ಚಿರತೆ ಹಾವಳಿಗೆ ಭಯಭೀತರಾದ ಶಿವಮೊಗ್ಗ ತಾಲೂಕು ಗೆಜ್ಜೇನಹಳ್ಳಿ ಗ್ರಾಮಸ್ಥರು! : ಗಮನಹರಿಸುವುದೆ ಅರಣ್ಯ ಇಲಾಖೆ?
ಶಿವಮೊಗ್ಗ, ನ. 4: ಶಿವಮೊಗ್ಗ ನಗರದ ಹೊರವಲಯ ಗೆಜ್ಜೇನಹಳ್ಳಿ ಗ್ರಾಮದ ಹೊರವಲಯದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಯೊಂದು ಸಾಕು ಪ್ರಾಣಿಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದೆ. ಜನ ವಸತಿ ಪ್ರದೇಶದ ಬಳಿಯೇ ಸಂಚರಿಸುತ್ತಿದೆ ಎಂದು ಸ್ಥಳೀಯ ಗ್ರಾಮಸ್ಥರು ತಿಳಿಸಿದ್ದಾರೆ.
‘ಕಳೆದ ಹಲವು ದಿನಗಳಿಂದ ಜಾನುವಾರುಗಳು ಹಾಗೂ ನಾಯಿಗಳ ಮೇಲೆ ಚಿರತೆ ನಿರಂತರವಾಗಿ ದಾಳಿ ನಡೆಸುತ್ತಿದೆ. ಈಗಾಗಲೇ ಗ್ರಾಮದ ಹಲವು ಆಕಳುಗಳು ಮತ್ತು ನಾಯಿಗಳು ಚಿರತೆ ದಾಳಿಗೆ ಬಲಿಯಾಗಿವೆ. ಇತ್ತೀಚೆಗೆ ಆಕಳು ಮತ್ತು ಕರುವೊಂದರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ದೂದ್ಯನಾಯ್ಕ್ ಅವರು ತಿಳಿಸಿದ್ದಾರೆ.
ಮತ್ತೊಂದೆಡೆ, ಗುರುವಾರ ರಾತ್ರಿ ಸೋಮಿನಕೊಪ್ಪ ಗ್ರಾಮದ ಹೊರವಲಯದ ಬಳಿಯೂ ಚಿರತೆಯೊಂದು ನಾಯಿಯನ್ನು ಬೆನ್ನಟ್ಟಿ ಹೋಗುತ್ತಿರುವುದನ್ನು ಸ್ಥಳೀಯ ಕಟ್ಟಡ ಕಾರ್ಮಿಕರೋರ್ವರು ನೋಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಜನ ವಸತಿ ಪ್ರದೇಶಗಳ ಸಮೀಪದಲ್ಲಿಯೇ ಚಿರತೆ ಓಡಾಡುತ್ತಿದೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ನಾಗರೀಕರ ಮೇಲೆ ಚಿರತೆ ದಾಳಿ ಮಾಡುವ ಮುನ್ನ ಅರಣ್ಯ ಇಲಾಖೆಯು ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವುದರ ಜೊತೆಗೆ, ಚಿರತೆ ಸೆರೆ ಹಿಡಿಯಲು ಕ್ರಮಕೈಗೊಳ್ಳಬೇಕು ಎಂದು ದೂದ್ಯನಾಯ್ಕ್ ಅವರು ಆಗ್ರಹಿಸಿದ್ದಾರೆ.
One thought on “ಚಿರತೆ ಹಾವಳಿಗೆ ಭಯಭೀತರಾದ ಶಿವಮೊಗ್ಗ ತಾಲೂಕು ಗೆಜ್ಜೇನಹಳ್ಳಿ ಗ್ರಾಮಸ್ಥರು! : ಗಮನಹರಿಸುವುದೆ ಅರಣ್ಯ ಇಲಾಖೆ?”
Comments are closed.
