿದೆ. ಯಾವುದೇ ರೀತಿಯ ಮಾರಕಾಸ್ತ್ರ ಹಿಡಿದು ಓಡಾಡುವಂತಿಲ್ಲ. ಸ್ಫೋಟಕ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ.
ಈ ಹಿಂದೆ ಪೂರ್ವಾನುಮತಿ ಪಡೆದು ನಿಗದಿಯಾದಂತ ಕಾರ್ಯಕ್ರಮಗಳನ್ನು ನಡೆಸಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ.
More Stories
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರ ಅಕ್ರಮ ಮರಳು ಲೂಟಿಗೆ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?
shimoga | A temporary break in illegal sand looting after the case of the female officer: Does the administration need to wake up?
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರಕ ಅಕ್ರಮ ಮರಳು ಲೂಟಿಗೆ ತಾತ್ಕಾಲಿಕ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?