More Stories
shimoga city bus | ಮುಖಂಡ ಬಿ ವಿ ಶ್ರೀನಿವಾಸ್ ಪ್ರಯತ್ನದ ಫಲ : ಶಿವಮೊಗ್ಗದ ಬೊಮ್ಮನಕಟ್ಟೆಗೆ ಸರ್ಕಾರಿ ಸಿಟಿ ಬಸ್ ಸಂಚಾರ ಆರಂಭ!
shimoga city bus | ಮುಖಂಡ ಬಿ ವಿ ಶ್ರೀನಿವಾಸ್ ಪ್ರಯತ್ನದ ಫಲ : ಶಿವಮೊಗ್ಗದ ಬೊಮ್ಮನಕಟ್ಟೆಗೆ ಸರ್ಕಾರಿ ಸಿಟಿ ಬಸ್ ಸಂಚಾರ ಆರಂಭ!
shimoga city bus | The result of the efforts of leader BV Srinivas: Government city bus traffic has started to Bommanakatte in Shimoga!
shimoga | ಶಿವಮೊಗ್ಗ | ಗಾಂಜಾ ಮಾರಾಟ ಪ್ರಕರಣ : ತಾಯಿ, ಮಗನಿಗೆ ಜೈಲು ಶಿಕ್ಷೆ!
shimoga | Shivamogga | Marijuana sale case: Mother – son sentenced to prison!
shimoga | ಶಿವಮೊಗ್ಗ | ಗಾಂಜಾ ಮಾರಾಟ ಪ್ರಕರಣ : ತಾಯಿ ಮಗನಿಗೆ ಜೈಲು ಶಿಕ್ಷೆ!
agumbe | ಮಳೆಯಿಂದ ಆಗುಂಬೆ ಘಾಟಿ ರಾಷ್ಟ್ರೀಯ ಹೆದ್ಧಾರಿಯಲ್ಲಿ ಭೂ ಕುಸಿತ : ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ!
agumbe | Landslide on Agumbe Ghati National Highway due to rain: Restrictions on heavy vehicle traffic!
agumbe | ಮಳೆಯಿಂದ ಆಗುಂಬೆ ಘಾಟಿ ರಾಷ್ಟ್ರೀಯ ಹೆದ್ಧಾರಿಯಲ್ಲಿ ಭೂ ಕುಸಿತ : ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ!
shimoga | ಶಿವಮೊಗ್ಗ : ಜೂ. 17 – 18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shivamogga : Power outages in various places on June 17-18!
ಶಿವಮೊಗ್ಗ : ಜೂ. 17 – 18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
bhadravati | ಭದ್ರಾವತಿಯಲ್ಲಿ ಲೋಕಾಯುಕ್ತ ಸಾರ್ವಜನಿಕ ಕುಂದುಕೊರತೆ ಸಭೆ
Lokayukta Public Grievances Meeting in Bhadravati
bhadravati | ಭದ್ರಾವತಿಯಲ್ಲಿ ಲೋಕಾಯುಕ್ತ ಸಾರ್ವಜನಿಕ ಕುಂದುಕೊರತೆ ಸಭೆ
shimoga rain | ಮಲೆನಾಡಲ್ಲಿ ಮುಂಗಾರು ಮಳೆ : ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಂಗಳ ಒಳಹರಿವೆಷ್ಟು?
Monsoon rains in Malnad: Increase in inflow to Tunga, Bhadra, and Linganamakki dams!
ಮಲೆನಾಡಲ್ಲಿ ಮುಂಗಾರು ಮಳೆ : ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಂಗಳ ಒಳಹರಿವಿನಲ್ಲಿ ಹೆಚ್ಚಳ!
ಇನ್ನೂ ಜಾಗಕ್ಕ್ಕೆ ಭೇಟಿ ಕೊಡದೆ ನಿರ್ಲಕ್ಷ್ಯ ಮಾಸುತ್ತಿರುವುದು ಸರ್ಕಾರಿ ನೌಕರರ ಬೇಜವಾಬ್ದಾರಿತನ ತೋರಿಸಿತ್ತದೆ.. ಜನಸಂಖ್ಯೆ ಕೋಟಿ ಮೇಲೆ ಇದೆ, ಯಾರಾದ್ರೂ ಸಾಯಲಿ, ಹೆಂಗಿದ್ರು ಸರ್ಕಾರ ಪರಿಹಾರ ಕೊಡುತ್ತೆ ಅನ್ನುವ ಬಂಡ ಧೈರ್ಯ